Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಬೈ 'ಪಿಒಕೆ' ಎಂದು ಕಂಗನಾ ಹೇಳಿದರೂ ಬಾಲಿವುಡ್ ಯಾಕೆ ಮೌನ ವಹಿಸಿದೆ?: ಸಂಜಯ್ ರಾವತ್
ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಶಿವಸೇನೆ ನಡುವಿನ ಕಿತ್ತಾಟ ಇನ್ನೂ ಮುಂದುವರೆದಿದೆ. ಮುಂಬೈ ನಗರ 'ಪಾಕ್ ಆಕ್ರಮಿತ ಕಾಶ್ಮೀರ'ದಂತೆ ಕಾಣುತ್ತಿದೆ ಎಂದು ಹೇಳಿದ್ದ ಕಂಗನಾ ರಣಾವತ್ ವಿರುದ್ಧ ಶಿವಸೇನೆ ಕೆಂಡಕಾರುತ್ತಿದೆ. ಇದೀಗ ಶಿವಸೇನೆ ಮುಖ್ಯಸ್ಥ ಸಂಜಯ್ ರಾವತ್ ಇಡೀ ಬಾಲಿವುಡ್ ಮೌನವನ್ನು ಪ್ರಶ್ನಿಸಿದ್ದಾರೆ.
ಕಂಗನಾ ಹೇಳಿಕೆ ಬಗ್ಗೆ ಮಾತನಾಡುತ್ತ, ಅರ್ಧದಷ್ಟು ಬಾಲಿವುಡ್ ಮುಂಬೈ ರಕ್ಷಣೆಗೆ ಬರಬೇಕಿತ್ತು. ಆದರೆ ಮೌನ ವಹಿಸಿದ್ದಾರೆ. ಬಾಲಿವುಡ್ ಮೌನವನ್ನು ದ್ರೌಪದಿಯ ವಸ್ತ್ರಾಭರಣ ಸಮಯದಲ್ಲಿ ಪಾಂಡವರು ವಹಿಸಿದ ಮೌನಕ್ಕೆ ಹೋಲಿಸಿದ್ದಾರೆ. ಅಲ್ಲದೆ ಮುಂಬೈ ಹಣ ಸಂಪಾದನೆಗೆ ಮಾತ್ರನಾ ಎಂದು ಪ್ರಶ್ನಿಸಿದ್ದಾರೆ. ಇದು ಮುಂಬೈಗೆ ಮಾನಹಾನಿ ಮಾಡುವ ಪಿತೂರಿ ಎಂದು ಕಿಡಿಕಾರಿದ್ದಾರೆ.
ರಾಣಿ ಲಕ್ಷ್ಮೀಬಾಯಿ ಎಂದು ಭಾವಿಸಿದ್ದಾರೆಯೇ?: ಕಂಗನಾರನ್ನ ಅಣಕಿಸಿದ ನಟ ಪ್ರಕಾಶ್ ರೈ
ವಿಶೇಷವಾಗಿ ಅಕ್ಷಯ್ ಕುಮಾರ್ ಹೆಸರನ್ನು ಉಲ್ಲೇಖಿಸಿರುವ ಸಂಜಯ್ ರಾವತ್, ಈ ಬಗ್ಗೆ ನಟ ಅಕ್ಷಯ್ ಕುಮಾರ್ ಮಾಡನಾಡಲೇ ಬೇಕಿತ್ತು ಎಂದು ಹೇಳಿದ್ದಾರೆ. ಸಿಎಂ ಉದ್ಧವ್ ಠಾಕ್ರೆಯನ್ನು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡ ಕಂಗನಾರನ್ನು ಅನೇಕರು ಬೆಂಬಲಿಸಿದರು. ಆದರೆ ಮುಂಬೈನ ಸ್ಥಳಿಯರು ಮೌನವಾಗಿರುವುದು ಅವಮಾನ ಎಂದು ಹೇಳಿದ್ದಾರೆ.
ಕಂಗನಾ ರಣಾವತ್ ಮತ್ತು ಶಿವಸೇನೆ ನಡುವಿನ ಕಿತ್ತಾಟದಲ್ಲಿ ಕಂಗನಾ ಬಂಗಲೆಯನ್ನು ಒಡೆದು ಹಾಕಲಾಗಿದೆ. ಕಂಗನಾ ಮೇಲಿನ ಸೇಡಿಗೆ ಹೀಗೆ ಮಾಡಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ನಿರ್ಧಾರವನ್ನು ಖಂಡಿಸುತ್ತಿದ್ದಾರೆ. ಕಂಗನಾ ಹಾನಿ ಮಾಡಿದ ಕಚೇರಿಯಲ್ಲಿಯೇ ಕೆಲಸ ಮಾಡುತ್ತೀನಿ ಎಂದು ಸವಾಲ್ ಹಾಕಿದ್ದಾರೆ.
Recommended Video
ಸದ್ಯ ಮುಂಬೈನಲ್ಲಿರುವ ಕಂಗನಾ ಇಂದು ರಾಜ್ಯಪಾಲರನ್ನು ಭೇಟಿಯಾಗಿ 14ರಂದು ಮತ್ತೆ ಹಿಮಾಚಲ ಪ್ರದೇಶಕ್ಕೆ ವಾಪಸ್ ಆಗುವ ಸಾಧ್ಯತೆ ಇದೆ. ಇಂದು ರಾಜ್ಯಪಾಲರ ಬಳಿ ಕಂಗನಾ, ಶಿವಸೇನೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸುವ ಸಾದ್ಯತೆ ಇದೆ.