Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾದ ದಿನವೇ 'ರಾಧೆ' ಸಿನಿಮಾ ಲೀಕ್; ಸಲ್ಮಾನ್ ಅಭಿಮಾನಿಗಳ ಬೇಸರ
ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷೆಯ ರಾಧೆ: ಯುವರ್ ಮೋಸ್ಟ್ ವಾಂಟೆಡ್ ಭಾಯ್ ಸಿನಿಮಾ ಈದ್ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ಕೊರೊನಾ ಹಾವಳಿಯ ನಡುವೆಯೂ ಅಭಿಮಾನಿಗಳನ್ನು ರಂಜಿಸಲು ಸಲ್ಲು ರಾಧೆ ಮೂಲಕ ಎಂಟ್ರಿ ಕೊಟ್ಟಿದ್ದಾರೆ.
ಸಲ್ಮಾನ್ ಸಿನಿಮಾ ಅಂದ್ಮೇಲೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿರುತ್ತೆ. ರಾಧೆ ನೋಡಲು ತುದಿಗಾಲಿನಲ್ಲಿ ನಿಂತಿದ್ದರು. ಆದರಂತೆ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದಂತೆ ಅಭಿಮಾನಿಗಳು ಮುಗಿಬಿದ್ದು ವೀಕ್ಷಿಸಿದ್ದಾರೆ. ಚಿತ್ರಕ್ಕೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಆದರೆ ಮೊದಲ ದಿನವೇ ರಾಧೆ ಸಿನಿಮಾ ಲೀಕ್ ಆಗಿದೆ. ಲೀಕ್ ಆಗಿರುವ ಹೆಚ್ ಡಿ ಪ್ರಿಂಟ್ ವೈರಲ್ ಆಗಿದೆ. ಲಾಕ್ ಡೌನ್ ಇರುವ ಕಡೆ ಒಟಿಟಿಯಲ್ಲಿ ಚಿತ್ರ ಬಿಡುಗಡೆ ಮಾಡಿದ್ರೆ, ಲಾಕ್ ಡೌನ್ ಇಲ್ಲದೆ ಇರುವ ಕಡೆ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ. ಆದರೆ ಮೊದಲ ದಿನವೇ ಲೀಕ್ ಆಗಿರುವುದು ಸಲ್ಲು ಅಭಿಮಾನಿಗಳಿಗೆ ಬೇಸರ ತಂದಿದೆ.
ತಮಿಳು ರಾಕರ್ಸ್ ಸೇರಿದಂತೆ ಸಾಕಷ್ಟು ವೆಬ್ ಸೈಟ್ ಗಳಲ್ಲಿ ರಾಧೆ ಸಿನಿಮಾ ಸೋರಿಕೆಯಾಗಿದೆ. ರಿಲೀಸ್ ಗು ಮೊದಲು ಸಲ್ಮಾನ್ ಖಾನ್ ಪೈರಸಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದರು. ಆದರೂ ಲೀಕ್ ಆಗಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.
ಈ ಬಗ್ಗೆ ಸಲ್ಮಾನ್ ಅಭಿಮಾನಿಗಳ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸೋರಿಕೆ ಮಾಡಿದವರ ವಿರುದ್ಧ ಸರಿಯಾದ ಕ್ರಮ ತೆಗೆದುಕೊಳ್ಳಿ ಎಂದು ಒತ್ತಾಯಿಸುತ್ತಿದ್ದಾರೆ. ರಾಧೆ ಲೀಕ್ ಆಗಿರುವ ವೆಬ್ ಸೈಟ್ ಸ್ಕ್ರೀನ್ ಶಾಟ್ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.
Recommended Video
ರಾಧೆ;ಯುವರ್ ಮೋಸ್ಟ್ ವಾಂಟೆಡ್ ಭಾಯ್ ಚಿತ್ರದಲ್ಲಿ ಸಲ್ಮಾನ್ ಖಾನ್ ಗೆ ನಾಯಕಿಯಾಗಿ ದಿಶಾ ಪಟಾನಿ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಹಿರಿಯ ನಟ ಜಾಕಿ ಶ್ರಾಪ್ ಮಿಂಚಿದ್ದಾರೆ. ಚಿತ್ರಕ್ಕೆ ಪ್ರಭುದೇವ ಆಕ್ಷನ್ ಕಟ್ ಹೇಳಿದ್ದಾರೆ.