Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಷರತ್ತಿಗೆ ಓಕೆ ಅಂದ್ರೆ 'ಅರ್ಜುನ್ ರೆಡ್ಡಿ' ನಿರ್ದೇಶಕನ ಜೊತೆ ರಣ್ಬೀರ್ ಚಿತ್ರ!
ಅರ್ಜುನ್ ರೆಡ್ಡಿ ನಿರ್ದೇಶಕ ಸಂದಿಪ್ ವಂಗಾ ರೆಡ್ಡಿ ಮತ್ತು ಬಾಲಿವುಡ್ ನಟ ರಣ್ಬೀರ್ ಕಪೂರ್ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಬರಲಿದೆ ಎಂಬ ಚರ್ಚೆ ಸದ್ದು ಮಾಡ್ತಿದೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಸದ್ಯದ ಮಾಹಿತಿ ಪ್ರಕಾರ, ಸಂದೀಪ್ ವಂಗಾ ರೆಡ್ಡಿ ಜೊತೆ ಸಿನಿಮಾ ಮಾಡಲು ರಣ್ಬೀರ್ ಕಪೂರ್ ಮನಸ್ಸು ಮಾಡಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ, ನಿರ್ದೇಶಕರಿಗೆ ಒಂದು ಷರತ್ತು ಹಾಕಿದ್ದಾರೆ ಎನ್ನಲಾಗಿದೆ.
'ಅರ್ಜುನ್ ರೆಡ್ಡಿ' ಅಪ್ಪನಂತಹ ಚಿತ್ರವನ್ನ ಉಪೇಂದ್ರ ಆಗಲೇ ಮಾಡಿದ್ರು: ತೆಲುಗು ನಿರ್ದೇಶಕ
ಸಂದಿಪ್ ವಂಗಾ ರೆಡ್ಡಿ ಅವರು ಮಾಡಲಿರುವ ಸ್ಕ್ರಿಪ್ಟ್ ಬಗ್ಗೆ ಹೆಚ್ಚು ಗಮನ ಹರಿಸಲು ನಿರ್ಧರಿಸಿರುವ ರಣ್ಬೀರ್ ಕಪೂರ್, ''ಸ್ಕ್ರಿಪ್ಟ್ ಮುಗಿದ ಮೇಲೆ ಕಂಪ್ಲೀಟ್ ಆಗಿ ನನಗೆ ವಿವರಿಸಬೇಕು. ಆಮೇಲೆ ನಾನು ಪಕ್ಕಾ ಹೇಳುತ್ತೇನೆ'' ಎಂದು ತಿಳಿಸಿದ್ದಾರಂತೆ.
ಹಾಗಾಗಿ, ಅರ್ಜುನ್ ರೆಡ್ಡಿ ನಿರ್ದೇಶಕರು ಸ್ಕ್ರಿಪ್ಟ್ ಕೆಲಸದಲ್ಲಿ ತೊಡಗಿಕೊಂಡಿದ್ದು ಅದಕ್ಕಾಗಿ ಹೆಚ್ಚು ಫೋಕಸ್ ಮಾಡುತ್ತಿದ್ದಾರಂತೆ. ಮೂಲಗಳ ಪ್ರಕಾರ ಈ ಚಿತ್ರಕ್ಕೆ ಈಗಾಗಲೇ 'ಡೆವಿಲ್' ಎಂದು ಹೆಸರಿಡಲಾಗಿದೆಯಂತೆ.
ಕಿಸ್ಸಿಂಗ್ ದೃಶ್ಯಕ್ಕಾಗಿ 'ಅರ್ಜುನ್ ರೆಡ್ಡಿ' ಬಿಟ್ಟಿದ್ದ ನಟಿ ಒಂದು ತಿಂಗಳು ಕೊರಗಿದರು
ಹತ್ತು ಹದಿನೈದು ದಿನಗಳಲ್ಲಿ ಸ್ಕ್ರಿಪ್ಟ್ ಕೆಲಸ ಮುಗಿಯಲಿದ್ದು, ಬಳಿಕ ಅಧಿಕೃತವಾಗಿ ಸಿನಿಮಾ ಘೋಷಿಸಲು ನಿರ್ಧರಿಸಿದ್ದಾರಂತೆ. ಇದಕ್ಕೂ ಮುಂಚೆ ಈ ಚಿತ್ರಕ್ಕೆ ಮಹೇಶ್ ಬಾಬು ಅವರನ್ನು ಸಂಪರ್ಕಿಸಲಾಗಿತ್ತಂತೆ. ಆದರೆ, ಪ್ರಿನ್ಸ್ ಬ್ಯುಸಿ ಇದ್ದ ಕಾರಣ ಒಪ್ಪಿಕೊಂಡಿಲ್ಲ ಎಂದು ತಿಳಿದು ಬಂದಿದೆ.
ಸಂಜು ಸಿನಿಮಾದ ಸೂಪರ್ ಸಕ್ಸಸ್ ಬಳಿಕ ಬ್ರಹ್ಮಾಸ್ತ್ರ ಸಿನಿಮಾದಲ್ಲಿ ನಟಿಸಿರುವ ರಣ್ಬೀರ್ ಕಪೂರ್, ಯಶ್ ರಾಜ್ ಬ್ಯಾನರ್ ನಲ್ಲೊಂದು ಸಿನಿಮಾ ಮಾಡಲಿದ್ದಾರೆ. ಈ ಚಿತ್ರದಲ್ಲಿ ವಾಣಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ.