Don't Miss!
- Sports PBKS vs MI IPL 2024: ಪಂಜಾಬ್ ರಾಜರಿಗೆ ಮುಂಬೈ ಇಂಡಿಯನ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Automobiles ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ 'ಪದ್ಮಾವತ್' ಗಲಾಟೆ : ಶಾಲಾ ವಾಹನದ ಮೇಲೆ ಕಲ್ಲು ತೂರಾಟ
ದೀಪಿಕಾ ಪಡುಕೋಣೆ ನಟನೆಯ 'ಪದ್ಮಾವತ್' ಸಿನಿಮಾಗೆ ರಿಲೀಸ್ ಭಾಗ್ಯ ಸಿಕ್ಕಿತ್ತು. ನಾಳೆ ಅದಿಕೃತವಾಗಿ ಬಿಡುಗಡೆಯಾಗಬೇಕಿದ್ದ ಈ ಸಿನಿಮಾದ ಪ್ರದರ್ಶನ ಇಂದೇ ಶುರುವಾಗಿತ್ತು. ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಇಂದೇ ಸಿನಿಮಾ ಪ್ರದರ್ಶನ ಆಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯಿಂದ ಮೊದಲ ಶೋ ಶುರುವಾಗಿದೆ.
ಆದರೆ ಮತ್ತೆ 'ಪದ್ಮಾವತ್' ಸಿನಿಮಾದ ಗಲಾಟೆ ಶುರುವಾಗಿದೆ. ಸಿನಿಮಾದ ಪ್ರದರ್ಶನವನ್ನು ವಿರೋಧಿಸಿ ಕೆಲವು ಕಡೆ ಪ್ರತಿಭಟನೆ ಪ್ರಾರಂಭವಾಗಿದೆ. ದೆಹಲಿಯ ಶಾಲಾ ವಾಹನಕ್ಕೆ ಪ್ರತಿಭಟನೆ ಮಾಡುವವರು ಕಲ್ಲು ತೂರಿದ್ದಾರೆ. 'GD Goenka world' ಎಂಬ ಶಾಲಾ ವಾಹನ ಗಾಜು ಚೂರು ಚೂರಾಗಿದ್ದು, ಅದರಲ್ಲಿ ಇದ್ದ ಮಕ್ಕಳಿಗೆ ಯಾವುದೇ ಅಪಾಯ ಆಗಿಲ್ಲ.
ಪದ್ಮಾವತ್ ವಿರುದ್ಧ ಭುಗಿಲೆದ್ದ ಪ್ರತಿಭಟನೆ ಹಿಂಸಾಚಾರ!
ಸಿನಿಮಾಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಹರಿಯಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಸಿನಿಮಾವನ್ನು ಬ್ಯಾನ್ ಮಾಡಲಾಗಿತ್ತು. ಕರ್ನಿ ಸೇನಾ ಎಂಬ ರಜಪೂತ ಗುಂಪು ಎಲ್ಲೆಡೆ ಪ್ರತಿಭಟನೆ ಮಾಡುತ್ತಿದೆ. ಹರಿಯಾಣದ ಅನೇಕ ಚಿತ್ರಗಳು ಚಿತ್ರ ಪ್ರದರ್ಶನ ಮಾಡುವ ಮುಂದೆ ಬರುತ್ತಿಲ್ಲ.
ಇನ್ನು ಬೆಂಗಳೂರಿನಲ್ಲಿ ಇಂದು ಸಂಜೆ 5.30 ರಿಂದ 'ಪದ್ಮಾವತ್' ಸಿನಿಮಾ ಪ್ರದರ್ಶನ ಶುರುವಾಗಿದೆ. ನಾಳೆ ಕರ್ನಾಟಕ ಬಂದ್ ಇರುವ ಕಾರಣ ಚಿತ್ರ ಪ್ರದರ್ಶನ ಇಲ್ಲ. ಉಳಿದಂತೆ ಮತ್ತೆ ಶುಕ್ರವಾರದಿಂದ ಎತ್ತ ಪ್ರಕಾರ ಸಿನಿಮಾ ಶೋ ಇರಲಿದೆ. ಪದ್ಮಾವತ್' ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂಜಯ್ ಲೀಲಾ ಬಸ್ಸಾಲಿ ಕಾಂಬಿನೇಶನ್ ನಲ್ಲಿ ಬರುತ್ತಿರುವ 3ನೇ ಸಿನಿಮಾಗಿದೆ. ಚಿತ್ರದಲ್ಲಿ ನಟ ರಣವೀರ್ ಸಿಂಗ್ ಹಾಗೂ ಶಾಹಿದ್ ಕಪೂರ್ ಕೂಡ ನಟಿಸಿದ್ದಾರೆ.