Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿತ್ತಾಡಿಕೊಂಡು ಠಾಣೆ ಮೆಟ್ಟಿಲೇರಿದ್ದ ಪೂನಂ ಪಾಂಡೆ ದಂಪತಿ ಈಗ ಮತ್ತೆ ಒಂದು!
ನಟಿ, ಮಾಡೆಲ್ ಪೂನಂ ಪಾಂಡೆ ಮತ್ತು ಪತಿ ಮೂರು ದಿನದ ಹಿಂದಷ್ಟೆ ಕಿತ್ತಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು, ಆದರೆ ಈಗ ಮತ್ತೆ ಜತೆಯಾಗಿದ್ದಾರೆ.
ಸೆಪ್ಟೆಂಬರ್ 22 ರಂದು ಪತಿ ಸ್ಯಾಂ ಬಾಂಬೆ ತಮ್ಮ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿ ಪೂನಂ ಪಾಂಡೆ ಗೋವಾ ಪೊಲೀಸರಿಗೆ ದೂರು ನೀಡಿದ್ದರು.
ಆದರೆ ಈಗ ಈ ಹೊಸ ಜೋಡಿ ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಂಡಿದ್ದಾರಂತೆ. ಇನ್ನುಮುಂದೆ ನಾವಿಬ್ಬರೂ ಜೊತೆಯಾಗಿ ಬಾಳುತ್ತೇವೆ ಎಂದಿದ್ದಾರೆ ಪೂನಂ ಪಾಂಡೆ ಮತ್ತು ಸ್ಯಾಂ ಬಾಂಬೆ.
ಸೆಪ್ಟೆಂಬರ್ 11 ರಂದು ವಿವಾಹವಾಗಿದ್ದ ಪೂನಂ ಪಾಂಡೆ
ನಟಿ ಪೂನಂ ಪಾಂಡೆ ಹಾಗೂ ಸ್ಯಾಮ್ ಬಾಂಬೆ ಸೆಪ್ಟೆಂಬರ್ 11 ರಂದು ವಿವಾಹವಾಗಿದ್ದಾರು. ವಿವಾಹದ ನಂತರ ಇಬ್ಬರೂ ಸಹ ಗೋವಾಕ್ಕೆ ಬಂದಿದ್ದರು. ಅಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಅಲ್ಲಿಯೇ ಇಬ್ಬರ ನಡುವೆ ಜಗಳವಾಗಿತ್ತು.
ಸ್ಯಾಮ್ ಬಾಂಬೆಯನ್ನು ಬಂಧಿಸಿದ್ದ ಗೋವಾ ಪೊಲೀಸರು
ಸೆಪ್ಟೆಂಬರ್ 22 ರಂದು ಗೋವಾದ ಕೊಕೋನ್ ಪೊಲೀಸ್ ಠಾಣೆಯಲ್ಲಿ ಪೂನಂ ಪಾಂಡೆ ದೂರು ನೀಡಿದ್ದರು. ತಮ್ಮ ಪತಿ ತಮ್ಮ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಲೈಂಗಿನ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಸೆಪ್ಟೆಂಬರ್ 23 ರಂದು ಸ್ಯಾಮ್ ಬಾಂಬೆಗೆ ಜಾಮೀನು
ದೂರಿನನ್ವಯ ಪೊಲೀಸರು ಸ್ಯಾಮ್ ಬಾಂಬೆಯನ್ನು ಬಂಧಿಸಿದ್ದರು. ಸೆಪ್ಟೆಂಬರ್ 23 ರಂದು ಸ್ಯಾಮ್ ಬಾಂಬೆಗೆ ಜಾಮೀನು ಸಿಕ್ಕಿ ಹೊರಗೆ ಬಂದಿದ್ದರು. ಆ ನಂತರ ಈಗ ಇಬ್ಬರೂ ಸಹ ಮತ್ತೆ ಜೊತೆಯಾಗಿರುವುದಾಗಿ ಹೇಳಿದ್ದಾರೆ.
Recommended Video
ಭಿನ್ನಾಭಿಪ್ರಾಯ ಬಗೆಹರಿಸಿಕೊಂಡಿದ್ದೇವೆ: ಪೂನಂ ಪಾಂಡೆ
ನಾವಿಬ್ಬರೂ ಪರಸ್ಪರ ಒಬ್ಬರನ್ನೊಬ್ಬರು ವಿಪರೀತ ಪ್ರೀತಿಸುತ್ತೇವೆ, ನಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಂಡಿದ್ದೇವೆ, ನಾವಿಬ್ಬರೂ ನಮ್ಮ ಜೀವನವನ್ನು ಮತ್ತೊಮ್ಮೆ ಹೊಸದಾಗಿ ಪ್ರಾರಂಭಿಸಲಿದ್ದೇವೆ ಎಂದಿದ್ದಾರೆ ಪೂನಂ ಪಾಂಡೆ. ಸ್ಯಾಮ್ ಬಾಂಬೆ ಸಹ ಇದನ್ನೇ ಹೇಳಿದ್ದಾರೆ.