Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತಿಯ ಬಂಧನದ ಬಗ್ಗೆ ಮೌನ ಮುರಿದ ಶಿಲ್ಪಾ: ಹೇಳಿಕೆ ಬೇಡ ಲಿಂಕ್ ಕೊಡಿ ಎನ್ನುತ್ತಿದ್ದಾರೆ ನೆಟ್ಟಿಗರು
ಬ್ಲೂ ಫಿಲ್ಮ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿ ರಾಜ್ ಕುಂದ್ರ ಬಗ್ಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಜುಲೈ 19ರಂದು ಬಂಧನಕ್ಕೊಳಗಾಗಿರುವ ಪತಿ ರಾಜ್ ಕುಂದ್ರ ಬಗ್ಗೆ ಶಿಲ್ಪಾ ಶೆಟ್ಟಿ ಯಾವುದೇ ಹೇಳಿಕೆ ಬಿಡುಗಡೆ ಮಾಡಿರಲಿಲ್ಲ. ಇತ್ತೀಚಿಗೆ ಪರೋಕ್ಷವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಪತಿಯ ಬಂಧನದ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ.
ಇತ್ತೀಚಿಗಷ್ಟೆ ಮಾಧ್ಯಮದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ನಟಿ ಶಿಲ್ಪಾ ಶೆಟ್ಟಿ, ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ತನ್ನ ಬಗ್ಗೆ ಸಾಕಷ್ಟು ಸುಳ್ಳುಸುದ್ದಿಗಳು ಹರಿದಾಡುತ್ತಿದೆ. ದಯವಿಟ್ಟು ಮಕ್ಕಳ ಸಲುವಾಗಿ, ತಮ್ಮ ಕುಟುಂಬದ ಖಾಸಗಿತನಕ್ಕೆ ಗೌರವ ನೀಡಿ ಎಂದು ಶಿಲ್ಪಾ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾಗಿ ಬರೆದುಕೊಂಡಿದ್ದಾರೆ. ಮುಂದೆ ಓದಿ..
ಶಿಲ್ಪಾ ಶೆಟ್ಟಿ ಹೇಳಿಕೆ
"ಹೌದು, ಕಳೆದ ಕೆಲವು ದಿನಗಳು ನನಗೆ ತುಂಬಾ ಸವಾಲಿನ ದಿನಗಳಾಗಿವೆ. ಪ್ರತಿಯೊಂದು ವಿಚಾರದಲ್ಲೂ. ಸಾಕಷ್ಟು ವದಂತಿಗಳು ಮತ್ತು ಆರೋಪಗಳು ಬಂದಿವೆ. ಮಾಧ್ಯಮಗಳು ನನ್ನ ಮಾನಹಾನಿ ಮಾಡುತ್ತಿವೆ. ಬಹಳಷ್ಟು ಟ್ರೋಲ್ ಮತ್ತು ಪ್ರಶ್ನೆಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. ನನಗೆ ಮಾತ್ರವಲ್ಲ ನನ್ನ ಕುಟುಂಬಕ್ಕೂ ಸಹ" ಎಂದು ಶಿಲ್ಪಾ ಶೆಟ್ಟಿ ಹೇಳಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದ ಶಿಲ್ಪಾ
ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದಿರುವ ಶಿಲ್ಪಾ "ನನ್ನ ಸ್ಟ್ಯಾಂಡ್..ನಾನು ಯಾವುದೇ ಕಾಮೆಂಟ್ ಮಾಡಲ್ಲ. ಈ ಪ್ರಕರಣದಲ್ಲಿ ತನಿಖೆ ಹಂತದಲ್ಲಿದೆ. ಅದ್ದರಿಂದ ದಯವಿಟ್ಟು ನಾನು ಹೇಳಿದ್ದೇನೆ ಅಂತ ಸುಳ್ಳು ಹೇಳಿಕೆಯನ್ನು ಪ್ರಕಟಿಸಬೇಡಿ" ಎಂದು ಕೇಳಿಕೊಂಡಿದ್ದಾರೆ.
