twitter
    For Quick Alerts
    ALLOW NOTIFICATIONS  
    For Daily Alerts

    ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಗೆ ಖುಷಿ ಸುದ್ದಿ ನೀಡಿದ ಕೋರ್ಟ್

    By Bharath Kumar
    |

    'ಕೃಷ್ಣಮೃಗ ಬೇಟೆ ಪ್ರಕರಣ'ದಲ್ಲಿ ಆರೋಪಿಯಾಗಿದ್ದ ಸಲ್ಮಾನ್ ಖಾನ್ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ದೇಶ ಬಿಟ್ಟು ಹೋಗಬಾರದು ಎಂಬ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದ ಜೋಧ್ ಪುರ್ ನ್ಯಾಯಾಲಯ ಈಗ ಸಲ್ಲುಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ.

    ಮೇ 25 ರಿಂದ 10 ಜುಲೈ ವರೆಗೆ ಕೆನಡಾ, ನೇಪಾಳ ಮತ್ತು ಯುಎಸ್ಎ ಸೇರಿದಂತೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ನಟ ಸಲ್ಮಾನ್ ಖಾನ್ ಜೋಧಪುರ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಸಲ್ಲು ಮನವಿಯನ್ನ ಪುರಸ್ಕರಿಸಿದ ಕೋರ್ಟ್ ವಿದೇಶಕ್ಕೆ ಹೋಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ.

    'ಕೃಷ್ಣಮೃಗ'ವನ್ನ ಸಲ್ಲು ಕೊಂದಿಲ್ಲ: ಯಾರನ್ನೋ ಕಾಪಾಡಲು ಆರೋಪಿಯಾದ್ರಂತೆ.!'ಕೃಷ್ಣಮೃಗ'ವನ್ನ ಸಲ್ಲು ಕೊಂದಿಲ್ಲ: ಯಾರನ್ನೋ ಕಾಪಾಡಲು ಆರೋಪಿಯಾದ್ರಂತೆ.!

    1998 ರಲ್ಲಿ 'ಹಮ್ ಸಾಥ್ ಸಾಥ್ ಹೈ' ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ನಟ ಸಲ್ಮಾನ್ ಖಾನ್ ಜೋಧಪುರ್ ದಲ್ಲಿ ಎರಡು ಕೃಷ್ಣಮೃಗಗಳನ್ನು ಕಾನೂನು ಬಾಹಿರವಾಗಿ ಬೇಟೆಯಾಡಿದ್ದರು ಎಂಬ ಆರೋಪದಡಿ ಸಲ್ಮಾನ್ ಗೆ 5 ವರ್ಷಗಳ ಜೈಲು ಶಿಕ್ಷೆಯಾಗಿತ್ತು. ಶಿಕ್ಷೆಯಾದ ಬಳಿಕ ಎರಡು ದಿನಗಳ ಕಾಲ ಜೋಧಪುರ್ ಜೈಲಿನಲ್ಲಿ ಕಳೆದಿದ್ದ ನಟ ಜಾಮೀನಿನ ಮೇಲೆ ಹೊರಬಂದಿದ್ದರು.

    ಸಲ್ಮಾನ್ ಖಾನ್ ಜೈಲು ಸೇರಿದ್ದಕ್ಕೆ ಅತೀವ ಸಂತಸಗೊಂಡ ನಟಿ.!ಸಲ್ಮಾನ್ ಖಾನ್ ಜೈಲು ಸೇರಿದ್ದಕ್ಕೆ ಅತೀವ ಸಂತಸಗೊಂಡ ನಟಿ.!

    Salman Khan Can Travel Abroad

    ಸದ್ಯ, 'ರೇಸ್-3' ಚಿತ್ರದ ಚಿತ್ರೀಕರಣ ಮುಗಿಸಿರುವ ಸಲ್ಮಾನ್ ಖಾನ್ ಈಗ 'ಭಾರತ್' ಚಿತ್ರವನ್ನ ಆರಂಭಿಸಿದ್ದಾರೆ. ಅಲಿ ಅಬ್ಬಾಸ್ ಖಾನ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದಲ್ಲಿ ಸಲ್ಮಾನ್ ಗೆ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

    English summary
    Superstar Salman Khan, who is on bail in the 20-year-old blackbuck poaching case, can travel abroad, the court said today. Judge Chandra Kumar Songara of the Jodhpur District and Sessions Court allowed him to travel to the US, Canada and Nepal from May 25 to July 10, after the actor's plea.
    Tuesday, April 17, 2018, 15:45
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X