Don't Miss!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- News ಚಿಕ್ಕಬಳ್ಳಾಪುರದಲ್ಲಿ ಮತಭೇಟೆ ಆರಂಭ: ದೇವಾಂಗ ಮಠದ ದಯಾನಂದಪುರಿ ಸ್ವಾಮೀಜಿ ಭೇಟಿಯಾದ ಡಾ.ಕೆ. ಸುಧಾಕರ್
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Automobiles ಇದು ಮಹೀಂದ್ರಾ ಥಾರ್ ಹೊಸ ಅಧ್ಯಾಯ: ಸ್ವಾತಂತ್ರ್ಯ ದಿನದಂದು 5-ಡೋರ್ ಅವತಾರದಲ್ಲಿ ಲಗ್ಗೆ
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪದ್ಮಾವತ್' ನಂತರ ಬನ್ಸಾಲಿ ಆಫರ್ ತಿರಸ್ಕರಿಸಿದ ಶಾರೂಖ್: ಕಾರಣವೇನು?
ಎಲ್ಲ ಅಂದುಕೊಂಡಂತೆ ಆಗಿದ್ದರೇ, 'ಪದ್ಮಾವತ್' ಚಿತ್ರದ ನಂತರ ಸಂಜಯ್ ಲೀಲಾ ಬನ್ಸಾಲಿ ಹಾಗೂ ಬಾಲಿವುಡ್ ಬಾದ್ ಶಾ ಜೊತೆ ಸಿನಿಮಾ ಮಾಡಬೇಕಿತ್ತು. ಅರಂಭದಲ್ಲಿ ಶಾರೂಖ್ ಮತ್ತು ಬನ್ಸಾಲಿ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿಯಾಗಿ ಆಯ್ಕೆ ಮಾಡಲಾಯ್ತು.
ಇದೊಂದು ಟ್ರಯಾಂಗಲ್ ಲವ್ ಸ್ಟೋರಿಯಾಗಿಗಿದ್ದರಿಂದ ದೀಪಿಕಾ ಜೊತೆಯಲ್ಲಿ ಕಂಗನಾ ರನೌತ್ ಕೂಡ ಬನ್ಸಾಲಿ ಹಾಗೂ ಶಾರೂಖ್ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬು ಸುದ್ದಿ ಬಾಲಿವುಡ್ ನಲ್ಲಿ ಹರಿದಾಡುತ್ತಿದೆ.
ಈ ಮಧ್ಯೆ, ಬನ್ಸಾಲಿ ಚಿತ್ರವನ್ನ ಶಾರೂಖ್ ಖಾನ್ ತಿರಸ್ಕರಿಸಿದ್ದಾರೆ ಎಂಬ ಹೊಸ ಸುದ್ದಿ ಕೇಳಿ ಬರುತ್ತಿದೆ. ಚಿತ್ರದ ಸ್ಕ್ರಿಪ್ಟ್ ಇಷ್ಟವಾಗದ ಕಾರಣ ಶಾರೂಖ್ ಈ ಚಿತ್ರದಿಂದ ಹೊರಬರುತ್ತಿದ್ದಾರಂತೆ.
ಲೈಂಗಿಕ ಕಿರುಕುಳದ ಬಗ್ಗೆ ಖಾರವಾಗಿ ಮಾತನಾಡಿದ ಕಿಂಗ್ ಖಾನ್
2012 ರಲ್ಲಿ ತೆರೆಕಂಡಿದ್ದ 'ದೇವದಾಸ್' ಚಿತ್ರದಲ್ಲಿ ಬನ್ಸಾಲಿ ಮತ್ತು ಶಾರೂಖ್ ಖಾನ್ ಒಟ್ಟಿಗೆ ಅಭಿನಯಿಸಿದ್ದರು. ಮಾಧುರಿ ದೀಕ್ಷಿತ್ ಮತ್ತು ಐಶ್ವರ್ಯ ರೈ ನಾಯಕಿಯರಾಗಿದ್ದರು. 'ದೇವದಾಸ್' ಚಿತ್ರದ ನಂತರ ಮತ್ತೆ ಒಂದಾಗುತ್ತಿರುವ ಬನ್ಸಾಲಿ ಮತ್ತು ಶಾರೂಖ್ ಮತ್ತೊಂದು 'ದೇವದಾಸ್' ಅಂತಹ ಸಿನಿಮಾ ನೀಡಲಿದ್ದಾರೆ ಎಂಬ ಆಸೆ ನಿರಾಸೆಯಾಗಿದೆ.
ಸದ್ಯ, ಆನಂದ್ ಎಲ್ ರೈ ನಿರ್ದೇಶನ ಮಾಡುತ್ತಿರುವ 'ಜೀರೋ' ಚಿತ್ರದಲ್ಲಿ ಕಿಂಗ್ ಖಾನ್ ಅಭಿನಯಿಸುತ್ತಿದ್ದಾರೆ. ಬಹುಶಃ ಮುಂದಿನ ದಿನಗಳಲ್ಲಿ ಬನ್ಸಾಲಿಯ ಸ್ಕ್ರಿಪ್ಟ್ ಇಷ್ಟವಾದರೇ, ಶಾರೂಖ್ ಅಭಿನಯಿಸಬಹುದು.