Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಲ್ಮಾನ್ ಖಾನ್ ಗೆ ಬುದ್ಧಿ ಹೇಳುವವರು ಯಾರಿದ್ದಾರೆ?
ತಮ್ಮ ಫೇವರೆಟ್ ನಟ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೂ ಶುಶ್ರೂಷೆ ತೆಗೆದುಕೊಳ್ಳದೇ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿರುವುದು ಸಲ್ಲೂ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿದೆ. ವೈದ್ಯರ ಪ್ರಕಾರ ಸಲ್ಲು ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಆದರೆ ಸಲ್ಲೂ ಅದನ್ನು ಮುಂದೂಡುತ್ತಾ ನಿರಂತರವಾಗಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಬಾಲಿವುಡ್ಡಿನಿಂದ ಬಂದ ಸುದ್ದಿ ಪ್ರಕಾರ, ಸಲ್ಲೂ ಆಕ್ಷನ್ ದೃಶ್ಯಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಅಷ್ಟೇ ಅಲ್ಲ, ಅವರಿಗೆ ಬಹಳಷ್ಟು ವಿಶ್ರಾಂತಿಯ ಅಗತ್ಯವಿದೆ. ಆದರೆ ಸಲ್ಲೂ, ವೈದ್ಯರ ಮಾತೂ ಸೇರಿ ಯಾರ ಮಾತನ್ನೂ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಅವರಿಗೆ ಯಾರಾದರೂ ಈ ಬಗ್ಗೆ ಸರಿಯಾಗಿ ಬುದ್ಧಿ ಹೇಳಿದರೆ ಒಳ್ಳೆಯದು ಎಂಬುದು ಅಭಿಮಾನಿಗಳ ಅಳಲು.
ಆದರೆ ಈ ಬಗ್ಗೆ ಸಲ್ಲೂ ಏನು ಹೇಳುತ್ತಾರೆ ಗೊತ್ತೇ? "ನನಗೆ ಆರೋಗ್ಯದಲ್ಲಿ ಸಮಸ್ಯೆ ಇರುವುದು ನಿಜ. ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳದಿರುವಂತೆ ವೈದ್ಯರು ಸೂಚಿಸಿರುವುದೂ ನಿಜ. ಆದರೆ ಅಭಿಮಾನಿಗಳು ಹಾಗೂ ಮಾಧ್ಯಮಗಳು ಅಂದುಕೊಂಡಷ್ಟು ನನಗೇನೂ ಆಗಿಲ್ಲ. ಎಲ್ಲರೂ ಆ ಬಗ್ಗೆ ಚಿಂತಿಸುವುದನ್ನು ಬಿಟ್ಟುಬಿಡಿ. ಅದನ್ನೇ ದೊಡ್ಡದು ಮಾಡಬೇಡಿ. ಸಮಸ್ಯೆಗಳ ಹೆಚ್ಚು ಯೋಚಿಸಬಾರದು" ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನನಗಿಂತ ಹೆಚ್ಚು ಸಮಸ್ಯೆಗಳಿರುವವರು ಹಾಗೂ ಒತ್ತಡದಿಂದ ಬಳಳುತ್ತಿರುವವರು ಸಾಕಷ್ಟು ಜನರಿದ್ದಾರೆ. ದಯವಿಟ್ಟು ಅವರ ಬಗ್ಗೆ ಅನುಕಂಪ ವ್ಯಕ್ತಪಡಿಸಿ, ಅವರಿಗೆ ಸಾಂತ್ವನ ಹೇಳಿ. ಅವರ ಮನಸ್ಸು ಹೊಸ ಚೈತನ್ಯ ತುಂಬಿಕೊಂಡು ಹೊಸ ಹರ್ಷದಿಂದ ಪುಟಿದೇಳುತ್ತದೆ. ನನ್ನ ಅನಾರೋಗ್ಯದ ಬಗ್ಗೆ ಹೆಚ್ಚು ಚಿಂತಿಸಬೇಡಿ, ಎಲ್ಲವೂ ಸರಿಹೋಗುತ್ತದೆ" ಎಂದು ಆಭಿಮಾನಿಗಳಿಗೆ ಧೈರ್ಯ ತುಂಬಿರುವ ಸಲ್ಲೂಗೆ 'ಭೇಷ್' ಎನ್ನಲೇಬೇಕು. (ಏಜೆನ್ಸೀಸ್)