Don't Miss!
- News ಪಿಎಸ್ ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ : ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೈಲಿನಲ್ಲಿದ್ದ ಕುರಿತು ಪ್ರಶ್ನಿಸಿದ ಪತ್ರಕರ್ತನಿಗೆ ಸಲ್ಲು ಖಡಕ್ ಪ್ರತಿಕ್ರಿಯೆ
'1998ರ ಕೃಷ್ಣಮೃಗ ಬೇಟೆ ಪ್ರಕರಣ'ಕ್ಕೆ ಸಂಬಂಧಪಟ್ಟಂತೆ ಸಲ್ಮಾನ್ ಖಾನ್ ಗೆ ಜೋಧ್ ಪುರ್ ನ್ಯಾಯಾಲಯದಿಂದ ಶಿಕ್ಷೆ ಪ್ರಕಟವಾಗಿದ್ದು, ಜಾಮೀನು ಪಡೆದು ಹೊರಬಂದಿದ್ದಾರೆ. ಆದ್ರೆ, ಈ ಪ್ರಕರಣದ ಬಗ್ಗೆ ಸಲ್ಮಾನ್ ಖಾನ್ ಸದ್ಯ ಎಲ್ಲಿಯೂ ಮಾತನಾಡಿರಲಿಲ್ಲ.
ಇದೀಗ, ಪತ್ರಕರ್ತರೊಬ್ಬರ ಕೇಳಿದ ಪ್ರಶ್ನೆಗೆ ಸಲ್ಮಾನ್ ಖಾನ್ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಘಟನೆ ನಡೆದಿದೆ. ಸದ್ಯ, ಸಲ್ಮಾನ್ ಖಾನ್ ಅಭಿನಯದ 'ರೇಸ್-3 ಸಿನಿಮಾದ ಬಿಡುಗಡೆಯಾಗಬೇಕಿದೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಸಲ್ಮಾನ್ ಖಾನ್ ಗೆ ಕೃಷ್ಣಮೃಗ ಬೇಟೆ ಪ್ರಕರಣದ ಬಗ್ಗೆ ಪ್ರಶ್ನೆ ಎದುರಾಗಿದೆ.
ಜೈಲಿನಲ್ಲಿ ಎರಡು ರಾತ್ರಿ ಕಳೆದ ಬಳಿಕ ಮನೆಗೆ ಮರಳಿದ ಸಲ್ಮಾನ್ ಖಾನ್
ಪತ್ರಕರ್ತರು ''ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನೀವು ಅಪರಾಧಿಯಾಗಿ ಜೈಲಿನಲ್ಲಿದ್ದಾಗ ನಿಮ್ಮ ನಿರ್ಮಾಪಕರು ಮತ್ತು ಅವರ ಹಣದ ಬಗ್ಗೆ ನಿಮಗೆ ನೋವಾಗಲಿಲ್ಲವೇ.? ಎಂದು ಕೇಳಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯೆಸಿರುವ ಸಲ್ಲು ''ಯಾಕೆ ನಾನು ಜೀವನ ಪರ್ಯಾಂತ ಜೈಲಿನಲ್ಲೇ ಇರ್ತೀನಿ ಅಂದುಕೊಂಡ್ರಾ'' ಎಂದು ಮರು ಪ್ರಶ್ನಿಸಿದ್ದಾರೆ.
ಇದಕ್ಕೆ ಸ್ವಲ್ಪ ಮುಜಗರಕ್ಕೆ ಒಳಗಾದ ಪತ್ರಕರ್ತರು 'ಹಾಗೇನೂ ಇಲ್ಲ' ಎಂದಿದ್ದಾರೆ. ನಂತರ ಮಾತು ಮುಂದುವರೆಸಿದ ಸಲ್ಮಾನ್ ಖಾನ್ ''ಥ್ಯಾಂಕ್ ಯೂ, ನಾನು ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ'' ಎಂದಿದ್ದಾರೆ.
'ಕೃಷ್ಣಮೃಗ'ವನ್ನ ಸಲ್ಲು ಕೊಂದಿಲ್ಲ: ಯಾರನ್ನೋ ಕಾಪಾಡಲು ಆರೋಪಿಯಾದ್ರಂತೆ.!
ರೆಮೋ ಡಿಸೋಜಾ ನಿರ್ದೇಶನ ಮಾಡಿರುವ 'ರೇಸ್-3' ಸಿನಿಮಾ ಜೂನ್ ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ. ಸಲ್ಮಾನ್ ನಾಯಕನಾಗಿರುವ ಈ ಚಿತ್ರದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್, ಜಾಕ್ವಲಿನ್ ಫರ್ನಾಂಡೀಸ್ ಮುಂತಾದವರು ನಟಿಸಿದ್ದಾರೆ.