Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನನ್ನ ದೇಶ ಸಂಕಷ್ಟದಲ್ಲಿದೆ ಸಹಾಯ ಮಾಡಿ: ಅಮೆರಿಕ ಅಧ್ಯಕ್ಷರಿಗೆ ಪ್ರಿಯಾಂಕಾ ಮನವಿ
ಭಾರತ ಕೋವಿಡ್-19ನಿಂದ ತತ್ತರಿಸಿ ಹೋಗಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಒದ್ದಾಡುತ್ತಿದ್ದಾರೆ. ಸಾವಿರಾರು ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಭಾರತದ ಈ ಸಂಕಷ್ಟ ಪರಿಸ್ಥಿತಿ ಈಗ ಇಡೀ ವಿಶ್ವದ ಗಮನ ಸೆಳೆದಿದೆ.
Recommended Video
ಈ ಸಮಯದಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ಭಾರತಕ್ಕೆ ಸಹಾಯ ಮಾಡಿ ಎಂದು ಅಮೆರಿಕ ಅಧ್ಯಕ್ಷರನ್ನು ಕೇಳಿಕೊಂಡಿದ್ದಾರೆ. ಪ್ರಿಯಾಂಕಾ ಸದ್ಯ ಪತಿ ನಿಕ್ ಜೋನಸ್ ಜೊತೆ ಅಮೆರಿಕದಲ್ಲಿ ನೆಲೆಸಿದ್ದಾರೆ. ಕೊರೊನಾದಿಂದ ಭಾರತೀಯರು ನರಳುತ್ತಿರುವುದನ್ನು ನೋಡಿ ಪ್ರಿಯಾಂಕಾ ಅಮೆರಿಕ ಅಧ್ಯಕ್ಷರಿಗೆ ಟ್ವೀಟ್ ಮೂಲಕ ಸಹಾಯ ಕೋರಿದ್ದಾರೆ.
ಪ್ರಿಯಾಂಕಾ ಚೋಪ್ರಾ ಇಂಡಿಯನ್ ರೆಸ್ಟೋರೆಂಟ್ ನಲ್ಲಿ ಉಡುಪಿಯ ಬಾಣಸಿಗ: ಮೆನುನಲ್ಲಿ ಏನಿದೆ?
ಹೆಚ್ಚಿನ ಲಸಿಕೆ ನೀಡುವಂತೆ ಕೇಳಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕಾ, 'ನನ್ನ ಹೃದಯ ಛಿದ್ರವಾಗಿದೆ. ಭಾರತ ಕೋವಿಡ್-19ನಿಂದ ನರಳುತ್ತಿದೆ. ಯುಎಸ್ ಅಗತ್ಯಕ್ಕಿಂತ 550ಮಿ ಹೆಚ್ಚಿನ ಲಸಿಕೆಯನ್ನು ಬೇಡಿಕೆ ಇಟ್ಟಿದೆ. ಆದರೆ ನನ್ನ ದೇಶದ ಪರಿಸ್ಥಿತಿ ಸಂಕಷ್ಟದಲ್ಲಿದೆ. ನೀವು ತುರ್ತಾಗಿ ಭಾರತಕ್ಕೆ ಲಸಿಕೆ ಹಂಚಿಕೊಳ್ಳುತ್ತೀರಾ? ಎಂದು ಕೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಜೊ ಬೈಡನ್ ಅವರಿಗೆ ಟ್ಯಾಗ್ ಮಾಡಿದ್ದಾರೆ.
ಪ್ರಿಯಾಂಕಾ ಟ್ವೀಟ್ ಗೆ ಗ್ಲೋಬಲ್ ಸಿಟಿಜನ್ ಪ್ರತಿಕ್ರಿಯೆ ನೀಡಿದೆ. ಲಸಿಕೆ ಸಮಾನತೆ ಬಗ್ಗೆ ಧ್ವನಿ ಎತ್ತಿರುವ ಪ್ರಿಯಾಂಕಾಗೆ ಧನ್ಯವಾದ ತಿಳಿಸಿರುವ ಗ್ಲೋಬಲ್ ಸಿಟಿಜನ್, 'ಆದಷ್ಟು ಬೇಗ ಭಾರತಕ್ಕೆ ಲಸಿಕೆ ನೀಡುತ್ತೀರಾ, ಭಾರತಕ್ಕೆ ತುರ್ತಾಗಿ ಬೇಕಾಗಿದೆ' ಎಂದು ಕೇಳಿಕೊಂಡಿದ್ದಾರೆ.
ಪ್ರಿಯಾಂಕಾ ಚೋಪ್ರಾ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಾತುಗಳು ಹೇಳಿಬರುತ್ತಿದೆ. ಪ್ರಿಯಾಂಕಾ ಚೋಪ್ರಾ ಧೈರ್ಯವನ್ನು ಕೊಂಡಾಡುತ್ತಿದ್ದಾರೆ. ಕೊರೊನಾ ವೈರಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಈ ಸಂಕಷ್ಟದ ಸಮಯದಲ್ಲಿ ಅಗತ್ಯ ಆಸ್ಪತ್ರೆ ಸೇವೆಗೆ ಮನವಿ ಮಾಡುವ ಅನೇಕರಿಗೆ ಸಹಾಯ ಮಾಡುತ್ತಿದ್ದಾರೆ.