Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಚಿತ್ರವನ್ನ ರೀಮೇಕ್ ಮಾಡೋಕೆ 35 ಕೋಟಿ ಚೆಕ್ ಪಡೆದಿದ್ದಾರಂತೆ ಶಾಹೀದ್.!
ತೆಲುಗು ಬ್ಲಾಕ್ ಬಸ್ಟರ್ 'ಅರ್ಜುನ್ ರೆಡ್ಡಿ' ಚಿತ್ರವನ್ನ ಹಿಂದಿಯಲ್ಲಿ ರೀಮೇಕ್ ಮಾಡಿ ಗೆದ್ದು ಬೀಗಿದ ಶಾಹೀದ್ ಕಪೂರ್, ಈಗ ಮತ್ತೊಂದು ರೀಮೇಕ್ ಚಿತ್ರಕ್ಕೆ ಸಜ್ಜಾಗಿದ್ದಾರೆ.
ಈ ಚಿತ್ರಕ್ಕಾಗಿ ಶಾಹೀದ್ ಕಪೂರ್ ಬರೋಬ್ಬರಿ 35 ಕೋಟಿ ರೂಪಾಯಿಯ ಚೆಕ್ ಪಡೆದುಕೊಂಡಿದ್ದಾರೆ ಎಂಬ ಸುದ್ದಿ ಈಗ ಬಾಲಿವುಡ್ ನಲ್ಲಿ ಸದ್ದು ಮಾಡ್ತಿದೆ. ಕಬೀರ್ ಸಿಂಗ್ ಸಿನಿಮಾದ ಒಂದು ಯಶಸ್ಸು ಶಾಹೀದ್ ಕಪೂರ್ ವೃತ್ತಿ ಜೀವನದ ದಿಕ್ಕನ್ನು ಇಷ್ಟು ದೊಡ್ಡ ಮಟ್ಟಕ್ಕೆ ಬದಲಾಯಿಸಿಬಿಡ್ತಾ ಎಂಬ ಅಚ್ಚರಿ ಈಗ ಸಾಮಾನ್ಯರನ್ನು ಕಾಡ್ತಿದೆ.
ಅಷ್ಟಕ್ಕೂ, ಶಾಹೀದ್ ಕಪೂರ್ ರೀಮೇಕ್ ಮಾಡಲು ಹೊರಟಿರುವ ಚಿತ್ರ ಯಾವುದು ಎಂದು ನೋಡಿದ್ರೆ, ತೆಲುಗಿನ ಸೂಪರ್ ಹಿಟ್ ಸಿನಿಮಾ ಜೆರ್ಸಿ. ನಾನಿ ಮತ್ತು ಶ್ರದ್ಧಾ ಶ್ರೀನಾಥ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದ ಈ ಚಿತ್ರ ದೊಡ್ಡ ಹಿಟ್ ಆಗಿತ್ತು.
ಗೌತಮ್ ತಿನ್ನಾನುರಿ ಈ ಚಿತ್ರ ನಿರ್ದೇಶನ ಮಾಡಿದ್ದರು. ಇದೀಗ, ಹಿಂದಿಯಲ್ಲೂ ಇವರೇ ನಿರ್ದೇಶನದ ಜವಾಬ್ದಾರಿಯನ್ನ ಹೊತ್ತುಕೊಂಡಿದ್ದಾರೆ. 35 ಕೋಟಿ ಚೆಕ್ ಮಾತ್ರವಲ್ಲ, ಶೇಕಡಾ 30 ರಷ್ಟು ಲಾಭವನ್ನ ಕೂಡ ಶಾಹೀದ್ ಪಡೆದುಕೊಳ್ಳಲಿದ್ದಾರೆ ಎಂದು ಬಾಲಿವುಡ್ ಚಿತ್ರ ವಿಶ್ಲೇಷಕರು ಹೇಳುತ್ತಿದ್ದಾರೆ.
ರಶ್ಮಿಕಾಗೆ ಹೊಡಿತು ಲಾಟರಿ: ಶಾಹೀದ್ ಕಪೂರ್ ಚಿತ್ರಕ್ಕೆ ಕೊಡಗಿನ ಕುವರಿ ನಾಯಕಿ!
ಬಿಟೌನ್ ನಲ್ಲಿ ಸಲ್ಮಾನ್ ಖಾನ್, ಶಾರೂಖ್ ಖಾನ್, ಅಕ್ಷಯ್ ಕುಮಾರ್ ಅಂತಹ ಸ್ಟಾರ್ ನಟರು, ಸಂಭಾವನೆ ಜೊತೆಗೆ ಚಿತ್ರದಿಂದ ಬಂದ ಲಾಭದಲ್ಲಿ ಶೇಕಡಾವಾರು ಲೆಕ್ಕದಲ್ಲಿ ಹಣ ಪಡೆಯುತ್ತಾರೆ. ಇಂತಹ ಹೊಸ ನಿಯಮವನ್ನ ಈಗ ಶಾಹೀದ್ ಕಪೂರ್ ಕೂಡ ಆರಂಭಿಸಿದ್ದಾರಂತೆ.
'ಕಬೀರ್ ಸಿಂಗ್' ನಂತರ ಮತ್ತೊಂದು ಸೌತ್ ಚಿತ್ರದ ರೀಮೇಕ್ನಲ್ಲಿ ಶಾಹೀದ್ ಕಪೂರ್.?
ಎಲ್ಲ ಅಂದುಕೊಂಡಂತೆ ಆಗಿದ್ದರೇ, ಈ ಚಿತ್ರದ ಹಿಂದಿ ರೀಮೇಕ್ ನಲ್ಲಿ ಶಾಹೀದ್ ಕಪೂರ್ ಜೊತೆ ರಶ್ಮಿಕಾ ಮಂದಣ್ಣ ನಟಿಸಬೇಕಿತ್ತು. ಕೊಡಗಿನ ಕುವರಿಗೆ ಆಫರ್ ಮಾಡಲು ಚಿತ್ರತಂಡ ಯೋಜಿಸಿದ್ದರಂತೆ. ಸದ್ಯಕ್ಕೆ ನಾಯಕಿ ಯಾರು ಎಂಬುದು ಅಂತಿಮವಾಗಿಲ್ಲ. ಮುಂದಿನ ಆಗಸ್ಟ್ ತಿಂಗಳಲ್ಲಿ ಜೆರ್ಸಿ ಹಿಂದಿ ರೀಮೇಕ್ ತೆರೆಗೆ ಬರಲಿದೆ.