Don't Miss!
- News Tirumala Property: ತಿರುಪತಿ ತಿರುಮಲ ಶ್ರೀವಾರಿಯ 2023-24ರ ಆಸ್ತಿ ವಿವರ ಇಲ್ಲಿದೆ..
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೈಸೆನ್ಸ್ ಇರೋ ಬಾರ್ ಓಪನ್ ಮಾಡಿಸಿ: ಮದ್ಯ ಪ್ರಿಯರ ಪರ ಸರ್ಕಾರಕ್ಕೆ ರಿಷಿ ಕಪೂರ್ ಮನವಿ
ನಾವೆಲ್ ಕೊರೊನಾ ವೈರಸ್ ಸೋಂಕು ಹರಡುತ್ತಿರುವುದರಿಂದ ದೇಶದಾದ್ಯಂತ ಲಾಕ್ಡೌನ್ ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ನ ಹಿರಿಯ ನಟ ರಿಷಿ ಕಪೂರ್ ಮನವಿಯೊಂದನ್ನು ಮಾಡಿದ್ದಾರೆ.
ಟ್ವಿಟ್ಟರ್ನಲ್ಲಿ ಸಕ್ರಿಯರಾಗಿರುವ ರಿಷಿ ಕಪೂರ್, ಲಾಕ್ಡೌನ್ನ ನಿರ್ಧಾರದಿಂದ ಸಾಮಾನ್ಯ ಜನರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ನಿರಂತರವಾಗಿ ತಮ್ಮ ಕಳವಳ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಜನರಿಗೆ ಎಲ್ಲ ಅಗತ್ಯ ಸೌಲಭ್ಯಗಳೂ ಸಿಗಬೇಕು ಎಂದು ಹೇಳಿರುವ ರಿಷಿ, ಜನರಿಗೆ ಸಂಜೆ ಸ್ವಲ್ಪ ಸಮಯ ಎಲ್ಲ ಲೈಸೆನ್ಸ್ ಇರುವ ಬಾರ್ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದಿದ್ದಾರೆ. ರಿಷಿ ಕುಡುಕರ ಪರವಾಗಿ ಬ್ಯಾಟ್ ಬೀಸಿರುವುದು ಮದ್ಯ ಪ್ರಿಯರಿಗೆ ಖುಷಿ ನೀಡಿದೆ. ಮುಂದೆ ಓದಿ.
ಸಂಜೆ ಸ್ವಲ್ಪ ಹೊತ್ತು
ಸಂಜೆ ಸ್ವಲ್ಪ ಹೊತ್ತು ಕೊಂಚ ಎಣ್ಣೆ ಬಿಟ್ಕೊಂಡರೆ ಸಮಾಧಾನ. ಆಲ್ಕೊಹಾಲ್ ಇಲ್ಲದೆ ಹೋದರೆ ಬದುಕಲು ಸಾಧ್ಯವೇ ಇಲ್ಲ ಎಂಬಂತಿರುವ ಅನೇಕರಿದ್ದಾರೆ. ಈಗ ಲಾಕ್ಡೌನ್ ಕಾರಣದಿಂದ ಮದ್ಯ ಲಭ್ಯವಾಗದೆ ಇರುವುದು ಅನೇಕರನ್ನು ಪೇಚಿಗೆ ಸಿಲುಕಿಸಿದೆ.
ಲೈಸೆನ್ಸ್ ಇದ್ದವರಿಗೆ ಅವಕಾಶ ನೀಡಿ
ಯೋಚನೆ ಮಾಡಿ. ಪರವಾನಗಿಯುಳ್ಳ ಎಲ್ಲ ಲಿಕ್ಕರ್ ಅಂಗಡಿಗಳನ್ನೂ ಸಂಜೆ ವೇಳೆ ಸ್ವಲ್ಪ ಸಮಯ ತೆರೆಯಲು ಸರ್ಕಾರ ಅವಕಾಶ ನೀಡಬೇಕು ಎಂದು ರಿಷಿ ಕಪೂರ್ ಹೇಳಿದ್ದಾರೆ.
|
ನನ್ನ ಮಾತು ತಪ್ಪಾಗಿ ಭಾವಿಸಬೇಡಿ
'ನನ್ನ ಮಾತನ್ನು ತಪ್ಪಾಗಿ ತಿಳಿಯಬೇಡಿ. ಜನರು ಈ ಎಲ್ಲಾ ಒತ್ತಡ, ಸುತ್ತಲಿನ ಅನಿರ್ದಿಷ್ಟ ಸಂಗತಿಗಳ ನಡುವೆ ಮನೆಯಲ್ಲಿಯೇ ಇರುತ್ತಾರೆ. ಹಾಗೆಯೇ ಪೊಲೀಸರು, ವೈದ್ಯರು, ನಾಗರಿಕರು ಎಲ್ಲರಿಗೂ ಸ್ವಲ್ಪ ಬಿಡುವು ಬೇಕು. ಅದೇನೇ ಮಾಡಿದ್ದರೂ ಬ್ಲಾಕ್ನಲ್ಲಿ ಮದ್ಯ ಸಿಗುತ್ತಿದೆಯಲ್ಲವೇ?' ಎಂದಿದ್ದಾರೆ.
|
ಕುಡಿಯುತ್ತಿದ್ದೇವೆ, ಲೀಗಲೈಸ್ ಮಾಡಿ
ರಾಜ್ಯ ಸರ್ಕಾರವು ಅಬಕಾರಿಯಿಂದ ಹಣ ಸಂಗ್ರಹಿಸಬೇಕಾದ ಅನಿವಾರ್ಯ ಸ್ಥಿತಿಯಲ್ಲಿವೆ. ಖಿನ್ನತೆಗೆ ಎಂದಿಗೂ ಹತಾಶೆಯೂ ಸೇರಿಕೊಳ್ಳುವಂತಾಗಬಾರದು. ಹೇಗೂ ಕುಡಿಯುತ್ತಾ ಇದ್ದೇವೆ, ಅದನ್ನು ಕಾನೂನುಬದ್ಧಗೊಳಿಸಿ. ಇದರಲ್ಲಿ ಬೂಟಾಟಿಕೆ ಬೇಡ. ಇದು ನನ್ನ ಯೋಚನೆಯಷ್ಟೇ' ಎಂದು ರಿಷಿ ಕಪೂರ್ ಹೇಳಿದ್ದಾರೆ.
|
ಎಮರ್ಜೆನ್ಸಿ ಘೋಷಿಸಿ
ಆತ್ಮೀಯ ಭಾರತೀಯರೇ , ನಾವು ತುರ್ತುಪರಿಸ್ಥಿತಿಯನ್ನು ಘೋಷಿಸಲೇಬೇಕು. ದೇಶದೆಲ್ಲೆಡೆ ಏನಾಗುತ್ತಿದೆ ಎಂಬುದನ್ನು ನೋಡಿ. ಈ ಪರಿಸ್ಥಿತಿಯನ್ನು ನಿಭಾಯಿಸಲು ಬೇರೆ ಯಾವುದೇ ದಾರಿ ಇಲ್ಲ. ಇದು ನಮ್ಮ ಒಳ್ಳೆಯದಕ್ಕಾಗಿಯೇ ಎಂದು ಕೆಲವು ದಿನಗಳ ಹಿಂದೆ ರಿಷಿ ಕಪೂರ್ ಹೇಳಿದ್ದರು.