Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾರಾಷ್ಟ್ರದಲ್ಲಿ ಕರ್ಫ್ಯೂ: ಮುಂಬೈ ಬಿಟ್ಟು ಹೈದರಾಬಾದ್ಗೆ ಹಾರಿದ ರಶ್ಮಿಕಾ
ಮಹಾರಾಷ್ಟ್ರದಲ್ಲಿ ಕರ್ಫ್ಯೂ ಘೋಷಣೆಯಾದ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದಾರೆ.
ಮುಂಬೈನಲ್ಲಿ ಅಮಿತಾಭ್ ಬಚ್ಚನ್ ಜೊತೆ 'ಗುಡ್ ಬೈ' ಸಿನಿಮಾ ಚಿತ್ರೀಕರಣದಲ್ಲಿ ರಶ್ಮಿಕಾ ತೊಡಗಿಕೊಂಡಿದ್ದರು. ರಾಜ್ಯದಲ್ಲಿ ಸೋಂಕು ಏರಿಕೆಯಾಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಹದಿನೈದು ದಿನಗಳ ಕಾಲ ಸಂಪೂರ್ಣವಾಗಿ ಕರ್ಫ್ಯೂ ಜಾರಿ ಮಾಡಿದೆ.
'ಅಮಿತಾಭ್ ಮಗಳ ಪಾತ್ರ ಮಾಡ್ತಿದ್ದೇನೆ' ಎಂದಾಗ ರಶ್ಮಿಕಾ ಪೋಷಕರ ಪ್ರತಿಕ್ರಿಯೆ ಹೇಗಿತ್ತು?
ಈ ವೇಳೆ ಟಿವಿ ಶೂಟಿಂಗ್, ಸಿನಿಮಾ ಶೂಟಿಂಗ್ ಹಾಗೂ ಚಿತ್ರರಂಗದ ಯಾವುದೇ ಕಾರ್ಯಕ್ರಮ ಮಾಡಲು ಅನುಮತಿ ಇಲ್ಲ. ಹಾಗಾಗಿ, ಮುಂಬೈನಲ್ಲಿ ಹದಿನೈದು ದಿನಗಳ ಕಾಲ ಸುಮ್ಮನೆ ಸಮಯ ಕಳೆಯಲು ಸಾಧ್ಯವಾಗದ ಹಿನ್ನೆಲೆ ಹೈದರಾಬಾದ್ಗೆ ರಶ್ಮಿಕಾ ತೆರಳಿದ್ದಾರೆ.
ಈ ವೇಳೆ ಮುಂಬೈ ಏರ್ಪೋರ್ಟ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ನಟಿ ''ಕರ್ಫ್ಯೂ ಮುಗಿದ ಮೇಲೆ ಮತ್ತೆ ಮುಂಬೈಗೆ ಬರ್ತೇನೆ, ನಿಮ್ಮ ಆರೋಗ್ಯ ನೋಡಿಕೊಳ್ಳಿ'' ಎಂದು ಛಾಯಾಗ್ರಾಹಕರಿಗೆ ತಿಳಿಸಿದರು.
ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲಿ ಎರಡು ಸಿನಿಮಾ ಮಾಡ್ತಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ 'ಮಿಷನ್ ಮಜ್ನು' ಚಿತ್ರದ ಮೂಲಕ ಬಿಟೌನ್ ಪ್ರವೇಶಿಸಿದ್ದಾರೆ. ಈ ಸಿನಿಮಾದ ಜೊತೆಗೆ 'ಗುಡ್ ಬೈ' ಸಿನಿಮಾನೂ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಆರಂಭಿಸಿದೆ.
Recommended Video
ಸೌತ್ ಇಂಡಸ್ಟ್ರಿಯಲ್ಲಿ 'ಪುಷ್ಪ' ಸಿನಿಮಾ ಮುಗಿಸಿರುವ ರಶ್ಮಿಕಾ ಮಂದಣ್ಣ ರಿಲೀಸ್ಗಾಗಿ ಕಾಯ್ತಿದ್ದಾರೆ. ಈ ನಡುವೆ ಶರ್ವಾನಂದ್ ಜೊತೆ ಒಂದು ಸಿನಿಮಾ ಮಾಡ್ತಿದ್ದು, ಅದನ್ನು ಬಿಟ್ಟರೆ ಸದ್ಯಕ್ಕೆ ಬೇರೆ ಯಾವ ಚಿತ್ರವೂ ಘೋಷಿಸಿಲ್ಲ.