Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವರ್ಷಕ್ಕೂ ಮುಂಚೆಯೇ ಅಭಿಮಾನಿಗಳಿಗೆ ಖುಷಿಯ ವಿಚಾರ ತಿಳಿಸಿದ ಸಲ್ಮಾನ್
ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಜಾಮೀನು ಸಿಕ್ಕ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು ಸಲ್ಮಾನ್ ಈಗ ಸುದ್ದಿ ಮಾಡುರುವುದು ಸಿನಿಮಾದ ವಿಚಾರದಲ್ಲಿ ಹೌದು ಸಲ್ಲು ಅಭಿನಯದ 'ಭರತ್' ಸಿನಿಮಾದ ಚಿತ್ರೀಕರಣ ಶುರುವಾಗಿದೆ. ಕೃಷ್ಣ ಮೃಗ ಪ್ರಕರಣದ ಮಧ್ಯೆ ಹತ್ತು ದಿನಗಳ ಕಾಲ ಸೈಲೆಂಟ್ ಆಗಿದ್ದ ಸಲ್ಮಾನ್ ಸದ್ಯ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಬಿಟೌನ್ ನಲ್ಲಿ ಹಿಟ್ ಕಾಂಬಿನೇಶನ್ ಆಗಿರುವ ಅಬ್ಬಾಸ್ ಅಲಿ ಮತ್ತು ಸಲ್ಲು ಜೋಡಿ 'ಭರತ್' ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಹಿಂದೆ. ಸುಲ್ತಾನ್ ಹಾಗೂ ಟೈಗರ್ ಜಿಂದಾ ಹೈ ಸಿನಿಮಾವನ್ನ ನಿರ್ದೇಶನ ಮಾಡಿದ್ದ ಅಬ್ಬಾಸ್ ಅಲಿ ಭರತ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. 'ಭರತ್' ಸಿನಿಮಾ ಚಿತ್ರೀಕರಣ ಸೆಟ್ ನಲ್ಲಿರುವ ಫೋಟೋವನ್ನ ನಿರ್ದೇಶಕ ಅಬ್ಬಾಸ್ ಅಲಿ ಟ್ವಿಟ್ಟರ್ ನಲ್ಲಿ ಹಾಕಿಕೊಂಡಿದ್ದಾರೆ.
ಜೈಲಿನಲ್ಲಿ ಎರಡು ರಾತ್ರಿ ಕಳೆದ ಬಳಿಕ ಮನೆಗೆ ಮರಳಿದ ಸಲ್ಮಾನ್ ಖಾನ್
ಸಲ್ಮಾನ್ ಅಭಿಮಾನಿಗಳಿಗೆ ಮುಂದಿನ ವರ್ಷ 'ಈದ್' ಹಬ್ಬಕ್ಕೆ ಭರತ್ ಸಿನಿಮಾವನ್ನ ರಿಲೀಸ್ ಮಾಡಲು ಚಿತ್ರತಂಡ ಈಗಾಗಲೇ ಪ್ಲಾನ್ ಮಾಡಿದೆ. ಇನ್ನು ಸಿನಿಮಾದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ ಎನ್ನುವುದು ತಿಳಿದು ಬಂದಿದ್ದು ಪ್ರಿಯಾಂಕ ಚೋಪ್ರ ಹಾಗೂ ಕತ್ರಿನಾ ಅಭಿನಯಿಸುವ ಸಾಧ್ಯತೆಗಳು ಹೆಚ್ಚಾಗಿವೆಯಂತೆ.
ಒಟ್ಟಾರೆ ಎಷ್ಟೇ ನೆಗೆಟಿವ್ ಸುದ್ದಿ ಆದರೂ ಕೂಡ ಸಲ್ಲು ಮಾತ್ರ ತಾನಾಯ್ತು ತನ್ನ ನಂಬಿರುವ ನಿರ್ಮಾಪಕರಾಯ್ತು ಎನ್ನುವ ನಿಟ್ಟಿನಲ್ಲಿ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿರುವುದು ಬಾಲಿವುಡ್ ನಿರ್ಮಾಪಕರಿಗೆ ಖುಷಿ ತಂದಿದೆ.