Don't Miss!
- News ಸಿದ್ದರಾಮಯ್ಯರು ಸಿಎಂ ಆದಾಗ ವಿಜೃಂಭಿಸುವ ದೇಶದ್ರೋಹಿಗಳು: ಶೋಭಾ ಕರಂದ್ಲಾಜೆ ಹೇಳಿದ್ದೇನು?
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಾ ಚಕ್ರವರ್ತಿ ಜೊತೆ ಡ್ರಗ್ ಚಾಟ್ ಮಾಡಿರುವುದಾಗಿ NCB ಮುಂದೆ ಒಪ್ಪಿಕೊಂಡ ರಕುಲ್
ಡ್ರಗ್ಸ್ ಮಾಫಿಯಾ ಜಾಲದ ಬೆನ್ನತ್ತಿರುವ ಎನ್ ಸಿ ಬಿ ಈಗಾಗಲೇ ಅನೇಕರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇನ್ನೂ ಕೆಲವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟಿಯರ ಹೆಸರು ಕೇಳಿಬರುತ್ತಿದ್ದು, ದೀಪಿಕಾ ಪಡುಕೋಣೆ ಸೇರಿದಂತೆ ಅನೇಕರಿಗೆ ಎನ್ ಸಿ ಬಿ ನಮನ್ಸ್ ನೀಡಿದೆ.
ಇಂದು (ಸೆಪ್ಟಂಬರ್ 25) ಎನ್ ಸಿ ಬಿ ವಿಚಾರಣೆಗೆ ಹಾಜರಾಗಿದ್ದ ನಟಿ ರಕುಲ್ ಪ್ರೀತ್ ಸಿಂಗ್, ಈಗಾಗಲೇ ಅರೆಸ್ಟ್ ಆಗಿರುವ ರಿಯಾ ಜೊತೆ ಡ್ರಗ್ಸ್ ಚಾಟ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಟೈಮ್ಸ್ ನೌ ವಾಹಿನಿ ವರದಿ ಮಾಡಿದೆ. ಇಂದು ಬೆಳಗ್ಗೆ 10.30ಕ್ಕೆ ಮುಂಬೈನ ಎನ್ ಸಿ ಬಿ ಅಧಿಕಾರಿಗಳ ಮುಂದೆ ಹಾಜರಾದ ರಕುಲ್ ಪ್ರೀತ್ ಸಿಂಗ್ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಡ್ರಗ್ಸ್ ಪ್ರಕರಣ: ಬಾಲಿವುಡ್ ಸ್ಟಾರ್ ನಟರು ಮೌನವಹಿಸಿದ್ದೇಕೆ?
ರಿಯಾ ಜೊತೆ ಡ್ರಗ್ಸ್ ಚಾಟ್ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುವ ರಕುಲ್, ಡ್ರಗ್ಸ್ ಸೇವಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಯಾವುದೇ ಡ್ರಗ್ಸ್ ಪೆಡ್ಲರ್ ಗಳ ಜೊತೆಯೂ ಸಂಪರ್ಕ ಹೊಂದಿಲ್ಲ ಎಂದಿದ್ದಾರಂತೆ. ಇಂದು ವಿಚಾರಣೆ ಮುಗಿಸಿರುವ ರಕುಲ್ ಅವರನ್ನು ಮತ್ತೆ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಮೊದಲು ರಾಕುಲ್ ಎನ್ ಸಿ ಬಿಯಿಂದ ಯಾವುದೇ ನೋಟಿಸ್ ಬಂದಿಲ್ಲ, ಸುಮ್ಮನೆ ತನ್ನ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಮಾಧ್ಯಮದವರ ವಿರುದ್ಧ ಕಿಡಿ ಕಾರಿದ್ದರು. ಆದರೆ ನಿನ್ನೆ ಗುರುವಾರ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ರಕುಲ್ ಮೌನಕ್ಕೆ ಶರಣಾಗಿದ್ದಾರೆ.
Recommended Video
ಇನ್ನು ಮೂವರು ಸ್ಟಾರ್ ನಟಿಯರಿಗೆ ನೋಟಿಸ್ ನೀಡಿದ್ದು, ನಾಳೆ ಸೆಪ್ಟಂಬರ್ 26ರಂದು ಎನ್ ಸಿ ಬಿ ಮುಂದೆ ಹಾಜರಾಗಲಿದ್ದಾರೆ. ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಎನ್ ಸಿ ಬಿ ವಿಚಾರಣೆ ಎದುರಿಸಲಿದ್ದಾರೆ.