Don't Miss!
- News Priyanka Gandhi V/s Amit Shah: ಕದನ ಕಣ ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ಗಾಂಧಿ, ಅಮಿತ್ ಶಾ ಮುಖಾಮುಖಿ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಿಕಾ ಪಡುಕೋಣೆ NCB ವಿಚಾರಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮಾಡಿದ ಪತಿ ರಣ್ವೀರ್ ಸಿಂಗ್
ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಎನ್ ಸಿ ಬಿ ವಿಚಾರಣೆ ಬಳಿಕ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ನಟಿ ದೀಪಿಕಾ ಹೆಸರು ಕೇಳಿಬರುತ್ತಿದ್ದಂತೆ ದೀಪಿಕಾ ಅಭಿಮಾನಿಗಳು ಸೇರಿದಂತೆ ಇಡೀ ಬಾಲಿವುಡ್ ಗೆ ಶಾಕ್ ಆಗಿತ್ತು. ಆದರೀಗ ವಿಚಾರಣೆ ಮುಗಿಸಿ ಮತ್ತೆ ದೀಪಿಕಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಇತ್ತ ಪತಿ ರಣ್ವೀರ್ ಸಿಂಗ್ ಸಹ ಸಹಜ ಸ್ಥಿತಿಗೆ ಮರಳುತ್ತಿದ್ದಾರೆ. ಎನ್ ಸಿ ಬಿ ನೋಟಿಸ್ ನೀಡಿದ ಬಳಿಕ ರಣ್ವೀರ್ ಪತ್ನಿಯನ್ನು ಗೋವಾದಿಂದ ಮುಂಬೈಗೆ ಕರೆದುಕೊಂಡು ಬರುವಾಗ ವಿಮಾನ ನಿಲ್ದಾಣದಲ್ಲಿ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದರು. ಇದಕ್ಕು ಮೊದಲು ಅಥವಾ ಬಳಿಕ ರಣ್ವೀರ್ ಸಿಂಗ್ ಲಾಕ್ ಡೌನ್ ನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಇದೀಗ ರಣ್ವೀರ್ ಅನೇಕ ತಿಂಗಳುಗಳ ಬಳಿಕ ಟ್ವಿಟ್ಟರ್ ನಲ್ಲಿ ಪ್ರತ್ಯಕ್ಷರಾಗಿದ್ದಾರೆ.
NCB ವಿಚಾರಣೆ ಬಳಿಕ ಮತ್ತೆ ಗೋವಾಗೆ ಹೊರಟ ನಟಿ ದೀಪಿಕಾ ಪಡುಕೋಣೆ
ಸುಶಾಂತ್ ಸಿಂಗ್ ಸಾವಿನ ಬಳಿಕ ರಣ್ವೀರ್ ಸಿಂಗ್ ಯಾವುದೇ ಟ್ವೀಟ್ ಮಾಡಿರಲಿಲ್ಲ. ಕೊನೆಯದಾಗಿ ಸುಶಾಂತ್ ಸಿಂಗ್ ಆತ್ಮಕ್ಕೆ ಶಾಂತಿ ಕೋರಿ ರಣ್ವೀರ್ ಟ್ವೀಟ್ ಮಾಡಿದ್ದರು. ಇದೀಗ ಅನೇಕ ತಿಂಗಳ ಬಳಿಕ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.
ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸುವ ಮತ್ತು ಆರ್ಥಿಕತೆಯನ್ನು ಪುನಃ ಬಲಪಡಿಸುವ ಬಗ್ಗೆ ನರೇಂದ್ರ ಮೋದಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈ ಅಭಿಯಾನಕ್ಕೆ ರಣ್ವೀರ್ ಸಿಂಗ್ ಕೈ ಜೋಡಿಸಿದ್ದಾರೆ. ಈಗಾಗಲೇ ಸಾಕಷ್ಟು ಮಂದಿ ಕಲಾವಿದರು ಈ ಅಭಿಯಾನಕ್ಕೆ ಕೈ ಜೋಡಿದ್ದಾರೆ. ಇದೀಗ ರಣ್ವೀರ್ ಸಿಂಗ್ ಕೂಡ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಅನ್ನು ಶೇರ್ ಮಾಡಿ ಕೊರೊನಾ ವಿರುದ್ಧ ಹೋರಾಟಕ್ಕೆ ಒಂದಾಗೋಣ ಎಂದು ಟ್ವೀಟ್ ಮಾಡಿದ್ದಾರೆ.
Recommended Video
ಇತ್ತೀಚಿಗೆ ದೀಪಿಕಾ ಎನ್ ಸಿ ಬಿ ವಿಚಾರಣೆ ಎದುರಿಸಿದ ಬಗ್ಗೆ ರಣ್ವೀರ್ ಎಲ್ಲಿಯೂ ಮಾತನಾಡಿರಲಿಲ್ಲ. ಮೋದಿ ಅಭಿಯಾನಕ್ಕೆ ಕೈ ಜೋಡಿಸುವ ರಣ್ವೀರ್ 4 ತಿಂಗಳ ಬಳಿಕ ಟ್ವಿಟ್ಟರ್ ನಲ್ಲಿ ಅಕ್ವೀಟ್ ಆಗಿದ್ದಾರೆ. ಸಿನಿಮಾದ ವಿಚಾರಕ್ಕೆ ಬರುವುದಾದರೆ ರಣ್ವೀರ್ ಅಭಿನಯದ '83' ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಸಹ ನಟಿಸಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ವೈರಸ್ ಹಾವಳಿಯ ಪರಿಣಾಮ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಇನ್ನು 'ಜಯೇಶ್ ಭಾಯ್ ಜೋರ್ದಾರ್' ಮತ್ತು 'ಸೂರ್ಯವಂಶಿ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ರಣ್ವೀರ್ ಬ್ಯುಸಿಯಾಗಿದ್ದಾರೆ.