ನನ್ನ ಖಾಸಗಿತನವನ್ನು ಗೌರವಿಸಿ
"ಕಾನೂನನ್ನು ಪಾಲಿಸುವ ಭಾರತೀಯ ನಾಗರೀಕಳಾಗಿ ಮತ್ತು ಕಳೆದ 29 ವರ್ಷಗಳಿಂದ ಶ್ರಮವಹಿಸಿ ಕೆಲಸ ಮಾಡುತ್ತಿದ್ದೇನೆ. ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನು ಯಾರಿಗೂ ಬೇಸರ ಮಾಡುವುದಿಲ್ಲ. ಆದ್ದರಿಂದ ಈ ಸಮಯದಲ್ಲಿ ಮುಖ್ಯವಾಗಿ ನನ್ನ ಕುಟುಂಬ ಮತ್ತ ನನ್ನ ಹಕ್ಕು ಮತ್ತು ಖಾಸಗಿತನವನ್ನು ಗೌರವಿಸಿ" ಎಂದು ಮನವಿ ಮಾಡಿದ್ದಾರೆ.
ಮಕ್ಕಳ ಸಲುವಾಗಿ ಕೇಳಿಕೊಳ್ಳುತ್ತಿದ್ದೇನೆ
"ನಾನು ವಿನಮ್ರವಾಗಿ ಮನವಿ ಮಾಡುತ್ತೇನೆ. ವಿಶೇಷವಾಗಿ ಒಬ್ಬ ತಾಯಿಯಾಗಿ, ನನ್ನ ಮಕ್ಕಳ ಸಲುವಾಗಿ ನಮ್ಮ ಖಾಸಗಿತನವನ್ನು ಗೌರವಿಸಿ. ಸತ್ಯಾಸತ್ಯತೆ ಪರಿಶೀಲಿಸದೆ ಅರೆಬೆಂದ ಮಾಹಿತಿಯ ಬಗ್ಗೆ ಪ್ರತಿಕ್ರಿಯಿಸಬೇಡಿ ಎಂದು ಕೇಳಿ ಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.
ಲಿಂಕ್ ಕೇಳುತ್ತಿರುವ ನೆಟ್ಟಿಗರು
ಶಿಲ್ಪಾ ಶೆಟ್ಟಿ ಹೇಳಿಕೆ ಬಿಡುಗಡೆ ಮಾಡುತ್ತಿದ್ದಂತೆ ನೆಟ್ಟಿಗರು ಲಿಂಕ್ ಕಳುಹಿಸಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ರಾಜ್ ಕುಂದ್ರ ನಿರ್ಮಾಣ ಮಾಡುತ್ತಿದ್ದ ಅಶ್ಲೀಲ ವಿಡಿಯೋಗಳ ಲಿಂಕ್ ಶೇರ್ ಮಾಡುವಂತೆ ನೆಟ್ಟಿಗರು ಪ್ರತಿಕ್ರಿಯೆ ನೀಡುತ್ತಿದ್ದಾರೆ. "ನಿಮ್ಮ ಹೇಳಿಕೆ ನಮಗೆ ಬೇಡ, ಮೊದಲು ಲಿಂಕ್ ಕೊಡಿ" ಎಂದು ಕೇಳುತ್ತಿದ್ದಾರೆ. ಸಾಕಷ್ಟು ಮಂದಿ ಕಾಮೆಂಟ್ ಮಾಡಿ ಲಿಂಕ್ ಕಳುಹಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.
