Don't Miss!
- News ಮನೆ ಬಾಗಿಲಿಗೆ ಹೋದರೂ ಸಿಗಲಿಲ್ಲ ಬಿಜೆಪಿ ಶಾಸಕರು, ಸಂಸದರು: ಉ.ಕನ್ನಡ ಬಿಜೆಪಿ ಅಭ್ಯರ್ಥಿ ಕಾಗೇರಿಗಿಲ್ಲ ಅಸಮಾಧಾನಿತರ ಬೆಂಬಲ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವರ್ಮಾ ಸತ್ಯ 2 ಚಿತ್ರದ ಮುನ್ನೋಟ
ರಾಮ್ ಗೋಪಾಲ್ ವರ್ಮಾ ಭೂಗತ ಜಗತ್ತಿನ ಬಗ್ಗೆ ಸಂಶೋಧನಾ ಮತ್ತು ಅಭಿವೃದ್ಧಿ ನಡೆಸುವವರಿಗೆ ಅಧಿಕೃತ ವಕ್ತಾರ ಎನ್ನಬಹುದು. ಸತ್ಯ ಎಂಬ ಚಿತ್ರದ ಮೂಲಕ ಇಡೀ ಹಿಂದಿ ಚಿತ್ರರಂಗಕ್ಕೆ ರಕ್ತದ ವಾಸನೆ, ಭೂಗತ ಜಗತ್ತಿನ ಭಯಂಕರ ಸತ್ಯಗಳು, ದೈನಂದಿನ ಬದುಕಿನ ತಲ್ಲಣಗಳ ಪರಿಚಯ ಮಾಡಿಕೊಟ್ಟ ನಿರ್ಮಾಪಕ, ನಿರ್ದೇಶಕ. ಈಗ ಈ ವಾರಂತ್ಯಕ್ಕೆ ಸತ್ಯ 2 ಚಿತ್ರವನ್ನು ಪ್ರೇಕ್ಷಕರಿಗೆ ನೀಡುತ್ತಿದ್ದಾರೆ.
ಈಗ ಸತ್ಯ ಚಿತ್ರದ ಮುಂದುವರೆದ ಭಾಗದಲ್ಲಿ ಹೊಸ ಕಥೆಯನ್ನು ಹೇಳಲಾಗುತ್ತದೆ. ಅದು ಹೊಸಬರನ್ನು ಹಾಕಿಕೊಂಡು ಹೊಸ ಧಾಟಿ ನಿರೂಪಣೆ ಇರುತ್ತದೆ ಎನ್ನಲಾಗಿದೆ. ಸತ್ಯ 2 ಟ್ರೇಲರ್ ಈಗಾಗಲೇ ತೆಲುಗು, ತಮಿಳಿನಲ್ಲಿ ಬಿಡುಗಡಯಾದ ನಂತರ ಹಿಂದಿಯಲ್ಲೂ ಕಾಣಿಸಿಕೊಂದು ಅಭಿಮಾನಿಗಳಿಗೆ ಹುಚ್ಚೆಬ್ಬಿಸಿತ್ತು. ಎಂದಿನಂತೆ ಹೊಸಬರಿಗೆ ವರ್ಮಾ ಮಣೆ ಹಾಕಿದ್ದು. ಪುನೀತ್ ಸಿಂಗ್ ಹಿಂದಿ ಆವೃತ್ತಿಯಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗಿನಲ್ಲಿ ಶರ್ವಾನಂದ್ ನಟಿಸುತ್ತಿದ್ದಾರೆ.
ಟ್ರೇಲರ್ ನಲ್ಲಿ ಹೊಸದೇನಿದೆ ಎಂದು ನೋಡಿದರೆ ಎಂದಿನಂತೆ ಮೊದಲ ದೃಶ್ಯದಲ್ಲೇ ಗಮನ ಸೆಳೆಯುವುದು ವರ್ಮಾ ಅವರ ತಂಡದ ಕೆಮೆರಾ ಕೈಚಳಕ ಹಾಗೂ ಹಿನ್ನೆಲೆ ಸಂಗೀತ ಎಂದು ಕಾಣುತ್ತದೆ.
ದಾವೂದ್ ಇಬ್ರಾಹಿಂ ನಿವೃತ್ತಿ ಹೊಂದಿದ್ದಾನೆ. ಛೋಟಾ ಶಕೀಲ್ ನಿಷ್ಕ್ರಿಯನಾಗಿದ್ದಾನೆ. ಹೀಗಾಗಿ ಭೂಗತ ಜಗತ್ತು, ರೌಡಿಸಂ ಇನ್ನಿಲ್ಲ ಎಂದು ಅನೇಕ ಜನ ತಿಳಿದಿದ್ದಾರೆ. ಆದರೆ, ಮನುಷ್ಯರಲ್ಲಿ ಆಸೆ, ಆಕಾಂಕ್ಷೆ ಇರುವ ತನಕ ಭೂಗತ ಜಗತ್ತು ಮರೆಯಾಗುವುದಿಲ್ಲ. ಭೂಗತ ಜಗತ್ತಿನ ಸ್ವರೂಪ ಬದಲಾಗಬಹುದು ಅಷ್ಟೇ ಎಂದು ಟ್ರೇಲರ್ ನಲ್ಲಿ ಹೇಳಲಾಗಿತ್ತು.
