Don't Miss!
- News "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸ್ನೇಹಿತನ ಜಾಮೀನು ತಿರಸ್ಕಾರ: ಮದುವೆಗಾಗಿ 10 ದಿನ ಬಿಡುಗಡೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಸ್ನೇಹಿತ ಸಿದ್ಧಾರ್ಥ್ ಪಿಥಾನಿಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ ಎಂಬ ವಿಚಾರ ಹೊರಬಿದ್ದಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಜಾಮೀನು ನೀಡಲು ಕೋರ್ಟ್ ತಿರಸ್ಕರಿಸಿದ್ದರೂ, ಮದುವೆ ಕಾರಣಕ್ಕಾಗಿ ಹತ್ತು ದಿನಗಳ ಕಾಲ ಪೆರೋಲ್ ಆಧಾರದಲ್ಲಿ ಬಿಡುಗಡೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆ ಜುಲೈ 2 ರಂದು ಮತ್ತೆ ಸಿದ್ದಾರ್ಥ್ ಪಿಥಾನಿ ನ್ಯಾಯಾಲಯಕ್ಕೆ ಶರಣಾಗಬೇಕು ಎಂಬ ಷರತ್ತು ವಿಧಿಸಿದೆ.
ಸುಶಾಂತ್ ಸಿಂಗ್ ಫ್ಲ್ಯಾಟ್ ಸ್ನೇಹಿತ ಸಿದ್ಧಾರ್ಥ್ ಬಂಧಿಸಿದ ಎನ್ಸಿಬಿ
ಮೇ 26 ರಂದು ಹೈದರಾಬಾದ್ನಲ್ಲಿ ಮುಂಬೈ ಮೂಲದ ಎನ್ಸಿಬಿ ಪೊಲೀಸರು ಸಿದ್ದಾರ್ಥ್ರನ್ನು ಬಂಧಿಸಿದ್ದರು. ಸುಶಾಂತ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸಿದ್ದಾರ್ಥ್ ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದರು.
ಸುಶಾಂತ್ ಸಿಂಗ್ ಸಾವಿಗೂ ಮುನ್ನ ಫ್ಲ್ಯಾಟ್ನಲ್ಲಿ ನಾಲ್ಕು ಜನರು ಇದ್ದರು ಎಂಬ ಮಾಹಿತಿ ಇದೆ. ಅದರಲ್ಲಿ ಸಿದ್ಧಾರ್ಥ್ ಪಿಥಾನಿ ಸಹ ಒಬ್ಬರು. ಈ ಮೊದಲೇ ಮುಂಬೈ ಪೊಲೀಸರು, ಸಿಬಿಐ ಅಧಿಕಾರಿಗಳು ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ಸಿದ್ದಾರ್ಥ್ ಪಿಥಾನಿಯನ್ನು ಹಲವು ಬಾರಿ ವಿಚಾರಣೆ ನಡೆಸಿದ್ದರು.
ಘಟನೆಯ ವಿವರ
Recommended Video
ಜೂನ್ 14, 2020ರಲ್ಲಿ ಮುಂಬೈನ ಫ್ಲ್ಯಾಟ್ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಶವ ಪತ್ತೆಯಾಗಿತ್ತು. ಅನುಮಾನಾಸ್ಪದ ಸಾವು ಎಂಬ ಕಾರಣಕ್ಕೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಸ್ನೇಹಿತರು, ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದರು. ಬಳಿಕ, ಈ ಕೇಸ್ ಸಿಬಿಐಗೆ ವರ್ಗಾವಣೆ ಆಯಿತು.