Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
BREAKING: ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಬಂಧನ
ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅನ್ನು ಮುಂಬೈ ಪೊಲೀಸರು ಇಂದು (ಜುಲೈ 19) ರಾತ್ರಿ ಬಂಧಿಸಿದ್ದಾರೆ.
Recommended Video
ರಾಜ್ ಕುಂದ್ರಾ ಅನ್ನು ಅಶ್ಲೀಲ ವಿಡಿಯೋ ಚಿತ್ರೀಕರಣ ಮತ್ತು ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿಸಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ರಾಜ್ ಕುಂದ್ರಾ ಆಗಿದ್ದಾರೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ಕೆಲವು appಗಳ ಮೂಲಕ ಪಬ್ಲಿಷ್ ಮಾಡುತ್ತಿರುವ ಬಗ್ಗೆ ಕೆಲವು ತಿಂಗಳಿಂದಲೂ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೇ ರೀತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಸ್ಟಿಂಗ್ ನಿರ್ದೇಶಕನೊಬ್ಬ ಹಾಗೂ ಯುವತಿಯೊಬ್ಬರನ್ನು ಮುಂಬೈ ಪೊಲೀಸರು ಕೆಲ ದಿನಗಳ ಹಿಂದೆ ಬಂಧಿಸಿದ್ದರು.
ರಾಜ್ ಕುಂದ್ರಾ ಬಂಧನದ ಬಗ್ಗೆ ಮಾತನಾಡಿರುವ ಮುಂಬೈ ಪೊಲೀಸ್ ಕಮಿಷನರ್, ''ರಾಜ್ ಕುಂದ್ರ ವಿರುದ್ಧ ಅಗತ್ಯ ಸಾಕ್ಷ್ಯ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ'' ಎಂದಿದ್ದಾರೆ.
''ನೀಲಿ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶಿ ಸರ್ವರ್ಗಳನ್ನು ಬಳಸಿ ಮೊಬೈಲ್ ಆಪ್ಗಳಿಗೆ ಅಪ್ಲೋಡ್ ಮಾಡಲಾಗುತ್ತಿತ್ತು. ಈ ಬಗ್ಗೆ ಇದೇ ಫೆಬ್ರವರಿಯಲ್ಲಿ ಮುಂಬೈ ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕ್ರೈಂ ಬ್ರ್ಯಾಂಚ್ ಮಾಡಿದ್ದು, ಪ್ರಕರಣದ ಮುಖ್ಯ ರೂವಾರಿಯಾದ ರಾಜ್ ಕುಂದ್ರಾ ಅನ್ನು ಬಂಧಿಸಲಾಗಿದೆ'' ಎಂದಿದ್ದಾರೆ.
ಐಪಿಎಲ್ನ ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕರು ಆಗಿರುವ ರಾಜ್ ಕುಂದ್ರಾ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ವಿಚ್ಛೇಧಿತ ಪತ್ನಿಯ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿದ್ದ ರಾಜ್ ಇದೀಗ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದಾರೆ. ಈ ಹಿಂದೆ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ರಾಜ್ ಕುಂದ್ರಾ ಹೆಸರು ಕೇಳಿಬಂದು ಅವರ ಮೇಲೆ ಬ್ಯಾನ್ ಹೇರಲಾಗಿತ್ತು. ನಂತರ ಅವರು ಸುಪ್ರೀಂಕೋರ್ಟ್ಗೆ ಅಪೀಲು ಹೋಗಿ ಪ್ರಕರಣದಲ್ಲಿ ಜಯ ಸಾಧಿಸಿದ್ದರು.