Don't Miss!
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಟೀಂ ಇಂಡಿಯಾ ಗೆದ್ದರೆ ಮತ್ತೆ ಬೆತ್ತಲಾಗುತ್ತೇನೆ ಎಂದು ಹೇಳಬೇಕಾ?' ಪೂನಂ ಶಾಕಿಂಗ್ ಹೇಳಿಕೆ
ಹಾಟ್ ನಟಿ ಪೂನಂ ಪಾಂಡೆ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಹೆಚ್ಚು ಸುದ್ದಿಯಲ್ಲಿದ್ದವರು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಪೂನಂ ಬೋಲ್ಡ್ ಫೋಟೋ, ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ.
ಇದೀಗ ಮತ್ತೆ ಪೂನಂ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಟೀಂ ಇಂಡಿಯಾ ವಿಶ್ವಕಪ್ ಗೆದ್ದರೆ ಬೆತ್ತಲಾಗುವುದಾಗಿ ಹೇಳಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಬೋಲ್ಡ್ ಹೇಳಿಕೆ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದ ಪೂನಂ ಇದೀಗ ಮತ್ತದೆ ಹೇಳಿಕೆಯನ್ನು ರಿಪೀಟ್ ಮಾಡಿದ್ದಾರೆ.
ಟೀಂ ಇಂಡಿಯಾ, ನ್ಯೂಜಿಲ್ಯಾಂಡ್ ವಿರುದ್ಧ ಜಯಗಳಿಸಿದರೆ ಮತ್ತೆ ಬೆತ್ತಲಾಗುತ್ತೇನೆ ಎಂದು ಹೇಳಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡಿ, ಹೆಡ್ ಲೈನ್ ಸ್ಟೋರಿ ಆಗುವ ಅವಕಾಶವನ್ನು ಪೂನಂ ಯಾವತ್ತು ಮಿಸ್ ಮಾಡಿಕೊಳ್ಳುವುದಿಲ್ಲ. ಮದುವೆ ಆಗಿ ಕೆಲವೇ ದಿನಗಳಲ್ಲಿ ಪತಿ ಸ್ಯಾಮ್ ಬಾಂಬೆ ವಿರುದ್ಧ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದ ಪೂನಂ, ಪತಿ ವಿರುದ್ಧ ಹಲ್ಲೆ ಆರೋಪ ಮಾಡಿದ್ದರು. ಬಳಿಕ ಕೊಂಚ ಸೈಲೆಂಟ್ ಆಗಿದ್ದರು.
ಇದೀಗ ಆಂಗ್ಲ ವೆಟ್ ಪೋರ್ಟಲ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪೂನಂ, "ಕ್ರಿಕೆಟ್ ಚಾಲು ಹೈ? ಲಾಗ್ ಕ್ರಿಕೆಟ್ ಖೇಲ್ ರಹೆ ಹೈ? ಒಂದು ವೇಳೆ ಗೆದ್ದರೆ ನಾನು ಖಂಡಿತ ಬಟ್ಟೆ ಬಿಚ್ಚುತ್ತೇನೆ ಎಂದು ಮತ್ತೆ ಹೇಳಬೇಕಾ? ಈ ಬಗ್ಗೆ ನಾನು ಈಗ ಯಾವುದೇ ಸುಳಿವು ನೀಡುವುದಿಲ್ಲ. ಸಾಧ್ಯವಾದರೆ ನಾನು ವಿವಾದ ಮಾಡುವ ಬಗ್ಗೆ ಯೋಚಿಸುತ್ತೇನೆ" ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
Recommended Video
ಪೂನಂ ಪಾಂಡೆ ಪತಿ ಪ್ರತಿಕ್ರಿಯೆ ನೀಡಿ, 'ನಾನು ಬಟ್ಟೆ ಬಿಚ್ಚಬೇಕಾ?' ಎಂದು ಕೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪೂನಾಂ, 'ನೀವು ಕೂಡ ಬಟ್ಟೆ ಬಿಚ್ಚಲು ಬಯಸುತ್ತೀರಾ?' ಎಂದು ಪ್ರಶ್ನೆ ಮಾಡಿದ್ದಾರೆ. ಪೂನಂ ಹೇಳಿಕೆ ಮತ್ತೆ ಅಚ್ಚರಿ ಮೂಡಿಸಿದ್ದು, ಒಂದುವೇಳೆ ಟೀಂ ಇಂಡಿಯಾ ಗೆದ್ದರೆ ಏನು ಮಾಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.