Don't Miss!
- News ಯುದ್ಧದ ಬೆಂಕಿಗೆ ಕರಗಿದ ಲಕ್ಷ, ಲಕ್ಷ ಕೋಟಿ ಸಂಪತ್ತು!
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Sports KKR vs RR IPL 2024: ಟೇಬಲ್ ಟಾಪರ್ ಸ್ಥಾನಕ್ಕಾಗಿ ಹಣಾಹಣಿ; ಟಾಸ್ ವರದಿ, ಆಡುವ 11ರ ಬಳಗ
- Lifestyle ಸೌದಿಯಲ್ಲಿ ಮಳೆ, ಪ್ರವಾಹ...ಮರುಭೂಮಿ ಮರೆಯಾಗಿ ನಳನಳಿಸುವ ಹಸಿರು...! ಇದು ಹೇಗೆ ಸಾಧ್ಯ ಗೊತ್ತಾ?
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ನಟ ಶಾಹಿದ್ ಕಪೂರ್ ಹೆಸರು ಬದಲಿಸಿಕೊಂಡಿದ್ದು ಯಾಕೆ?
ಬಾಲಿವುಡ್ ನಟ ಶಾಹಿದ್ ಕಪೂರ್ ಈಗ ಇದ್ದಕ್ಕಿದ್ದ ಹಾಗೆ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಅವರ ಮುಂದಿನ ಸಿನಿಮಾ 'ಪದ್ಮಾವತಿ'.
ದೀಪಿಕಾ ಪಡುಕೋಣೆ 'ಪದ್ಮಾವತಿ' ಚಿತ್ರದ ಫಸ್ಟ್ ಲುಕ್ ಬಿಡುಗಡೆ
'ಪದ್ಮಾವತಿ' ಈ ವರ್ಷದ ಬಹು ನಿರೀಕ್ಷಿತ ಸಿನಿಮಾ. ದೀಪಿಕಾ ಪಡುಕೋಣೆ ನಟಿಸಿರುವ ಈ ಚಿತ್ರದಲ್ಲಿ ಶಾಹಿದ್ ಕಪೂರ್ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಶಾಹಿದ್ 'ರಾಜ ಮಹಾರಾವಲ್ ರತನ್ ಸಿಂಗ್' ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಶಾಹಿದ್ ಕಪೂರ್ ಈ ಪಾತ್ರವನ್ನು ತುಂಬ ಪ್ರೀತಿಸಿದ್ದಾರೆ ಅದು ಯಾವ ಮಟ್ಟಿಗೆ ಎಂದರೆ ಈಗ ಅವರು ತಮ್ಮ ಟ್ವಿಟ್ಟರ್ ಖಾತೆಗೆ 'ಮಹಾರಾವಲ್ ರತನ್ ಸಿಂಗ್' ಎಂದೇ ಹೆಸರಿಟ್ಟಿದ್ದಾರೆ. ಇನ್ನು 'ಪದ್ಮಾವತಿ' ಚಿತ್ರದ ಅವರ ರಗಡ್ ಲುಕ್ ಇತ್ತೀಚಿಗಷ್ಟೆ ಹೊರಬಂದಿದೆ.
ಬಾಲಿವುಡ್ ಚಿತ್ರರಂಗದ ಮ್ಯಾಜಿಕಲ್ ಡೈರೆಕ್ಟರ್ ಸಂಜಯ್ ಲೀಲಾ ಬನ್ಸಾಲಿ ಅವರ ಕನಸಿನ ಸಿನಿಮಾ ಇದಾಗಿದೆ. 'ರಾಮ್ ಲೀಲಾ' ಮತ್ತು 'ಬಾಜೀರಾವ್ ಮಸ್ತಾನಿ' ಚಿತ್ರಗಳ ಬಳಿಕ ಮತ್ತೆ ಬನ್ಸಾಲಿ ದೀಪಿಕಾ ಜೋಡಿ ಇಲ್ಲಿ ಒಂದಾಗಿದೆ. ರಣ್ ವೀರ್ ಸಿಂಗ್ ಮತ್ತು ಅದಿತಿ ರಾವ್ ಹೈದರಿ ಕೂಡ ಚಿತ್ರದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, 'ಪದ್ಮಾವತಿ' ಸಿನಿಮಾ ಡಿಸೆಂಬರ್ 1ಕ್ಕೆ ದೇಶಾದ್ಯಾಂತ ಬಿಡುಗಡೆ ಆಗಲಿದೆ.