Don't Miss!
- Automobiles Maruti Suzuki: ಮಾರುತಿ ಸುಜುಕಿಯ ಅತ್ಯಂತ ಸುರಕ್ಷಿತ ಕಾರುಗಳಿವು.. 8 ಲಕ್ಷ ಆರಂಭಿಕ ಬೆಲೆ
- News BJP-JDS ಮೈತ್ರಿ ಲೋಕಸಭಾ ಚುನಾವಣೆಗಷ್ಟೇ ಸೀಮಿತವೇ; ಮೋದಿ-ದೊಡ್ಡಗೌಡರ ಮಾತುಕತೆಯ ರಹಸ್ಯ ಬಿಚ್ಚಿಟ್ಟ ಯಡಿಯೂರಪ್ಪ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Lifestyle ಚರ್ಚೆ ಹುಟ್ಟುಹಾಕಿದ ಬೆಂಗಳೂರು-ಹೈದರಾಬಾದ್..! ಎರಡರಲ್ಲಿ ವಾಸಯೋಗ್ಯ ನಗರ ಯಾವುದು..?
- Sports ಟಿ20 ವಿಶ್ವಕಪ್ಗೆ ಭಾರತ ತಂಡದ ಆಯ್ಕೆ; ದ್ರಾವಿಡ್, ಅಗರ್ಕರ್ ಭೇಟಿ ಮಾಡಿದ ರೋಹಿತ್; ಆತಂಕದಲ್ಲಿ ಹಾರ್ದಿಕ್!
- Finance Bengaluru traffic: ಬೆಂಗಳೂರಿನ ಈ ಫ್ಲೈಓವರ್ ಮೇಲೆ ಬೈಕ್ ಬಿಟ್ಟು ಉಳಿದೆಲ್ಲವಕ್ಕೆ ನಿಷೇಧ, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈಲ್ವೆ ನಿಲ್ದಾಣದಿಂದ ಬಾಲಿವುಡ್ ಪ್ರವೇಶ ಮಾಡಿದ ಬಡ ಗಾಯಕಿ
Recommended Video
ಕಳೆದ ತಿಂಗಳು ಒಬ್ಬ ಮಹಿಳೆ ರೈಲ್ವೆ ನಿಲ್ದಾಣದಲ್ಲಿ ನಿಂತು ಹಿಂದಿ ಹಾಡು ಹಾಡುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಲತಾ ಮಂಗೇಶ್ಕರ್ ಹಾಡು ಹಾಡಿದ ಈ ಮಹಿಳೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಜನಪ್ರಿಯತೆ ಪಡೆದರು.
ರೈಲ್ವೆ ನಿಲ್ದಾಣದಲ್ಲಿ ಹಾಡುತ್ತಿದ್ದ ರಾನು ಮೊಂಡಲ್ ಎಂಬ ಮಹಿಳೆಗೆ ಈಗ ಬಾಲಿವುಡ್ ಹಾಡು ಹಾಡುವ ಅವಕಾಶ ಸಿಕ್ಕಿದೆ. ಗಾಯಕ, ಸಂಗೀತ ನಿರ್ದೇಶಕ, ನಿರ್ಮಾಪಕ ಹಾಗೂ ನಟ ಆಗಿರುವ ಹಿಮೇಶ್ ರೇಶ್ಮಿಯಾ ಈ ಮಹಿಳೆಗೆ ಒಂದು ಒಳ್ಳೆಯ ಅವಕಾಶ ನೀಡಿದ್ದಾರೆ.
ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಪಟ್ಟಿಯಲ್ಲಿ ಜಾಕಿಚಾನ್ ಹಿಂದಿಕ್ಕಿದ ಅಕ್ಷಯ್ ಕುಮಾರ್
ಹಿಮೇಶ್ ರೇಶ್ಮಿಯಾ ಒಂದು ಹಾಡನ್ನು ರಾನು ಮೊಂಡಲ್ ರಿಂದ ಹಾಡಿಸಿದ್ದಾರೆ. ತಮ್ಮ ಸ್ಟೂಡಿಯೊಗೆ ಕರೆದುಕೊಂಡು ಹೋಗಿ ಹಾಡಿನ ರೆಕಾರ್ಡಿಂಗ್ ಮಾಡಿಸಿದ್ದಾರೆ. ರಾನು ಗಾಯನ ಮೆಚ್ಚಿ ಧೈರ್ಯ ತುಂಬಿ, ಆಕೆಯಿಂದ ಈ ಹಾಡನ್ನು ಹಾಡಿಸಿದ್ದಾರೆ. 'ತೇರಿ ಮೇರಿ ಕಹಾನಿ..' ಎಂಬ ಹಾಡು ಇದಾಗಿದೆ.
ರಾನು ಮೊಂಡಲ್ ಹಾಡನ್ನು ತಮ್ಮ ಇನ್ಸ್ಟಾಗ್ರಾಮ್ ಹಿಮೇಶ್ ರೇಶ್ಮಿಯಾ ಹಂಚಿಕೊಂಡಿದ್ದಾರೆ. ಹಿಮೇಶ್ ಮಾಡಿರುವ ಒಳ್ಳೆಯ ಕೆಲಸಕ್ಕೆ ದೊಡ್ಡ ಮೆಚ್ಚುಗೆ ಸಿಗುತ್ತದೆ. ರಾನು ಮೊಂಡಲ್ ಹಾಡಿನ ಝಲಕ್ ತುಂಬ ಚೆನ್ನಾಗಿದೆ. ಪೂರ್ಣ ಹಾಡು ಕೇಳುವ ಆಸೆಯನ್ನು ಅನೇಕರು ವ್ಯಕ್ತಪಡಿಸಿದ್ದಾರೆ.
ಅನುಷ್ಕಾ ಶರ್ಮಾ ಬಾಯಲ್ಲಿ ಕನ್ನಡ ಪದ: ನಿಜಕ್ಕೂ ಕನ್ನಡ ಬಳಸಿದ್ರಾ ಕೊಹ್ಲಿ ಪತ್ನಿ?
ಜುಲೈ ತಿಂಗಳಿನಲ್ಲಿ ಪಶ್ವಿಮ ಬಂಗಾಳದ ರಣಫಾಟ್ ನಲ್ಲಿ ರಾನು ಮೊಂಡಲ್ ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣ ವೈರಲ್ ಆಗಿತ್ತು. ನಂತರ ಒಂದು ರಿಯಾಲಿಟಿ ಶೋದಲ್ಲಿ ಹಾಡುವ ಅವಕಾಶವೂ ಅವರಿಗೆ ಬಂದಿತ್ತು.