Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರಳ ಜನತೆಯ ನೆರವಿಗೆ ಬಂದ ನಟಿ ಪೂನಂ ಪಾಂಡೆ
ಭೀಕರ ಮಳೆ, ಪ್ರವಾಹಕ್ಕೆ ದೇವರನಾಡು ಕೇರಳ ನಲುಗಿ ಹೋಗಿದೆ. ಎಷ್ಟೋ ಜನರು ಪ್ರಾಣ, ಎಷ್ಟೋ ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ದುಖಃದಲ್ಲಿ ಇರುವ ಈ ಜನತೆಗೆ ಈಗ ನಟಿ ಪೂನಂ ಪಾಂಡೆ ನೆರವಾಗಿದ್ದಾರೆ.
ಈಗಾಗಲೇ ಕನ್ನಡದ ಕೆಲ ನಟರ ಜೊತೆಗೆ ಇತರ ಚಿತ್ರರಂಗದ ಕಲಾವಿದರು ಸಹ ಕೇರಳ ಪುನರ್ ನಿರ್ಮಾಣಕ್ಕೆ ಹಣ ಸಹಾಯ ಮಾಡಿದ್ದರು. ಈಗ ನಟಿ ಪೂನಂ ಪಾಂಡೆ ಕೂಡ ತನ್ನ ಒಂದು ಸಿನಿಮಾದ ಸಂಭಾವನೆಯನ್ನು ಕೇರಳ ಜನತೆಗೆ ನೀಡಿದ್ದಾರೆ. ಆದರೆ, ಆ ಚಿತ್ರಕ್ಕೆ ಅವರು ತೆಗೆದುಕೊಂಡಿದ್ದ ಸಂಭಾವನೆಯ ಮೊತ್ತ ತಿಳಿದಿಲ್ಲ.
ಕೊಡಗಿನ ಮಕ್ಕಳಿಗೆ ಹೃದಯಪೂರ್ವಕವಾಗಿ ನೆರವಾದ ಕನ್ನಡ ಸಿನಿತಾರೆಯರು
ಸದ್ಯ ಪೂನಂ ಪಾಂಡೆಗೆ ಸಿನಿಮಾ ಅವಕಾಶಗಳು ಕಡಿಮೆ ಇವೆ. ಈಗ ಅವರು 'ಲೇಡಿ ಗಬ್ಬರ್ ಸಿಂಗ್' ಎನ್ನುವ ತೆಲುಗು ಸಿನಿಮಾ ಮಾಡುತ್ತಿದ್ದಾರೆ. ಹೀಗಿದ್ದರೂ ಈ ಸಿನಿಮಾದ ನಟನೆಗಾಗಿ ಅವರು ತೆಗೆದುಕೊಂಡಿದ್ದ ಪೂರ್ಣ ಸಂಭಾವನೆಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. ಪೂನಂ ಮಾಡಿದ ಈ ಕೆಲಸವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ.
ಕೇರಳ ಜನತೆಗಾಗಿ ಗರಿಷ್ಠ ಮೊತ್ತ ನೀಡಿದ್ರಾ ಸನ್ನಿ: ನೀಲಿತಾರೆಯ ಈ ಕೆಲಸಕ್ಕೆ ಭಾರಿ ಮೆಚ್ಚುಗೆ.!
ಅಂದಹಾಗೆ, ಇತ್ತೀಚಿಗೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಕೂಡ ಕೇರಳ ಜನತೆಯ ನೆರವಿಗೆ 5 ಕೋಟಿ ಹಣವನ್ನು ನೀಡಿದ್ದರು.