Don't Miss!
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles ಹೊಸ ಸುಜುಕಿ V-Strom 800 DE ಬೈಕ್ ಬಿಡುಗಡೆ: ಬೆಲೆ ರೂ.10.30 ಲಕ್ಷ
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಾ ಚಕ್ರವರ್ತಿ ಸಹೋದರನ ಜಾಮೀನು ಅರ್ಜಿ ತಿರಸ್ಕೃತ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿಯ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ಸುಶಾಂತ್ ಸಾವಿನ ತನಿಖೆ ವೇಳೆ ಬಾಲಿವುಡ್ನ ಡ್ರಗ್ಸ್ ಕರ್ಮಕಾಂಡ ಹೊರಗೆ ಬಂದಿದ್ದು, ಡ್ರಗ್ಸ್ ಕೋನದ ತನಿಖೆ ನಡೆಸುತ್ತಿರುವ ಎನ್ಸಿಬಿಯು ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿಯ ಸಹೋದರ ಶೋವಿಕ್ ಚಕ್ರವರ್ತಿಯನ್ನು ಸೆಪ್ಟೆಂಬರ್ 4ನೇ ತಾರೀಖಿನಂದು ಎನ್ಸಿಬಿ ಬಂಧಿಸಿತು.
ರಿಯಾ ಚಕ್ರವರ್ತಿ ಬೆಂಬಲಕ್ಕೆ ನಿಂತ ನಟ ರಿತೇಶ್ ದೇಶ್ ಮುಖ್
ಸುಶಾಂತ್ ಗಾಗಿ ಹಾಗೂ ರಿಯಾ ಚಕ್ರವರ್ತಿಗಾಗಿ ಡ್ರಗ್ಸ್ ಖರೀದಿಸುತ್ತಿದ್ದ ಎಂದು ಶೋವಿಕ್ನನ್ನು ಬಂಧಿಸಲಾಗಿತ್ತು. ಕೆಲವು ಡ್ರಗ್ಸ್ ಪೆಡ್ಲರ್ಗಳ ಜೊತೆಗೆ ಸಹ ಶೋವಿಕ್ಗೆ ಸಂಪರ್ಕವಿತ್ತು ಎನ್ನಲಾಗಿದೆ.
ನವೆಂಬರ್ 3 ರವರೆಗೆ ಜೈಲೇ ಗತಿ
ಪ್ರಕರಣದಲ್ಲಿ ತಮಗೆ ಜಾಮೀನು ನೀಡಬೇಕು ಎಂದು ಶೋವಿಕ್ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಮನವಿಯನ್ನು ತಿರಸ್ಕರಿಸಿದೆ. ಹಾಗಾಗಿ ಶೋವಿಕ್ ನವೆಂಬರ್ 3 ರವರೆಗೆ ನ್ಯಾಯಾಂಗ ಬಂಧನದಲ್ಲಿಯೇ ಇರಬೇಕಾಗಿದೆ.
ಸೆಪ್ಟೆಂಬರ್ 9 ರಂದು ರಿಯಾ ಚಕ್ರವರ್ತಿ ಬಂಧನ
ಶೋವಿಕ್ ಚಕ್ರವರ್ತಿ ಸಹೋದರಿ ರಿಯಾ ಚಕ್ರವರ್ತಿಯನ್ನು ಎನ್ಸಿಬಿ ಅಧಿಕಾರಿಗಳು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 9 ರಂದು ಬಂಧಿಸಿದ್ದರು. 28 ದಿನ ನ್ಯಾಯಾಂಗ ಬಂಧನದಲ್ಲಿದ್ದ ರಿಯಾ ಗೆ ನಂತರ ಜಾಮೀನು ದೊರಕಿತು.
ಸ್ಟಾರ್ ನಟಿಯರ ವಿಚಾರಣೆ
ಸುಶಾಂತ್ ಸಾವು ಪ್ರಕರಣವು ಬಾಲಿವುಡ್ನ ಡ್ರಗ್ಸ್ ಜಗತ್ತನ್ನು ಅನಾವರಣ ಮಾಡಿದ್ದು, ಡ್ರಗ್ಸ್ ಪ್ರಕರಣದಲ್ಲಿ ಹಲವು ಸ್ಟಾರ್ ನಟಿಯರನ್ನು ವಿಚಾರಣೆ ಮಾಡಲಾಗಿದೆ. ದೀಪಿಕಾ ಪಡುಕೋಣೆ, ರಾಕುಲ್ ಪ್ರೀತ್ ಸಿಂಗ್, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಅವರುಗಳನ್ನು ವಿಚಾರಣೆ ಮಾಡಲಾಗಿದೆ.
Recommended Video
ತನಿಖೆ ನಡೆಸುತ್ತಿರುವ ಸಿಬಿಐ
ಇನ್ನು ಸುಶಾಂತ್ ಸಾವು ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಸುಶಾಂತ್ ಅದ್ದು ಕೊಲೆಯಲ್ಲ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಬಂದಂತಿದೆ. ಏಮ್ಸ್ ಆಸ್ಪತ್ರೆ ವೈದ್ಯರು, ಸುಶಾಂತ್ ನದ್ದು ಕೊಲೆಯಲ್ಲ ಎಂದೇ ಅಭಿಪ್ರಾಯವನ್ನು ಸಿಬಿಐ ಗೆ ನೀಡಿದ್ದಾರೆ.ಸ