Don't Miss!
- News ಬೆಂಗಳೂರಿನಲ್ಲಿ 647 ಎಕರೆಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಕೆಐಎಡಿಬಿ ಯೋಜನೆ
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ರಾಜೇಶ್ ಖನ್ನಾ ಕೊನೆಯ ಡೈಲಾಗ್
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಎರಡು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದರು. ಫ್ಯಾನ್ ಗಳ ತಯಾರಿಕಾ ಕಂಪನಿಯ ಪ್ರಚಾರ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು. ಈ ಸಂದರ್ಭಲ್ಲಿ ಅವರು ಮಾತನಾಡುತ್ತಾ, ಮೇಲಿನ ಡೈಲಾಗನ್ನು ತನ್ನದೇ ಆದ ಶೈಲಿಯಲ್ಲಿ ಹೇಳಿದರು.
ವಯಸ್ಸು ಹಾಗೂ ಅನಾರೋಗ್ಯದ ಕಾರಣ ಅವರಿಗೆ ನಡೆದಾಡಲೂ ಕಷ್ಟಪಡುತ್ತಿದ್ದರು. ತನ್ನ ಸಹಾಯಕರೊಂದಿಗೆ ಸೂಪರ್ ಸ್ಟಾರ್ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಪ್ರಚಾರದ ಕಾರ್ಯದ ವೇದಿಗೆ ಆಗಮಿಸಿದರು.
ಈ ಫ್ಯಾನ್ ಪ್ರಚಾರ ಕಾರ್ಯಕ್ರಮವನ್ನು ಬೆಂಗಳೂರು ಅಥವಾ ದೆಹಲಿಯಲ್ಲಿ ನಿರ್ವಹಿಸಲು ಕಾರ್ಯಕ್ರಮದ ನಿರ್ವಾಹಕರು ನಿರ್ಧರಿಸಿದ್ದರಂತೆ. ಆದರೆ ರಾಜೇಶ್ ಖನ್ನಾ ಅವರು ಬೆಂಗಳೂರು ನಗರವನ್ನು ಆಯ್ಕೆ ಮಾಡಿದ್ದರು. ಅವರ ಕೊನೆಯ ಬೆಂಗಳೂರು ಭೇಟಿ ಇದು.
ಎಪ್ಪತ್ತು, ಎಂಬತ್ತರ ದಶಕದಲ್ಲಿ ತನ್ನ ಬೆಲ್ ಬಾಟಮ್ ಪ್ಯಾಂಟ್ ಹಾಗೂ ತನ್ನದೇ ಆದ ಹೇರ್ ಸ್ಟೈಲ್ ಮೂಲಕ ಅಪಾರ ಅಭಿಮಾನಿಗಳನ್ನು, ಅದರಲ್ಲೂ ಹೆಂಗೆಳೆಯನ್ನು ಸೆಳೆದ ರಾಜೇಶ್ ಖನ್ನಾ ಮುಂಬೈನಲ್ಲಿ ಬುಧವಾರ (ಜು.19) ಕೊನೆಯುಸಿರೆಳೆದದ್ದು ಗೊತ್ತೇ ಇದೆ.
ರಕ್ತದೊತ್ತಡ ಮತ್ತು ತೀವ್ರ ನಿಶ್ಶಕ್ತಿಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚಿನ ದಿನಗಳಲ್ಲಿ ಮೂರು ಬಾರಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಅನಾರೋಗ್ಯದ ಬಗ್ಗೆ ಅನೇಕ ಗಾಳಿಸುದ್ದಿಗಳು ಹಾರಾಡುತ್ತಿದ್ದಾಗ, ಅವರು ಸೌಖ್ಯದಿಂದಿದ್ದಾರೆ, ಇಲ್ಲಸಲ್ಲದ ಸುದ್ದಿಗಳನ್ನು ಹರಡಬಾರದು ಎಂದು ಕುಟುಂಬದವರು ಕೆಲ ದಿನಗಳ ಹಿಂದೆ ಕೇಳಿದ್ದರು.
ಮುಖ್ಯಮಂತ್ರಿ ಸಂತಾಪ: ಬಾಲಿವುಡ್ ನ ಒಂದು ಕಾಲದ ಸೂಪರ್ ಸ್ಟಾರ್ ರಾಜೇಶ್ ಖನ್ನಾ ನಿಧನಕ್ಕೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವರು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. (ಒನ್ ಇಂಡಿಯಾ ಕನ್ನಡ)