Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಂಪು ಕೋಟೆ ಧ್ವಜ ಪ್ರಕರಣ: ನಟ ದೀಪ್ ಸಿಧು ನಾಪತ್ತೆ
ಗಣರಾಜ್ಯೋತ್ಸವದಂದು ರೈತ ಪ್ರತಿಭಟನೆಯಲ್ಲಿ ಕೆಂಪು ಕೋಟೆ ಮುಂದೆ ಧ್ವಜ ಹಾರಿಸಿದ ಪ್ರಕರಣಕ್ಕೆ ಮುಖ್ಯ ಕಾರಣ ಎನ್ನಲಾಗುತ್ತಿರುವ ನಟ ದೀಪ್ ಸಿಧು ನಾಪತ್ತೆಯಾಗಿದ್ದಾರೆ.
ರೈತ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ನಟ ದೀಪ್ ಸಿಧು ಗಣರಾಜ್ಯೋತ್ಸವದಂದು ಕೆಂಪು ಕೋಟೆ ಯಲ್ಲಿ ಧಾರ್ಮಿಕ ಧ್ವಜ ಹಾರಲು ಪ್ರಮುಖ ಕಾರಣವಾಗಿದ್ದರು. ಅಂದು ನಡೆದ ಹಿಂಸಾಚಾರದಲ್ಲಿ ದೀಪ್ ಸಿದ್ಧು ಪಾತ್ರ ಇದೆ ಎನ್ನಲಾಗುತ್ತಿದೆ. ಇದೀಗ ದೀಪ್ ಸಿಧು ವಿರುದ್ಧ ಎಫ್ಐಆರ್ ದಾಖಲಾಗಿದ್ದು, ನಟ ನಾಪತ್ತೆಯಾಗಿದ್ದಾರೆ.
ದೀಪ್ ಸಿದ್ಧು ಜೊತೆಗೆ ರೌಡಿ ಶೀಟರ್ ಸಿಧಾನಾ ಸಹ ನಾಪತ್ತೆಯಾಗಿದ್ದು, ಇಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಲುಕೌಟ್ ನೊಟೀಸ್ ಸಹ ಹೊರಡಿಸಲಾಗಿದೆ.
ದೀಪ್ ಸಿಧು ಬಿಜೆಪಿಯ ಆಪ್ತ ಎಂದು ಹೇಳಲಾಗುತ್ತಿದ್ದು, ಬಿಜೆಪಿ ಸಂಸದ ಸನ್ನಿ ಡಿಯೋಲ್ ಹಾಗೂ ಪ್ರಧಾನಿ ಮೋದಿ ಅವರೊಂದಿಗೆ ದೀಪ್ ಸಿದ್ಧು ಇರುವ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಗಣರಾಜ್ಯೋತ್ಸವದ ದಿನದಂದು ಧ್ವಜ ಹಾರಿದ ಕೂಡಲೇ ದೀಪ್ ಸಿದ್ಧು ಅಲ್ಲಿಂದ ಬೈಕ್ನಲ್ಲಿ ಪರಾರಿ ಆಗಿರುವ ವಿಡಿಯೋಗಳು ಹರಿದಾಡುತ್ತಿವೆ. ಅದೇ ದಿನ ಕೆಲವು ರೈತರು ದೀಪ್ ಸಿದ್ಧುವನ್ನು ಹಿಡಿಯಲು ಪ್ರಯತ್ನಪಟ್ಟರಾದರೂ ಆತ ಯಾರ ಕೈಗೂ ದೊರೆತಿಲ್ಲ.
ದೀಪ್ ಸಿಧು ಬಗ್ಗೆ ಮಾತನಾಡಿರುವ ಸ್ವರಾಜ್ ಪಕ್ಷದ ಯೋಗೇಂದ್ರ ಯಾದವ್, 'ದೀಪ್ ಸಿಧು ಹೋರಾಟದಲ್ಲಿ ಭಾಗವಹಿಸಿರುವ ಬಗ್ಗೆ ಆರಂಭದಿಂದಲೂ ವಿರೋಧವಿತ್ತು. ಆದರೆ ಆತ ಹೇಗೆ ಕೆಂಪು ಕೋಟೆ ಬಳಿ ಬಂದು ಭಾಷಣ ಮಾಡಿದ' ಎಂಬುದು ಗೊತ್ತಾಗಬೇಕು, ಈ ಬಗ್ಗೆ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
Recommended Video
'ಕಳೆದ ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ಸಂಸದ ಸನ್ನಿ ಡಿಯೋಲ್ ರ ಚುನಾವಣೆ ಏಜೆಂಟ್ ಆಗಿದ್ದ ದೀಪ್ ಸಿಧು. ಪ್ರಧಾನ ಮಂತ್ರಿ ಜೊತೆಗೆ ಸಹ ಆತನ ಕೆಲವು ಚಿತ್ರಗಳಿವೆ. ಆತನ ಬಗ್ಗೆ ಈ ಮುಂಚೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದೆವು ಅವರು ಯಾವುದೇ ಕ್ರಮ ಕೈಗೊಂಡಿಲ್ಲ' ಎಂದಿದ್ದಾರೆ ಯೋಗೇಂದ್ರ ಯಾದವ್.