ನಟ ಸಲ್ಮಾನ್ ಖಾನ್ ಗೂ ಕಾದಿಗೆ ಆರು ವರ್ಷ ಜೈಲು
ನಟ ಸಲ್ಮಾನ್ ಖಾನ್, ಸೈಫ್ ಆಲಿ ಖಾನ್, ಟಬು, ನೀಲಂ ಹಾಗೂ ಸೋನಾಲಿ ಬೇಂದ್ರೆ ಈ ಪ್ರಕರಣದ ಆರೋಪಿಗಳು. ಸಂರಕ್ಷಿತ ಪ್ರಾಣಿ ಕೃಷ್ಣಮೃಗ ಬೇಟೆಯಾಡಿರುವ ಸಲ್ಲು ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ಆದರೆ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿ ದಾಖಲಾಗಿದ್ದ ಪ್ರಕರಣವನ್ನು ಕೋರ್ಟ್ ಕೈಬಿಟ್ಟಿದೆ. ತಾರೆಗಳಾದ ಸೈಫ್ ಆಲಿ ಖಾನ್, ಟಬು, ನೀಲಂ ಹಾಗೂ ಸೋನಾಲಿ ಬೇಂದ್ರೆ ಅವರು ಸಲ್ಲು ಅವರನ್ನು ಪ್ರಚೋದಿಸಿದ ಕಾರಣ ಅವರ ವಿರುದ್ಧವೂ ವಿಚಾರಣೆ ನಡೆಯಲಿದೆ.
ಒಂದು ವೇಳೆ ಸಲ್ಲು ವಿರುದ್ಧದ ಆರೋಪ ಸಾಬೀತಾದರೆ ಅವರಿಗೆ 6 ವರ್ಷ ಜೈಲು ಶಿಕ್ಷೆ ತಪ್ಪಿದ್ದಲ್ಲ. ಸದ್ಯಕ್ಕೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಸಲ್ಲು ಅವರು ಯುಎಸ್ ನಲ್ಲಿದ್ದಾರೆ. ಹಾಗಾಗಿ ಅವರಿಗೆ ಕೋರ್ಟ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.
1998ರಲ್ಲಿ 'ಹಮ್ ಸಾಥ್ ಸಾಥ್ ಹೈ' ಚಿತ್ರೀಕರಣ ವೇಳೆ ಜೋಧಪುರ ಸಮೀಪದ ಹಳ್ಳಿಯೊಂದರ ಬಳಿ ಕೃಷ್ಣಮೃಗ ಭೇಟಿಯಾಡಿದ್ದ ಆರೋಪ ಸಲ್ಲು ವಿರುದ್ಧ ಇದೆ. ಈ ಪ್ರಕರಣದ ಪ್ರಮುಖ ಸಾಕ್ಷಿ ಜೀಪ್ ಚಾಲಕ. ಏಪ್ರಿಲ್ 27ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ. (ಏಜೆನ್ಸೀಸ್)


Click it and Unblock the Notifications












