Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ 'ಅಧೀರ' ಸಂಜಯ್ ದತ್
ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ಅಧೀರನಾಗಿರುವ ಸಂಜಯ್ ದತ್ ಈಗ ಕಣ್ಣಿಲ್ಲದ ವ್ಯಕ್ತಿಯಾಗುತ್ತಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಲಿರುವ ಐತಿಹಾಸಿಕ ಚಿತ್ರದಲ್ಲಿ ಕುರುಡನ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ.
ಹೌದು, ಅಕ್ಷಯ್ ಕುಮಾರ್ ನಟಿಸುತ್ತಿರುವ ಐತಿಹಾಸಿಕ 'ಪೃಥ್ವಿರಾಜ್' ಚಿತ್ರದಲ್ಲಿ ಸಂಜಯ್ ದತ್ ಕುರುಡನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಈಗ ಬಿಟೌನ್ ನಲ್ಲಿ ಚರ್ಚೆಯಾಗ್ತಿದೆ.
'ಪೃಥ್ವಿರಾಜ'ನ ರಾಣಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ವಿಶ್ವ ಸುಂದರಿ ಮಾನುಷಿ ಚಿಲ್ಲರ್
ಈ ಹಿಂದೆಯೇ 'ಪೃಥ್ವಿರಾಜ್' ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಖಚಿತ ಮಾಡಿದ್ದ ಸಂಜಯ್ ದತ್ ತಮ್ಮ ಪಾತ್ರದ ಬಗ್ಗೆ ಬಿಟ್ಟುಕೊಟ್ಟಿರಲಿಲ್ಲ. ಇದೀಗ, ಸಂಜಯ್ ಪಾತ್ರ ಬಹಿರಂಗವಾಗಿದ್ದು, ಅಕ್ಷಯ್ ಕುಮಾರ್ ಗೆ ಅಂಕಲ್ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ.
ಚಿತ್ರದಲ್ಲಿ ಇದು ಬಹುಮುಖ್ಯ ಪಾತ್ರಗಳಲ್ಲಿ ಒಂದಾಗಿದ್ದು, ಕಥೆಗೆ ಶಕ್ತಿ ತುಂಬಲಿದೆಯಂತೆ. ಭಾವನಾತ್ಮಕವಾಗಿಯೂ ಈ ಪಾತ್ರ ಚಿತ್ರಕ್ಕೆ ಸಾಥ್ ನೀಡಲಿದೆ ಎಂದು ಹೇಳಲಾಗುತ್ತಿದೆ.
ಅಂದ್ಹಾಗೆ, ಈ ಚಿತ್ರವನ್ನು ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶನ ಮಾಡುತ್ತಿದ್ದಾರೆ. ರಜಪೂತ ರಾಜ ಪೃಥ್ವಿರಾಜ್ ಚೌಹಣ್ ಅವರ ಜೀವನ ಆಧರಿಸಿ ಈ ಸಿನಿಮಾ ಮಾಡಲಾಗುತ್ತಿದೆ. ಅಕ್ಷಯ್ ಕುಮಾರ್ ಅವರು ಪೃಥ್ವಿರಾಜ್ ಆಗಿ ಕಾಣಿಸಿಕೊಂಡಿದ್ದಾರೆ.