Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಸಲ್ಮಾನ್ ಖಾನ್ ಗೂ ಕಾದಿಗೆ ಆರು ವರ್ಷ ಜೈಲು
ನಟ ಸಲ್ಮಾನ್ ಖಾನ್, ಸೈಫ್ ಆಲಿ ಖಾನ್, ಟಬು, ನೀಲಂ ಹಾಗೂ ಸೋನಾಲಿ ಬೇಂದ್ರೆ ಈ ಪ್ರಕರಣದ ಆರೋಪಿಗಳು. ಸಂರಕ್ಷಿತ ಪ್ರಾಣಿ ಕೃಷ್ಣಮೃಗ ಬೇಟೆಯಾಡಿರುವ ಸಲ್ಲು ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ಆದರೆ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿ ದಾಖಲಾಗಿದ್ದ ಪ್ರಕರಣವನ್ನು ಕೋರ್ಟ್ ಕೈಬಿಟ್ಟಿದೆ. ತಾರೆಗಳಾದ ಸೈಫ್ ಆಲಿ ಖಾನ್, ಟಬು, ನೀಲಂ ಹಾಗೂ ಸೋನಾಲಿ ಬೇಂದ್ರೆ ಅವರು ಸಲ್ಲು ಅವರನ್ನು ಪ್ರಚೋದಿಸಿದ ಕಾರಣ ಅವರ ವಿರುದ್ಧವೂ ವಿಚಾರಣೆ ನಡೆಯಲಿದೆ.
ಒಂದು ವೇಳೆ ಸಲ್ಲು ವಿರುದ್ಧದ ಆರೋಪ ಸಾಬೀತಾದರೆ ಅವರಿಗೆ 6 ವರ್ಷ ಜೈಲು ಶಿಕ್ಷೆ ತಪ್ಪಿದ್ದಲ್ಲ. ಸದ್ಯಕ್ಕೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಸಲ್ಲು ಅವರು ಯುಎಸ್ ನಲ್ಲಿದ್ದಾರೆ. ಹಾಗಾಗಿ ಅವರಿಗೆ ಕೋರ್ಟ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.
1998ರಲ್ಲಿ 'ಹಮ್ ಸಾಥ್ ಸಾಥ್ ಹೈ' ಚಿತ್ರೀಕರಣ ವೇಳೆ ಜೋಧಪುರ ಸಮೀಪದ ಹಳ್ಳಿಯೊಂದರ ಬಳಿ ಕೃಷ್ಣಮೃಗ ಭೇಟಿಯಾಡಿದ್ದ ಆರೋಪ ಸಲ್ಲು ವಿರುದ್ಧ ಇದೆ. ಈ ಪ್ರಕರಣದ ಪ್ರಮುಖ ಸಾಕ್ಷಿ ಜೀಪ್ ಚಾಲಕ. ಏಪ್ರಿಲ್ 27ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ. (ಏಜೆನ್ಸೀಸ್)