Don't Miss!
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ 'ಪದ್ಮಾವತ್' ಗಲಾಟೆ : ಶಾಲಾ ವಾಹನದ ಮೇಲೆ ಕಲ್ಲು ತೂರಾಟ
ದೀಪಿಕಾ ಪಡುಕೋಣೆ ನಟನೆಯ 'ಪದ್ಮಾವತ್' ಸಿನಿಮಾಗೆ ರಿಲೀಸ್ ಭಾಗ್ಯ ಸಿಕ್ಕಿತ್ತು. ನಾಳೆ ಅದಿಕೃತವಾಗಿ ಬಿಡುಗಡೆಯಾಗಬೇಕಿದ್ದ ಈ ಸಿನಿಮಾದ ಪ್ರದರ್ಶನ ಇಂದೇ ಶುರುವಾಗಿತ್ತು. ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಇಂದೇ ಸಿನಿಮಾ ಪ್ರದರ್ಶನ ಆಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯಿಂದ ಮೊದಲ ಶೋ ಶುರುವಾಗಿದೆ.
ಆದರೆ ಮತ್ತೆ 'ಪದ್ಮಾವತ್' ಸಿನಿಮಾದ ಗಲಾಟೆ ಶುರುವಾಗಿದೆ. ಸಿನಿಮಾದ ಪ್ರದರ್ಶನವನ್ನು ವಿರೋಧಿಸಿ ಕೆಲವು ಕಡೆ ಪ್ರತಿಭಟನೆ ಪ್ರಾರಂಭವಾಗಿದೆ. ದೆಹಲಿಯ ಶಾಲಾ ವಾಹನಕ್ಕೆ ಪ್ರತಿಭಟನೆ ಮಾಡುವವರು ಕಲ್ಲು ತೂರಿದ್ದಾರೆ. 'GD Goenka world' ಎಂಬ ಶಾಲಾ ವಾಹನ ಗಾಜು ಚೂರು ಚೂರಾಗಿದ್ದು, ಅದರಲ್ಲಿ ಇದ್ದ ಮಕ್ಕಳಿಗೆ ಯಾವುದೇ ಅಪಾಯ ಆಗಿಲ್ಲ.
ಪದ್ಮಾವತ್ ವಿರುದ್ಧ ಭುಗಿಲೆದ್ದ ಪ್ರತಿಭಟನೆ ಹಿಂಸಾಚಾರ!
ಸಿನಿಮಾಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಹರಿಯಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಸಿನಿಮಾವನ್ನು ಬ್ಯಾನ್ ಮಾಡಲಾಗಿತ್ತು. ಕರ್ನಿ ಸೇನಾ ಎಂಬ ರಜಪೂತ ಗುಂಪು ಎಲ್ಲೆಡೆ ಪ್ರತಿಭಟನೆ ಮಾಡುತ್ತಿದೆ. ಹರಿಯಾಣದ ಅನೇಕ ಚಿತ್ರಗಳು ಚಿತ್ರ ಪ್ರದರ್ಶನ ಮಾಡುವ ಮುಂದೆ ಬರುತ್ತಿಲ್ಲ.
ಇನ್ನು ಬೆಂಗಳೂರಿನಲ್ಲಿ ಇಂದು ಸಂಜೆ 5.30 ರಿಂದ 'ಪದ್ಮಾವತ್' ಸಿನಿಮಾ ಪ್ರದರ್ಶನ ಶುರುವಾಗಿದೆ. ನಾಳೆ ಕರ್ನಾಟಕ ಬಂದ್ ಇರುವ ಕಾರಣ ಚಿತ್ರ ಪ್ರದರ್ಶನ ಇಲ್ಲ. ಉಳಿದಂತೆ ಮತ್ತೆ ಶುಕ್ರವಾರದಿಂದ ಎತ್ತ ಪ್ರಕಾರ ಸಿನಿಮಾ ಶೋ ಇರಲಿದೆ. ಪದ್ಮಾವತ್' ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂಜಯ್ ಲೀಲಾ ಬಸ್ಸಾಲಿ ಕಾಂಬಿನೇಶನ್ ನಲ್ಲಿ ಬರುತ್ತಿರುವ 3ನೇ ಸಿನಿಮಾಗಿದೆ. ಚಿತ್ರದಲ್ಲಿ ನಟ ರಣವೀರ್ ಸಿಂಗ್ ಹಾಗೂ ಶಾಹಿದ್ ಕಪೂರ್ ಕೂಡ ನಟಿಸಿದ್ದಾರೆ.