Don't Miss!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಧೆ ಸಿನಿಮಾ ವಿಮರ್ಶೆ; ನಟ ಕಮಾಲ್ ವಿರುದ್ಧ ಮಾನಹಾನಿ ದೂರು ದಾಖಲಿಸಿದ ಸಲ್ಮಾನ್ ಖಾನ್
ಬಾಲಿವುಡ್ ಬ್ಯಾಡ್ ಸಲ್ಮಾನ್ ಖಾನ್ ನಟನೆಯ ಬಹುಕೋಟಿ ವೆಚ್ಚದ ರಾಧೆ: ಯುವರ್ ಮೋಸ್ಟ್ ವಾಟೆಂಡ್ ಭಾಯ್ ಸಿನಿಮಾ ಈದ್ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ಪ್ರಭುದೇವ ಸಾರಥ್ಯದಲ್ಲಿ ಮೂಡಿಬಂದ ಈ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ನಡುವೆ ಸಿನಿಮಾ ಪೈರಸಿಯಾಗಿ ಸಾಕಷ್ಟು ಜನರ ಮೊಬೈಲ್ ಗಳಲ್ಲಿ ಹರಿದಾಡುತ್ತಿದೆ. ಪೈರಸಿ ವಿರುದ್ಧ ಹೋರಾಟ ನಡೆಸುತ್ತಿದ್ದ ಸಲ್ಲು ಈಗ ಚಿತ್ರದ ಬಗ್ಗೆ ವಿಮರ್ಶೆ ಮಾಡಿದ್ದ ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ ವಿರುದ್ಧ ಮಾನಹಾನಿ ದೂರು ದಾಖಲಿಸಿದ್ದಾರೆ.
ರಾಧೇ ಪೈರಸಿ ಮಾಡಿದ್ರೆ ವಾಟ್ಸಾಪ್ ರದ್ದುಗೊಳಿಸಿ: ದೆಹಲಿ ಹೈ ಕೋರ್ಟ್
ಈ ಬಗ್ಗೆ ವಿಮರ್ಶಕ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಮಾನಹಾನಿ ನೋಟೀಸ್ ಹಂಚಿಕೊಂಡಿರುವ ಕಮಾಲ್, ನಾನು ನನ್ನ ಫಾಲೋವರ್ಸ್ ಗೆ ವಿಮರ್ಶೆ ಮಾಡಿದ್ದೀನಿ ಮತ್ತು ಅದು ನನ್ನ ಕೆಲಸ. ನೀವು ನನ್ನನ್ನು ನಿಯಂತ್ರಿಸುವುದಕ್ಕಿಂತ ಉತ್ತಮ ಸಿನಿಮಾ ಮಾಡಿ' ಎಂದಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ ಇನ್ಮುಂದೆ ಸಲ್ಮಾನ್ ಖಾನ್ ಸಿನಿಮಾದ ವಿಮರ್ಶೆ ಮಾಡುವುದಿಲ್ಲ ಎಂದಿದ್ದಾರೆ. 'ನಾನು ಅನೇಕ ಬಾರಿ ಹೇಳಿದ್ದೇನೆಂದರೆ ಯಾವುದ್ ನಿರ್ಮಾಪಕ, ನಟನ ಚಿತ್ರಗಳನ್ನು ವಿಮರ್ಶೆ ಮಾಡಬೇಡಿ ಎಂದು ಕೇಳಿದರೆ ನಾನು ಅದನ್ನು ಮಾಡುವುದಿಲ್ಲ. ಸಲ್ಮಾನ್ ಖಾನ್ ಅವರ ರಾಧೆ ಸಿನಿಮಾ ವಿಮರ್ಶೆಗಾಗಿ ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದರೆ ನನ್ನ ವಿಮರ್ಶೆ ಮೇಲೆ ಹೆಚ್ಚು ಪರಿಣಾಮ ಬೀರಿದೆ. ನಾನು ಅವರ ಸಿನಿಮಾ ವಿಮರ್ಶೆ ಮಾಡುವುದಿಲ್ಲ. ಇದು ನನ್ನ ಕೊನೆಯ ವಿಡಿಯೋ' ಎಂದಿದ್ದಾರೆ.
Recommended Video
ಇತ್ತೀಚಿಗಷ್ಟೆ ಸಿನಿಮಾತಂಡ ಪೈರಸಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ರಾಧೆ ಸಿನಿಮಾದ ಪೈರಸಿ ಕಾಪಿಯನ್ನು ಶೇರ್ ಮಾಡಿದರೆ ಅವರ ವಾಟ್ಸ್ ಆಪ್ ಮತ್ತು ಇತರ ಸಾಮಾಜಿಕ ಜಾಲತಾಣದ ಖಾತೆ ಡಿಲೀಟ್ ಮಾಡುವಂತೆ ಆದೇಶ ನೀಡಿತ್ತು. ಪದೇ ಪದೇ ಅದೇ ತಪ್ಪು ಮುಂದುವರೆದರೆ ಶಾಶ್ವತವಾಗಿ ಬ್ಯಾನ್ ಮಾಡುವಂತೆ ಹೈ ಕೋರ್ಟ್ ಆದೇಶ ನೀಡಿದೆ. ಇದೀಗ ಸಲ್ಲು ತಂಡ ಮತ್ತೊಂದು ಹೋರಾಟಕ್ಕೆ ಇಳಿದಿದೆ.