Don't Miss!
- News Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಕ್ರಂ ವೇದ' ರಿಮೇಕ್ನಿಂದ ಹೃತಿಕ್ ರೋಷನ್ ಔಟ್; ಕಾರಣವೇನು?
ದಕ್ಷಿಣ ಭಾರತದ ಅನೇಕ ಸೂಪರ್ ಹಿಟ್ ಚಿತ್ರಗಳು ಹಿಂದೆಗೆ ರಿಮೇಕ್ ಆಗುತ್ತಿವೆ. ಈಗಾಗಲೇ ಸಾಕಷ್ಟು ಚಿತ್ರಗಳು ಹಿಂದಿಯಲ್ಲಿ ತಯಾರಾಗಿ ಸೂಪರ್ ಸಕ್ಸಸ್ ಆಗಿದ್ದಾರೆ. ತಮಿಳಿನ ಸೂಪರ್ ಹಿಟ್ ವಿಕ್ರಂ ವೇದ ಸಿನಿಮಾ ಬಾಲಿವುಡ್ಗೆ ರಿಮೇಕ್ ಆಗುತ್ತಿದೆ ಎನ್ನುವುದು ಹೊಸ ವಿಚಾರವೇನಲ್ಲ.
ಚಿತ್ರದಲ್ಲಿ ನಟ ಹೃತಿಕ್ ರೋಷನ್ ಪ್ರಮುಖ ಪಾತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದರು. ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮೇ ತಿಂಗಳ ಅಂತ್ಯದಿಂದ ಚಿತ್ರೀಕರಣ ಪ್ರಾರಂಭ ಮಾಡಲು ಚಿತ್ರತಂಡ ಸಜ್ಜಾಗಿತ್ತು. ಹೃತಿಕ್ ಕೂಡ ಉತ್ಸುಕರಾಗಿದ್ದರು. ಲಾಕ್ ಡೌನ್ನಿಂದ ಚಿತ್ರೀಕರಣ ತಡವಾಗುತ್ತಿತ್ತು. ಅಷ್ಟರಲ್ಲೇ ಈಗ ಶಾಕಿಂಗ್ ಸುದ್ದಿ ಹೊರಬಿದ್ದಿದೆ.
ಮಹತ್ವಾಕಾಂಕ್ಷೆಯ 'ರಾಮಾಯಣ' ಸಿನಿಮಾದಿಂದ ಹಿಂದೆ ಸರಿದ ಹೃತಿಕ್ ಜಾಗಕ್ಕೆ ಸೌತ್ ಸ್ಟಾರ್ ಎಂಟ್ರಿ?
ವಿಕ್ರಂ ವೇದ ರಿಮೇಕ್ನಿಂದ ಹೃತಿಕ್ ರೋಷನ್ ಹೊರ ಬಂದಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಹೃತಿಕ್ ದಿಢೀರನೆ ಮನಸ್ಸು ಬದಲಾಯಿಸಲು ಕಾರಣವೇನು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಮೂಲಗಳ ಪ್ರಕಾರ ಡೇಟ್ ಸಮಸ್ಯೆ ಎನ್ನುವ ಮಾತು ಕೇಳಿ ಬರುತ್ತಿದೆ.
ದಿ ನೈಟ್ ಮ್ಯಾನೇಜರ್ ಚಿತ್ರದಲ್ಲಿ ಹೃತಿಕ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಹೃತಿಕ್ ನಟನೆಯ ಮೊದಲ ಒಟಿಟಿ ಸರಣಿಯಾಗಿದೆ. ಹಾಗಾಗಿ ವಿಕ್ರಂ ವೇದ ಚಿತ್ರದಿಂದ ಹೊರಗುಳಿದಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡವಾಗಲಿ ಅಥವಾ ಹೃತಿಕ್ ಕಡೆಯಿಂದ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.
Recommended Video
2017ರಲ್ಲಿ ತೆರೆಗೆ ಬಂದ ವಿಕ್ರಂ ವೇದ ಚಿತ್ರದಲ್ಲಿ ನಟ ಮಾಧವನ್ ಮತ್ತು ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ಮಿಂಚಿದ್ದರು. ನಟ ಹೃತಿಕ್ ವಿಕ್ರಂ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದರು. ಆದರೀಗ ಚಿತ್ರದಿಂದ ಹಿಂದೆ ಸರಿದಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.