Don't Miss!
- News ‘ಸೋಲಿನ ಭೀತಿಯಿಂದ ಕಮಲ-ದಳ ಮೈತ್ರಿ; ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು’
- Automobiles ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
- Finance BMRCL: ಚಲ್ಲಘಟ್ಟ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹೊಸ ಪಾದಚಾರಿ ಸೇತುವೆ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೃಷ್ಣಮೃಗ ಬೇಟೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಲಿಲ್ಲ ಸಲ್ಮಾನ್ ಖಾನ್
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಇಂದು ಜೋಧ್ ಪುರ್ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕಿತ್ತು. ಆದರೆ, ಕೋರ್ಟ್ ನಿರ್ದೇಶನವನ್ನ ಪರಿಗಣಿಸದ ಸಲ್ಮಾನ್ ಖಾನ್ ವಿಚಾರಣೆಗೆ ಗೈರಾಗಿದ್ದಾರೆ.
ಕೆಲವು ದಿನದ ಹಿಂದೆ ಸಲ್ಮಾನ್ ಖಾನ್ ಅವರಿಗೆ ದರೋಡೆಕಾರರು ಫೇಸ್ ಬುಕ್ ನಲ್ಲಿ ಜೀವಬೆದರಿಕೆ ಹಾಕಿದ್ದರು. ಈ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಸಲ್ಲು ಪರ ವಕೀಲರು ಕೋರ್ಟ್ ಗೆ ತಿಳಿಸಿದ್ದು, ಮುಂದಿನ ವಿಚಾರಣೆಯನ್ನ ಡಿಸೆಂಬರ್ 19ಕ್ಕೆ ಮುಂದೂಡಲಾಗಿದೆ.
ಏನಿದು ಕೃಷ್ಣಮೃಗ ಬೇಟೆ ಪ್ರಕರಣ? ನೀವು ತಿಳಿದುಕೊಳ್ಳಬೇಕಾದ ಸಂಗತಿಗಳು
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜೋಧ್ ಪುರ್ ಕಳೆ ನ್ಯಾಯಾಲಯ ಸಲ್ಮಾನ್ ಖಾನ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಸಲ್ಮಾನ್, ಈ ಕೇಸ್ ನಲ್ಲಿ ಶಾಶ್ವತವಾಗಿ ವಿನಾಯ್ತಿ ಕೊಡಿ ಎಂದು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.
ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ದೋಷಿ
ಸಲ್ಮಾನ್ ಖಾನ್ ಅವರು ಮೇಲ್ಮನವಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್, ಸೆಪ್ಟೆಂಬರ್ 27 ರಂದು ಖುದ್ದು ಸಲ್ಮಾನ್ ಖಾನ್ ಹಾಜರಾಗಬೇಕು ಎಂದು ಸೂಚಿಸಿತ್ತು. ಇಲ್ಲವಾದಲ್ಲಿ ಕೊಟ್ಟಿರುವ ಜಾಮೀನು ಹಿಂಪಡೆಯಲಾಗುವುದು ಎಂದು ನಿರ್ದೇಶಿಸಿತ್ತು. ಆದರೆ, ಬ್ಯಾಡ್ ಬಾಯ್ ಇಂದು ಕೋರ್ಟ್ ಗೆ ಹಾಜರಾಗದೆ, ಇನ್ನೊಂದು ದಿನಾಂಕವನ್ನ ವಿನಾಯ್ತಿಯಾಗಿ ಪಡೆದುಕೊಂಡಿದ್ದಾರೆ.
1998ರಲ್ಲಿ 'ಹಮ್ ಸಾತ್ ಸಾತ್ ಹೈ' ಚಿತ್ರದ ಚಿತ್ರೀಕರಣ ವೇಳೆ ಜೋಧ್ ಪುರ್ ಅರಣ್ಯದಲ್ಲಿ ಕೃಷ್ಣಮೃಗವನ್ನ ಬೇಟೆಯಾಡಿರುವ ಆರೋಪದಲ್ಲಿ ಸಲ್ಮಾನ್ ಆರೋಪ ಸಾಬೀತಾಗಿತ್ತು. ಈ ಕೇಸ್ ನಲ್ಲಿ ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರೆ ಕೂಡ ಆರೋಪಿಯಾಗಿದ್ದರು. ಜೋಧ್ ಪುರ್ ಕೋರ್ಟ್ ಈ ಮೂವರನ್ನ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಖುಲಾಸೆ ಮಾಡಿದೆ.