ಮಾಧ್ಯಮದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಶಿಲ್ಪಾ
ಶಿಲ್ಪಾ ಶೆಟ್ಟಿ ತನ್ನ ವಿರುದ್ಧ ಮಾನಹಾನಿಕರ ವಿಷಯ ಪ್ರಕಟಿಸದಂತೆ ತಡೆಕೋರಿ ಮಾಧ್ಯಮ ಸಂಸ್ಥೆ, ಸಾಮಾಜಿಕ ಜಾಲತಾಣಗಳು ಮತ್ತು ವೆಬ್ ಸೈಟ್ ಗಳ ವಿರುದ್ಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಾನಹಾನಿಕರ ಸುದ್ದಿ ಪ್ರಕಟ ಮಾಡಿರುವ ಮಾಧ್ಯಮ ಸಂಸ್ಥೆಗಳು, ಸಾಮಾಜಿಕ ಜಾಲತಾಣಗಳು ಬೇಷರತ್ ಕ್ಷಮೆ ಕೇಳಬೇಕು, ಎಲ್ಲಾ ಮಾನಹಾನಿಕರ ವಿಷಯಗಳನ್ನು ಡಿಲೀಟ್ ಮಾಡಬೇಕು ಮತ್ತು 25 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದರು.
ಕೋರ್ಟ್ ನಲ್ಲಿ ವಿಚಾರಣೆ
ಶುಕ್ರವಾರ (ಜುಲೈ 30) ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ, ''ಪೊಲೀಸ್ ಮೂಲಗಳ ಆಧರಿಸಿದ ವರದಿಗಳನ್ನು ಮಾನಹಾನಿಕರ ಎಂದು ಹೇಳಲಾಗುವುದಿಲ್ಲ'' ಎಂದು ಅಭಿಪ್ರಾಯ ಪಟ್ಟಿದೆ. "ಶಿಲ್ಪಾ ಶೆಟ್ಟಿಯ ಬಗ್ಗೆ ಯಾರಾದರೂ ಏನಾದರೂ ಹೇಳಿದರೆ ಅದು ದೊಡ್ಡ ವಿಷಯ ಏಕೆ ಆಗುತ್ತದೆ? ಅದರಲ್ಲಿ ದೊಡ್ಡದಾಗುವಂತಹದ್ದು ಏನಿದೆ? ಇದನ್ನು ಮಾನಹಾನಿಕರ ಎಂದು ನಿರ್ಧರಿಸಲು ಸಾಧ್ಯವಿಲ್ಲ" ಎಂದಿದೆ.
ನ್ಯಾಯಾಲಯ ಪ್ರಶ್ನೆ
''ನೀವು ಸಾರ್ವಜನಿಕ ಜೀವನದಲ್ಲಿದ್ದೀರಾ ಅಂದ್ಮೇಲೆ ಇಂತಹ ಘಟನೆಗಳು ಸಹಜ. ಜನರು ನಿಮ್ಮ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಹೊಂದಿರುತ್ತಾರೆ. ಆಕೆ ಅತ್ತಳು, ಗಂಡನ ಜೊತೆ ಜಗಳವಾಡಿದಳು ಎಂದು ಯಾರಾದರೂ ಬರೆದರೆ ಅದು ಹೇಗೆ ಮಾನಹಾನಿಕರ ಎಂದು ಪರಿಗಣಿಸಲಾಗುತ್ತದೆ'' ಎಂದು ನ್ಯಾಯಾಲಯ ಕೇಳಿದೆ.
ವಿಚಾರಣೆ ಮುಂದೂಡಿದ ನ್ಯಾಯಾಲಯ
ಈ ಕೇಸ್ ಸಂಬಂಧ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯ, ಮಾನಹಾನಿ ಪ್ರಕರಣವನ್ನು ವಾದಿಸಲು ಬಯಸುವುದಾದರೆ ನಿಖರವಾದ ವಿವರಗಳೊಂದಿಗೆ ಬರಲು ವಕೀಲರಿಗೆ ಸೂಚಿಸಿದೆ. ಮೇಲೆ ಬಹಳ ಗಂಭೀರ ಪರಿಣಾಮಗಳನ್ನು ಬೀರುತ್ತದೆ" ಎಂದು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಕೋರ್ಟ್ ತಿಳಿಸಿದೆ.