Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅರ್ಜುನ್ ರೆಡ್ಡಿ' ರೀಮೇಕ್ ನಲ್ಲಿ ನಟಿಸಲು ಶಾಹಿದ್ ಕಪೂರ್ ಒಪ್ಪಿಕೊಂಡಿದ್ದು 'ಈ' ಕಾರಣಕ್ಕೆ.!
2017 ರಲ್ಲಿ ತೆರೆಕಂಡ.. ಇಡೀ ಟಾಲಿವುಡ್ ನಲ್ಲಿಯೇ ಹೊಸ ಸಂಚಲನ ಸೃಷ್ಟಿಸಿದ ಸಿನಿಮಾ 'ಅರ್ಜುನ್ ರೆಡ್ಡಿ'. ವಿಜಯ್ ದೇವರಕೊಂಡ ಹಾಗೂ ಶಾಲಿನಿ ಪಾಂಡೆ ಅಭಿನಯದ 'ಅರ್ಜುನ್ ರೆಡ್ಡಿ' ಬಾಕ್ಸ್ ಆಫೀಸ್ ನಲ್ಲಿ ಲೂಟಿ ಹೊಡೆಯಿತು.
ತೆಲುಗು ಸಿನಿ ಅಂಗಳದಲ್ಲಿ ಸೂಪರ್ ಹಿಟ್ ಆದ 'ಅರ್ಜುನ್ ರೆಡ್ಡಿ' ಸಿನಿಮಾ ಇದೀಗ ಹಿಂದಿಯಲ್ಲಿ ರೀಮೇಕ್ ಆಗುತ್ತಿದೆ. ತೆಲುಗಿನಲ್ಲಿ ವಿಜಯ್ ದೇವರಕೊಂಡ ಅಭಿನಯಿಸಿದ ಪಾತ್ರಕ್ಕೆ ಹಿಂದಿಯಲ್ಲಿ ಶಾಹಿದ್ ಕಪೂರ್ ಜೀವ ತುಂಬಲಿದ್ದಾರೆ.
'ಅರ್ಜುನ್ ರೆಡ್ಡಿ' ರೀಮೇಕ್ ನಲ್ಲಿ ನಟಿಸೋರು ಈ ಇಬ್ಬರಲ್ಲಿ ಯಾರು.?
ಅಸಲಿಗೆ, 'ಅರ್ಜುನ್ ರೆಡ್ಡಿ' ರೀಮೇಕ್ ಚಿತ್ರದಲ್ಲಿ ನಟಿಸಲು ಶಾಹಿದ್ ಕಪೂರ್ ಒಪ್ಪಿಕೊಳ್ಳಲು ಪ್ರಮುಖ ಕಾರಣ ಸಿನಿಮಾದ ಕಥೆ. ''ಅರ್ಜುನ್ ರೆಡ್ಡಿ' ಸಿನಿಮಾ ನೋಡಿದಾಗ, ನಿಜಕ್ಕೂ ನನಗೆ ಆಶ್ಚರ್ಯ ಆಯ್ತು. ಯಾಕಂದ್ರೆ, ಅದು ನಾವೆಲ್ಲ ನೋಡುವ ಮಾಮೂಲಿ ಸಿನಿಮಾ ಅಲ್ಲ. ಚಿತ್ರವನ್ನ ಉತ್ತಮವಾಗಿ ತೆರೆಗೆ ತಂದಿದ್ದಾರೆ. ಈಗ ರೀಮೇಕ್ ಹೇಗೆ ಬರುತ್ತೋ, ಗೊತ್ತಿಲ್ಲ. ಆದ್ರೆ, ಟ್ರೈ ಮಾಡುತ್ತೇವೆ. ನನಗಿದು ಉತ್ತಮ ಅವಕಾಶ'' ಎನ್ನುತ್ತಾರೆ ನಟ ಶಾಹಿದ್ ಕಪೂರ್.
'ಅರ್ಜುನ್ ರೆಡ್ಡಿ' ರಿಮೇಕ್ ನಲ್ಲಿ ನಟ ವಿಕ್ರಂ ಮಗ, ನಟಿ ಗೌತಮಿ ಮಗಳು
''ನಾಯಕನ ಪಾತ್ರದಲ್ಲಿ ಇರುವ ಭಾವನೆ ನನಗೆ ತುಂಬಾ ಇಷ್ಟ ಆಯ್ತು. ತುಂಬಾ ನೈಜವಾಗಿ ಚಿತ್ರೀಕರಣ ಮಾಡಿದ್ದಾರೆ'' ಅಂತ ಹೇಳುವ ಶಾಹಿದ್ ಕಪೂರ್ ಸದ್ಯ 'ಅರ್ಜುನ್ ರೆಡ್ಡಿ' ಹಿಂದಿ ವರ್ಷನ್ ಗಾಗಿ ಗಡ್ಡ ಬಿಡುತ್ತಿದ್ದಾರೆ.
ಟಿ-ಸೀರೀಸ್ ನಿರ್ಮಾಣ ಮಾಡುವ ಈ ಚಿತ್ರಕ್ಕೆ ಸಂದೀಪ್ ರೆಡ್ಡಿ ಆಕ್ಷನ್ ಕಟ್ ಹೇಳಲಿದ್ದಾರೆ. ಸೆಪ್ಟೆಂಬರ್ ಅಂತ್ಯಕ್ಕೆ ಚಿತ್ರೀಕರಣ ಶುರುವಾಗಲಿದ್ದು, ಮುಂದಿನ ವರ್ಷದ ಜೂನ್ ತಿಂಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.