Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿಂಗಳ ಬಳಿಕ ಮಕ್ಕಳನ್ನು ಭೇಟಿಯಾದ ಸಂತಸದಲ್ಲಿ ನಟ ಸಂಜಯ್ ದತ್
ಬಾಲಿವುಡ್ ನಟ ಸಂಜಯ್ ದತ್ ಕ್ಯಾನ್ಸರ್ ಚಿಕಿತ್ಸೆಯ ನಡುವೆಯೂ ಇತ್ತೀಚಿಗೆ ಪತ್ನಿ ಮಾನ್ಯತಾ ದತ್ ಜೊತೆ ದುಬೈಗೆ ಪ್ರಯಾಣ ಬೆಳೆಸಿದ್ದರು. ಸಂಜಯ್ ದತ್ ಚಿಕಿತ್ಸೆಯ ನಡುವೆಯೂ ಸಿನಿಮಾ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ನಡುವೆ ಸಣ್ಣ ಬ್ರೇಕ್ ಪಡೆದು ಮಕ್ಕಳಿಗಾಗಿ ದುಬೈಗೆ ಹಾರಿದ್ದರು.
ಇದೀಗ ಸಂಜಯ್ ದತ್ ತಿಂಗಳುಗಳ ಬಳಿಕ ಇಬ್ಬರು ಮುದ್ದು ಮಕ್ಕಳನ್ನು ನೋಡಿ ಮುದ್ದಾಡಿದ್ದಾರೆ. ಸಂಜಯ್ ದತ್ ಇಬ್ಬರು ಮಕ್ಕಳು ದುಬೈನಲ್ಲಿಯೇ ಇದ್ದಾರೆ. ಷಹ್ರಾನ್ ಮತ್ತು ಇಖ್ರಾ ಇಬ್ಬರು ಅವಳಿ ಮಕ್ಕಳು ಕೊರೊನಾ ಲಾಕ್ ಡೌನ್ ಗೂ ಮುಂಚೆ ತಾಯಿ ಮಾನ್ಯತಾ ಜೊತೆ ದುಬೈಗೆ ತೆರಳಿದ್ದರು. ಬಳಿಕ ಲಾಕ್ ಡೌನ್ ಆದ ಕಾರಣ ಅಲ್ಲಿಯೇ ಇರಬೇಕಾಗಿದೆ. ಮುಂದೆ ಓದಿ..
ಮಕ್ಕಳನ್ನು ಬಿಟ್ಟು ಭಾರತಕ್ಕೆ ವಾಪಸ್ ಆಗಿದ್ದ ಮಾನ್ಯತಾ
ಮಾನ್ಯತಾ ದತ್, ಸಂಜಯ್ ದತ್ ಗೆ ಕ್ಯಾನ್ಸರ್ ಇರುವುದು ಗೊತ್ತಾದ ಬಳಿಕ ಭಾರತಕ್ಕೆ ವಾಪಸ್ ಆಗಿದ್ದರು. ಆದರೆ ಮಕ್ಕಳು ದುಬೈನಲ್ಲಿಯೇ ಉಳಿದು ಕೊಳ್ಳುವಂತಾಗಿತ್ತು. ಇಬ್ಬರು ಮಕ್ಕಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದ ಸಂಜಯ್ ದತ್, ಮಕ್ಕಳ ನೋಡುವ ಸಲುವಾಗಿ ವಿಶೇಷ ವಿಮಾನದ ಮೂಲಕ ದುಬೈಗೆ ಹೋಗಿದ್ದಾರೆ.
ಕ್ಯಾನ್ಸರ್ ಬಳಿಕ ಮೊದಲ ಬಾರಿಗೆ ಅಪ್ಪನನ್ನು ನೋಡಿದ ಮಕ್ಕಳು
ಸಂಜಯ್ ದತ್ ಗೆ ಕ್ಯಾನ್ಸರ್ ಇರುವ ವಿಚಾರ ಬಹಿರಂಗವಾದ ಮೇಲೆ ಮೊದಲ ಬಾರಿಗೆ ಮಕ್ಕಳು ಅಪ್ಪನನ್ನು ನೋಡುತ್ತಿದ್ದಾರೆ. ಸದ್ಯ ಸಂಜಯ್ ದತ್, ಪತ್ನಿ ಮತ್ತು ಮಕ್ಕಳ ಜೊತೆ ದುಬೈನಲ್ಲಿ ಕಾಲಕಳೆಯುತ್ತಿದ್ದಾರೆ. ಮಕ್ಕಳ ಜೊತೆ ಇರುವ ಫೋಟೋವನ್ನು ಮಾನ್ಯತಾ ದತ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ದೇವರಿಗೆ ಧನ್ಯವಾದ ತಿಳಿಸಿದ ಮಾನ್ಯತಾ
ಫೋಟೋ ಶೇರ್ ಮಾಡಿ ಮಾನ್ಯತಾ "ಸುಂದರ ಕುಟುಂಬದ ಉಡುಗೊರೆಗಾಗಿ ನಾನು ದೇವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ದೇವರ ಬಳಿ ಯಾವುದೇ ದೂರಾಗಳಾಗಲಿ, ಮನವಿಗಳಾಗಲಿ ಇಲ್ಲ. ಯಾವಾಗಲು ಒಟ್ಟಿಗೆ ಇರುತ್ತೇವೆ" ಎಂದು ಬರೆದುಕೊಂಡಿದ್ದಾರೆ.
Recommended Video
ಮೊದಲ ಹಂತದ ಚಿಕಿತ್ಸೆ ಮುಗಿಸಿರುವ ಸಂಜಯ್ ದತ್
ಸಂಜಯ್ ದತ್ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಸದ್ಯ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊದಲ ಹಂತದ ಚಿಕಿತ್ಸೆ ಪೂರ್ಣಗೊಳಿಸಿರುವ ಸಂಜಯ್ ದತ್ ಇದೀಗ ಚಿತ್ರೀಕಣದಲ್ಲಿ ಭಾಗಿಯಾಗಿದ್ದಾರೆ. 'ಶಂಶೇರಾ' ಸಿನಿಮಾದ ಪ್ರಮುಖ ಪಾತ್ರದಲ್ಲಿ ಸಂಜಯ್ ದತ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣಕ್ಕೆ ಈಗಾಗಲೇ ದತ್ ಹಾಜರಾಗಿದ್ದಾರೆ. ಸದ್ಯ ಬ್ರೇಕ್ ಪಡೆದು ಮಕ್ಕಳನ್ನು ನೋಡಲು ದುಬೈಗೆ ಹೊರಟಿದ್ದಾರೆ.