Don't Miss!
- News ನೇಹಾ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ: ಇಂದು ಫಯಾಜ್ ವಶಕ್ಕೆ ಸಾಧ್ಯತೆ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನತೆಗೆ ಸಹಾಯ ಮಾಡಿ, ಮೊದಲು ಆಕ್ಸಿಜನ್ ವಿತರಿಸಿ; ಕಂಗನಾಗೆ ತಿವಿದ ರಾಖಿ ಸಾವಂತ್
ದೇಶದಲ್ಲಿ ಮಹಾಮಾರಿ ಕೊರೊನಾ ತಾಂಡವವಾಡುತ್ತಿದೆ. ಸಾವಿರಾರು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ದೇಶದಲ್ಲಿ ಜನ ಆಸ್ಪತ್ರೆ, ಬೆಡ್, ಆಕ್ಸಿಜನ್ ಅಂತ ನರಳಾಡುತ್ತಿದ್ದಾರೆ. ಕೆಲವರು ಇಂಥ ಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಿದ್ದಾರೆ. ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.
Recommended Video
ಬಾಲಿವುಡ್ನ ಅನೇಕ ಮಂದಿ ನೆರವಿಗೆ ಧಾವಿಸಿದ್ದಾರೆ. ಆಕ್ಸಿಜನ್, ಬೆಡ್, ಆಸ್ಪತ್ರೆ ವ್ಯವಸ್ಥೆ ಮಾಡಿಸುವ ಮೂಲಕ ಕಷ್ಟದಲ್ಲಿರುವವರಿಗೆ ನೆರವಾಗುತ್ತಿದೆ. ನಟಿ ಪ್ರಿಯಾಂಕಾ ಚೋಪ್ರಾ, ಸುಷ್ಮಿತಾ ಸೇನ್, ಅಜಯ್ ದೇವಗನ್ ಹೀಗೆ ಇನ್ನು ಸಾಕಷ್ಟು ಬಾಲಿವುಡ್ ಸೆಲೆಬ್ರಿಟಿಗಳು ಹೋರಾಡುತ್ತಿದ್ದಾರೆ.
ಆಮೀರ್ ಖಾನ್ಗೆ ಕೊರೊನಾ ಎಂದು ಕೇಳಿ ಆಘಾತಗೊಂಡ ರಾಖಿ ಸಾವಂತ್
ಆದರೆ ನಟಿ ಕಂಗನಾ ರಣಾವತ್ ಏನು ಮಾಡುತ್ತಿದ್ದಾರೆ ಎನ್ನುವ ಚರ್ಚೆ ಪ್ರಾರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಪೋಸ್ಟ್ಗಳನ್ನು ಹಾಕುತ್ತಾ, ವಿವಾದಗಳನ್ನು ಸೃಷ್ಟಿಸಿಕೊಳ್ಳುತ್ತಿರುವ ಕಂಗನಾ, ಎಷ್ಟು ಜನಕ್ಕೆ ಸಹಾಯ ಮಾಡಿದ್ದಾರೆ ಎನ್ನುವ ಪ್ರಶ್ನೆ ಎದ್ದಿದೆ.
ಈ ಬಗ್ಗೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ನಟಿ, ಕೋಟಿ ಕೋಟಿ ಹಣ ಇರುವ ಕಂಗನಾ ಅಕ್ಸಿಜನ್ ವ್ಯವಸ್ಥೆ ಮಾಡಿಸಲಿ ಎಂದು ಹೇಳಿದ್ದಾರೆ. ಮುಂಬೈನ ಪತ್ರಕರ್ತರು, 'ಕಂಗನಾ ದೇಶದ ಸ್ಥಿತಿ ಸರಿ ಇಲ್ಲ ಎಂದು ಹೇಳಿದ್ದಾರೆ. ಆಕ್ಸಿಜನ್ ಸಿಗುತ್ತಿಲ್ಲ, ಏನು ಹೇಳುತ್ತೀರಿ ಎಂದು ಕೇಳಿದ ಪ್ರಶ್ನೆಗೆ ರಾಖಿ ಧೈರ್ಯವಾಗಿ ಉತ್ತರಿಸಿದ್ದಾರೆ.
'ಕಂಗನಾ ದಯವಿಟ್ಟು ರಾಷ್ಟ್ರಕ್ಕೆ ಸೇವೆ ಮಾಡಿ. ನಿಮ್ಮ ಬಳಿ ಕೋಟಿ ಕೋಟಿ ಹಣವಿದೆ. ಆಕ್ಸಿಜನ್ ಅನ್ನು ಖರೀದಿಸಿ ದೇಶದ ಜನತೆಗೆ ವಿತರಿಸಿ' ಎಂದು ಹೇಳಿದ್ದಾರೆ. ರಾಖಿ ಸಾವಂತ್ ಇತ್ತೀಚಿಗಷ್ಟೆ ತನ್ನ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಕ್ಯಾನ್ಸರ್ನಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆ ಮಾಡಿಸಿದ್ದಾರೆ.