Don't Miss!
- News ಕೋಲಾರ ಟಿಕೆಟ್ ಗಾಗಿ ಫೈಟಿ; ಶಾಸಕರ ರಾಜೀನಾಮೆ ಎಚ್ಚರಿಕೆ - ಡಿಕೆ ಶಿವಕುಮಾರ್ ಏನಂದ್ರು?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Automobiles Bajaj: ಯುವಕರ ಮನಗೆದ್ದಿರುವ ಪಲ್ಸರ್ ಬೈಕ್ಗಳಿವು, ಬೆಲೆ ರೂ.2 ಲಕ್ಷದೊಳಗೆ.. 50 ಕಿ.ಮೀಗಿಂತ ಹೆಚ್ಚಿನ ಮೈಲೇಜ್
- Finance ಬೆಂಗಳೂರಿನ ರಿಯಲ್ ಎಸ್ಟೇಟ್ ಸಂಸ್ಥೆ ಕಾಂಕಾರ್ಡ್ನಿಂದ 100 ಕೋಟಿಗೆ 4.5 ಎಕರೆ ಭೂಮಿ ಸ್ವಾಧೀನ
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಬ್ಬರದ ಆರಂಭದ ನಡುವೆ ಅಲ್ಲಲ್ಲಿ ಪ್ರತಿಭಟನೆಯ ಬಿಸಿ ಎದುರಿಸಿದ 'ಪಠಾಣ್'
ಶಾರುಖ್ ಖಾನ್ ನಟನೆಯ 'ಪಠಾಣ್' ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.
ಸಿನಿಮಾ ಬಿಡುಗಡೆ ಆಗುವ ಕೆಲ ದಿನಗಳ ಮುಂಚಿನಿಂದಲೂ ಸಿನಿಮಾದ ಬಗ್ಗೆ ಕೆಲವು ಹಿಂದು ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದವು. ಅದರಲ್ಲಿಯೂ ಸಿನಿಮಾದ 'ಬೇಷರಮ್ ರಂಗ್' ಹಾಡು ಬಿಡುಗಡೆ ಆದ ಬಳಿಕವಂತೂ ಪ್ರತಿಭಟನೆ ತುಸು ಹೆಚ್ಚಾಗಿತ್ತು.
ಬಿಡುಗಡೆಗೆ ಮೊದಲಿನಿಂದಲೂ ಹಿಂದುಪರ ಸಂಘಟನೆಗಳು ಸಿನಿಮಾವನ್ನು ಬ್ಯಾನ್ ಮಾಡುವಂತೆ ಒತ್ತಾಯಿಸಿದ್ದವು, ಅಂತೆಯೇ ಇಂದು ಬಿಡುಗಡೆಯ ದಿನ ಹಲವೆಡೆ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಸಿನಿಮಾದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ನ ಕೆಲ ಸದಸ್ಯರು 'ಪಠಾಣ್' ಸಿನಿಮಾದ ವಿರುದ್ಧ ಪ್ರತಿಭಟನೆ ಮಾಡಿದ್ದು ಶಾರುಖ್ ಖಾನ್ರ ಪೋಸ್ಟರ್ ಸುಟ್ಟಿದ್ದಾರೆ. ಇನ್ನು ಕಲಬುರ್ಗಿಯಲ್ಲಿ 'ಪಠಾಣ್' ಸಿನಿಮಾ ಪ್ರದರ್ಶಿಸುತ್ತಿದ್ದ ಚಿತ್ರಮಂದಿರಗದ ಮೇಲೆ ಕೆಲ ಹಿಂದೂಪರ ಸಂಘಟನೆಗಳ ಸದಸ್ಯರು ಕಲ್ಲು ತೂರಾಟ ಸಹ ಮಾಡಿದ್ದಾರೆ. ಕಲ್ಲು ತೂರಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಮಾತ್ರವೇ ಅಲ್ಲದೆ ಬಿಹಾರದಲ್ಲಿಯೂ ಕೆಲವು ಕಡೆಗಳಲ್ಲಿ ಹಿಂದುಪರ ಸಂಘಟನೆಗಳು 'ಪಠಾಣ್' ಸಿನಿಮಾದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇಂದೋರ್ನಲ್ಲಿಯೂ ಸಹ ಸಿನಿಮಾದ ವಿರುದ್ದ ಪ್ರತಿಭಟನೆ ನಡೆದಿರುವ ವರದಿಯಾಗಿದೆ.
ಶಾರುಖ್ ಖಾನ್ ಕುರಿತು ಕೆಲ ಹಿಂದೂಪರ ಸಂಘಟನೆಗಳಿಗೆ ಮೊದಲಿನಿಂದಲೂ ಇರುವ ಅಸಮಧಾನ ಅವರ ಪ್ರತಿ ಸಿನಿಮಾದ ಬಿಡುಗಡೆಯ ಸಮಯದಲ್ಲಿ ಹೊರಬರುವುದು ಸಾಮಾನ್ಯ. ಅಂತೆಯೇ 'ಪಠಾಣ್' ಸಿನಿಮಾದ ಸಮಯದಲ್ಲಿಯೂ ಹೊರಬಂದಿದೆ. ಆದರೆ ಇದು ಸಿನಿಮಾದ ಮೇಲೆ ಯಾವುದೇ ಪರಿಣಾಮ ಬೀರಿದಂತಿಲ್ಲ.
'ಪಠಾಣ್' ಸಿನಿಮಾವು ಭಾರತದ ಸೇರಿದಂತೆ ವಿಶ್ವದೆಲ್ಲೆಡೆ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿನಿಮಾ ನೋಡಿದ ಮಂದಿ ಸಿನಿಮಾ ಬ್ಲಾಕ್ ಬಸ್ಟರ್ ಎನ್ನುತ್ತಿದ್ದಾರೆ. ಮೊದಲ ದಿನದ ಕಲೆಕ್ಷನ್ 50 ಕೋಟಿ ದಾಟುವ ನಿರೀಕ್ಷೆ ಇದೆ.
'ಪಠಾಣ್' ಸಿನಿಮಾವು ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಸಿನಿಮಾವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ದೀಪಿಕಾ ಪಡುಕೋನೆ ನಾಯಕಿ, ಜಾನ್ ಅಬ್ರಹಾಂ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಯಶ್ ರಾಜ್ ಫಿಲಮ್ಸ್.