ಚರ್ಚ್ ಗೇಟ್ ರೈಲ್ವೆ ಸ್ಟೇಷನ್ ಬಳಿ ನಾಯಕನ ಪಾತ್ರಧಾರಿ ಸತ್ಯ ಬರುವ ದೃಶ್ಯ. ಡಾನ್ ಒಬ್ಬರನ್ನು ಭೇಟಿ ಮಾಡುವ ದೃಶ್ಯವಿದೆ. ದಾವೂದ್ ಇಬ್ರಾಹಿಂ, ಛೋಟಾ ಶಕೀಲ್ ಹಾಗೂ ಅಬು ಸಲೇಂ ಅವರು ಮಾಡಿದ ತಪ್ಪೆಂದರೆ ಅವರ ಕಂಪನಿಗೆ ಒಂದು ಹೆಸರು ನೀಡಿದ್ದು,ಜನ ಎಂದಿಗೂ ಕಾಣದೆ ಇರುವ ಶಕ್ತಿಗೆ ಹೆದರುವುದು ಜಾಸ್ತಿ.
ಸತ್ಯ ಈ ಚಿತ್ರದಲ್ಲಿ ಮುಂಬೈನ ಮೂರು ಪ್ರಭಾವಿ ವ್ಯಕ್ತಿಗಳನ್ನು ಕೊಲ್ಲಲು ಸಂಚು ಹೂಡುತ್ತಾನೆ. ಶ್ರೀಮಂತ ಉದ್ಯಮಿ, ಪೊಲೀಸ್ ಆಯುಕ್ತ ಹಾಗೂ ಮಾಧ್ಯಮ ಚಾನೆಲ್ ಒಡೆಯ ಅವನ ಟಾರ್ಗೆಟ್.
ಎಂದಿನಂತೆ ಈ ಕೊಲೆ ಸಂಚಿನ ನಡುವೆ ಪ್ರೇಮಕಥೆ ಇರುತ್ತದೆ. ಪ್ರೇಮಕಥೆಗೆ ಎಷ್ಟು ಮಹತ್ವ ಇದೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯುತ್ತದೆ. ಭೂಗತ ಜಗತ್ತಿನ ಹೊಸ ಆವಿಷ್ಕಾರ ಅಥವಾ ಮರುಹುಟ್ಟು ಕಾಣಬಹುದು ಎಂದಿರುವ ವರ್ಮಾಗೂ ಈಗ ಮರು ಹುಟ್ಟು ಬೇಕಿದೆ, ಸಾಲು ಸಾಲು ಫ್ಲಾಪ್ ಚಿತ್ರಗಳ ನಂತರ ವರ್ಮಾ ಅವರ ಬಹು ಯಶಸ್ವಿ ಚಿತ್ರ ಸತ್ಯ ದ ಮುಂದಿನ ಭಾಗ ಮತ್ತೊಮ್ಮೆ ಜಯ ತಂದು ಕೊಡುವುದೇ ಕಾದುನೋಡಬೇಕಿದೆ.
ಸತ್ಯ 2 ಚಿತ್ರ ಸುಮಾರು 15 ಕೋಟಿ ಬಜೆಟ್ ನಲ್ಲಿ ತಯಾರಾಗಿದೆ. ಚಿತ್ರಕ್ಕೆ ಎಂದಿನಂತೆ ಒಳ್ಳೆ ಹೈಪ್ ಇದೆ. ಅಕ್ಟೋಬರ್ 25ಕ್ಕೆ ತೆರೆ ಕಾಣಬೇಕಿದ್ದ ಚಿತ್ರ ನವೆಂಬರ್ 9ಕ್ಕೆ ಚಿತ್ರಮಂದಿರಕ್ಕೆ ಬರಲಿದೆ. ಕಾರ್ಪೊರೇಟ್ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಪುನೀತ್, ಅನೈಕ್ ಸೊಟಿ ಹಾಗೂ ಅರಾಧಾನ ಗುಪ್ತ ಅವರಿಗೆ ಈ ಚಿತ್ರ ಬ್ರೇಕ್ ನೀಡುವುದೇ ಎಂಬುದೇ ಮುಂದಿರುವ ಪ್ರಶ್ನೆ (ಐಎಎನ್ಎಸ್)