Don't Miss!
- News ಡಿ ಕೆ ಶಿವಕುಮಾರ್ 9 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಆಸ್ತಿ ಬರೆಸಿಕೊಂಡವ್ರೆ ; ಹಿಂದಿನ ಸತ್ಯ ಬಿಚ್ಚಿಟ್ಟ ದೇವೇಗೌಡ್ರು
- Finance Lok Sabha Election 2024: ಡಿಜಿಲಾಕರ್ಗಾಗಿ ಡಿಜಿಟಲ್ ವೋಟರ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ಗೆ ಎಂಟ್ರಿ ಕೊಟ್ಟ ಶಾರುಖ್ ಪುತ್ರ, ಆದ್ರೆ ನಟನಾಗಿ ಅಲ್ಲ?
ಬಾಲಿವುಡ್ ನ ಸ್ಟಾರ್ ನಟ ಕಿಂಗ್ ಖಾನ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಿನಿಪಯಣದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಖಾನ್ ಪುತ್ರನ ಮೊದಲ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿಯೂ ಇದೆ. ಆದ್ರೀಗ ಅ ಕುತೂಹಲಕ್ಕೆ ಬ್ರೇಕ್ ಹಾಕಿದ್ದಾರೆ ನಟ ಶಾರುಖ್.
ದೇಶ-ವಿದೇಶದಲ್ಲಿ ಬಹುದೊಡ್ಡ ಫ್ಯಾನ್ಸ್ ಫಾಲೋವರ್ಸ್ ಹೊಂದಿರುವ ನಟ ಶಾರುಖ್ ಖಾನ್ ಮಕ್ಕಳು ಅಂದ್ಮೇಲೆ ಕುತೂಹಲ ತುಸು ಜಾಸ್ತಿಯೇ ಇರುತ್ತೆ. ಅಪ್ಪನಂತೆ ಮಕ್ಕಳಿಗೂ ಅಭಿಮಾನಿಗಳ ಸಂಖ್ಯೆ ಏನು ಕಮ್ಮಿ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಶಾರುಖ್ ಮಕ್ಕಳು ಆರ್ಯನ್ ಮತ್ತು ಸುಹಾನಾ ಖಾನ್ ಸಿನಿಮಾ ಜರ್ನಿಯ ಬಗ್ಗೆ ಆಗಾಗ ಪ್ರಶ್ನೆಗಳು ಎದುರಾಗುತ್ತಲೆ ಇದೆ.
ಎರಡನೇ ಚಿತ್ರದಲ್ಲೇ ಐತಿಹಾಸಿಕ ಪಾತ್ರ ಮಾಡಲಿದ್ದಾರೆ ಜಾಹ್ನವಿ ಕಪೂರ್
ಆದ್ರೀಗ ಶಾರುಖ್ ಮಗ ಆರ್ಯನ್ ಚಿತ್ರರಂಗದಲ್ಲಿ ಮೊದಲ ಹೆಜ್ಜೆ ಇಡಲು ಅಣಿಯಾಗಿದ್ದಾರೆ. ಆರ್ಯನ್ ನಟನಾಗಿ ಎಂಟ್ರಿ ಕೊಡುತ್ತಿಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಿಶೇಷ ಅಂದ್ರೆ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ ನಿರ್ದೇಶನದ 'ತಖ್ತ್' ಸಿನಿಮಾದಲ್ಲಿ ಆರ್ಯನ್ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಾಲಿವುಡ್ ಗೆ ಕಾಲಿಡುತ್ತಿದ್ದಾರಂತೆ.
ಈ ಹಿಂದೆ ಕೂಡ ಶಾರಖ್ ಮಗನ ಸಿನಿ ಜರ್ನಿಯ ಬಗ್ಗೆ ಹೇಳಿದ್ದರು. ಆರ್ಯನ್ ಗೆ ನಟನಾಗುವುದಕ್ಕಿಂತ ನಿರ್ದೇಶನದ ಕಡೆ ಹೆಚ್ಚು ಆಸಕ್ತಿ ಇದೇ ಹಾಗಾಗಿಯೇ ಅಮೇರಿಕಾದಲ್ಲಿ ತರಬೇತಿ ಕೂಡ ಪಡೆದು ಬಂದಿದ್ದಾರೆ ಎಂದು ಹೇಳಿದ್ರು. ಅದರಂತೆ ಆರ್ಯನ್ ಈಗ 'ತಖ್ತ್' ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗುವುದರ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುವ ಸಾಧ್ಯತೆ ಇದೆ.
'ತಖ್ತ್' ಬಾಲಿವುಡ್ ನ ಬಿಗ್ ಬಜೆಟ್ ಸಿನಿಮಾಗಳಲ್ಲಿ ಒಂದಾಗಿದೆ. ಕರೀನಾ ಕಪೂರ್ ಖಾನ್, ರಣವೀರ್ ಸಿಂಗ್, ಜಾಹ್ನವಿ ಕಪೂರ್, ವಿಕ್ಕಿ ಕೌಶಲ್, ಅನಿಲ್ ಕಪೂರ್ ಸೇರಿದಂತೆ ದೊಡ್ಡ ಕಲಾವಿದರ ದಂಡೆ ಚಿತ್ರದಲ್ಲಿದೆ. ಇವರೆಲ್ಲರಿಗೂ ಆರ್ಯನ್ ಖಾನ್ ಸಹಾಯಕ ನಿರ್ದೇಶಕನಾಗಿ ಇರ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.