Don't Miss!
- News ‘ಸೋಲಿನ ಭೀತಿಯಿಂದ ಕಮಲ-ದಳ ಮೈತ್ರಿ; ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು’
- Automobiles ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
- Finance BMRCL: ಚಲ್ಲಘಟ್ಟ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹೊಸ ಪಾದಚಾರಿ ಸೇತುವೆ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಿಚಾರಣೆಗೆ ಮಳೆರಾಯ ಅಡ್ಡಿ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಿಯಾ ಚಕ್ರವರ್ತಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಬೇಕಿತ್ತು. ಮುಂಬೈನ ನಗರದಲ್ಲಿ ತೀವ್ರ ಮಳೆ ಬರುತ್ತಿರುವ ಕಾರಣ ಇಂದು ನಡೆಯಬೇಕಿದ್ದ ನ್ಯಾಯಾಲಯದ ಕಲಾಪಗಳನ್ನು ಹೈ ಕೋರ್ಟ್ ನಾಳೆಗೆ ಮುಂದೂಡಿದೆ.
ಜಾಮೀನಿನ ನಿರೀಕ್ಷೆಯಲ್ಲಿರುವ ರಿಯಾ ಚಕ್ರವರ್ತಿ ಮತ್ತು ಸಹೋದರ ಶೌವಿಕ್ ಚಕ್ರವರ್ತಿಗೆ ಇದು ನಿರಾಸೆ ತಂದಿದೆ. ಮಂಗಳವಾರ ಎನ್ಡಿಪಿಎಸ್ ಕೋರ್ಟ್ನಲ್ಲಿ ರಿಯಾ ಚಕ್ರವರ್ತಿ ಮತ್ತು ಇತರೆ ಆರೋಪಿಗಳಿಗೆ ಹದಿನಾಲ್ಕು ದಿನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಆದೇಶವಾಗಿತ್ತು.
ಅಕ್ಟೋಬರ್ 6ರವರೆಗೂ ರಿಯಾ ಚಕ್ರವರ್ತಿಗೆ ಜೈಲು, ಕೋರ್ಟ್ ಆದೇಶ
ಬಾಂಬೆ ಹೈ ಕೋರ್ಟ್ನಲ್ಲಿ ಇಂದು ಜಾಮೀನು ಅರ್ಜಿ ವಿಚಾರಣೆಗೆ ದಿನಾಂಕ ಸಹ ನಿಗದಿಯಾಗಿತ್ತು. ಬಹುಶಃ ಬೇಲ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರಿಯಾ ಚಕ್ರವರ್ತಿ ನಿರಾಸೆಯಾಗಿದೆ.
Recommended Video
ಮತ್ತೊಂದೆಡೆ ಮುಂಬೈ ಮಹಾನಗರ ಪಾಲಿಕೆ ವಿರುದ್ಧ ಕಂಗನಾ ರಣಾವತ್ ದಾಖಲಿಸಿರುವ ಅರ್ಜಿ ಸಹ ಇಂದು ವಿಚಾರಣೆಗೆ ಬರಬೇಕಿತ್ತು. ಈ ಅರ್ಜಿಯೂ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.