Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಸಂಕಷ್ಟ; ನೆರವಿಗೆ ಧಾವಿಸಿದ ಸಲ್ಮಾನ್ ಖಾನ್
ದೇಶದಲ್ಲಿ ಕೊರೊನಾ ಎರಡನೇ ಅಲೆ ಆತಂಕ ಸೃಷ್ಟಿಸಿದೆ. ಕೊರೊನಾ ಸೇಂಕಿತರ ಸಂಖ್ಯೆ ಹೆಚ್ಚಾಗಿದ್ದು, ಸೋಂಕಿತರು ಚಿಕಿತ್ಸೆ ಸಿಗದೆ ನರಳಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯ ಸೋಂಕಿತರು ಕೊರೊನಾದಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ವರ್ಷ ಕೂಡ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಷ್ಟದ ಸಮಯದಲ್ಲಿ ಸಾಕಷ್ಟು ಮಂದಿ ಮುಂದೆ ಬಂದು ಸಹಾಯ ಮಾಡಿದ್ದರು.
ಮತ್ತೆ ಬಂದಿರುವ ಸಂಕಷ್ಟ ಕಾಲವನ್ನು ಎದುರಿಸಲು ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ನೆರವಾಗಿದ್ದಾರೆ. ಕಳೆದ ವರ್ಷ ಕಷ್ಟದಲ್ಲಿದ್ದ, ಒಂದ್ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ಕಾರ್ಮಿಕರಿಗೆ ಅಗತ್ಯ ವಸ್ತುಗಳನ್ನು ನೀಡುವ ಮೂಲಕ ಸಲ್ಮಾನ್ ಮಾನವೀಯ ಕೆಲಸ ಮಾಡಿದ್ದರು. ಈ ವರ್ಷ ಸಲ್ಮಾನ್ ಕಾರ್ಮಿಕರ ನೆರವಿಗೆ ಧಾವಿಸಿದ್ದಾರೆ.
ಕೊನೆಗೂ ಸಲ್ಮಾನ್ ಖಾನ್ 'ರಾಧೇ' ಬಿಡುಗಡೆಗೆ ದಿನಾಂಕ ನಿಗದಿ
ಟ್ರಕ್ ಮೂಲಕ ಆಹಾರ ವಿತರಣೆ
ಆಹಾರ ಕಿಟ್ಗಳನ್ನು ವಿತರಿಸುವ ಮೂಲಕ ಕಾರ್ಮಿಕರ ಹಸಿವನ್ನು ನೀಗಿಸುತ್ತಿದ್ದಾರೆ. ಮುಂಬೈನಲ್ಲಿ ಆಹಾರ ಕಿಟ್ ವಿತರಿಸಲಾಗುತ್ತಿದ್ದು, ಪೊಲೀಸರು, ಬಿಎಂಸಿ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ನೆರವಿಗೆ ಸಲ್ಮಾನ್ ಖಾನ್ ನಿಂತಿದ್ದಾರೆ. ಖುದ್ದು ಸಲ್ಮಾನ್ ಖಾನ್ ಅವರೇ ಆಹಾರ ಟ್ರಕ್ಗಳನ್ನು ಕಳುಹಿಸುತ್ತಿದ್ದಾರೆ.
ಸಹಾಯವಾಣಿ ಪ್ರಾರಂಭ
ಆಹಾರ ಕಿಟ್ ಹೊತ್ತ ಕ್ರಟ್ಗಳು ಅಗತ್ಯವಿರುವವರಿಗೆ ವಿತರಿಸುತ್ತಿದ್ದಾರೆ. ಕಿಟ್ನಲ್ಲಿ ಚಹಾ, ಶುದ್ಧ ನೀರು, ಬಿಸ್ಕತ್ ಪ್ಯಾಕ್, ಉಪ್ಪಿಟ್ಟು, ಪಾವ್ ಭಾಜಿ, ವಡಾ ಪಾವ್ ಇರಿಸಿ ವಿತರಿಸುತ್ತಿದ್ದಾರೆ. ಜೊತೆಗೆ ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ. ಅವಶ್ಯಕತೆ ಇರುವವರು ಕರೆ ಮಾಡಬಹುದು. ಅಲ್ಲಿಗೆ ಹೋಗಿ ಆಹಾರ ವಿತರಣೆ ಮಾಡಲು ಸಲ್ಮಾನ್ ಖಾನ್ ಟೀಂ ಸಿದ್ಧವಾಗಿದೆ. ಸಲ್ಮಾನ್ ಖಾನ್ ಅವರ ಸೇವೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮುಂಬೈನ ಎಲ್ಲಾ ಕಡೆ ಸೇವೆಗೆ ಸಿದ್ಧವಗಿರುವ ಟ್ರಕ್
ಕಳೆದ ಎರಡು ದಿನಗಳಿಂದ ಸಲ್ಮಾನ್ ಖಾನ್ ತಂಡ ಈ ಸೇವೆಯನ್ನು ಮಾಡುತ್ತಿದೆ, ಮುಂಬೈನ ವರ್ಲಿ ಮತ್ತು ಜುಹು ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಮುಂಬೈಯ ಇತರ ಪ್ರದೇಶಗಳಿಗೂ ವಿಸ್ತರಿಸಲಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿದ್ದಾರೆ. ಇನ್ನು ಅನೇಕ ಸ್ಟಾರ್ ಕಲಾವಿದರು ಮುಂದೆ ನೆರವಿಗೆ ಧಾವಿಸಬೇಕೆಂದು ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ.
Recommended Video
ರಾಧೆ ಟ್ರೇಲರ್ ಬಿಡುಗಡೆ
ಅಂದಹಾಗೆ ಸಲ್ಮಾನ್ ಖಾನ್ ಸದ್ಯ ಬಹುನಿರೀಕ್ಷೆಯ ರಾಧೆ ಸಿನಿಮಾದ ಬಿಡುಗಡೆಗೆ ಸಿದ್ಧವಾಗಿದ್ದಾರೆ. ಹೆಚ್ಚುತ್ತಿರುವ ಕೊರೊನಾದಿಂದ ಚಿತ್ರಮಂದಿರದಲ್ಲಿ ಬಿಡುಗಡೆಯಾಗಬೇಕಿದ್ದ ರಾಧೆ ಈಗ ಒಟಿಟಿಯಲ್ಲಿ ತೆರೆಗೆ ಬರುತ್ತಿದೆ. ಸದ್ಯ ಟ್ರೈಲರ್ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.