Don't Miss!
- News Actress Harshika Poonacha: ಪ್ರಹ್ಲಾದ್ ಜೋಶಿ ಭೇಟಿಯಾಗಿ ಧನ್ಯವಾದ ತಿಳಿಸಿದ ನಟಿ ಹರ್ಷಿಕಾ ದಂಪತಿ: ಸಚಿವರ ಅಭಯ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರೋಲ್ ಸಹಿಸಲಾಗದೆ ಟ್ವಿಟ್ಟರ್ ಖಾತೆ ಡಿಲೀಟ್ ಮಾಡಿದ ಸೋನಾಕ್ಷಿ ಸಿನ್ಹಾ
ಒಂದೆಡೆ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಯಾಗುತ್ತಿದ್ದರೆ, ಇನ್ನೊಂದೆಡೆ ಅನೇಕ ನಟ-ನಟಿಯರ ವಿರುದ್ಧ ಸಿನಿಮಾ ಅಭಿಮಾನಿಗಳು ವಾಗ್ದಾಳಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ, ಬಾಲಿವುಡ್ನ ಸ್ವಜನಪಕ್ಷಪಾತದ ವಿರುದ್ಧ ಕಿಡಿಕಾರುತ್ತಿರುವ ಅವರು, ಸ್ಟಾರ್ಗಳ ಮಕ್ಕಳ ಸಾಮಾಜಿಕ ಜಾಲತಾಣದ ಖಾತೆಗಳನ್ನು ಅನ್ ಫಾಲೋ ಮಾಡಲು ಆರಂಭಿಸಿದ್ದಾರೆ.
Recommended Video
ಈ ನಡುವೆ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಟ್ವಿಟ್ಟರ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ. ತಮ್ಮ ಮಾನಸಿಕ ಶಾಂತಿಗಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಇನ್ಸ್ಟಾಗ್ರಾಂಲ್ಲಿ ಅದನ್ನು ಖುಷಿಯಿಂದ ಹೇಳಿಕೊಂಡಿದ್ದಾರೆ. ಟ್ವಿಟ್ಟರ್ನಲ್ಲಿ ಅವರ ಖಾತೆಯ ಮೇಲೆ ಅನೇಕರು ಮುಗಿಬಿದ್ದಿದ್ದರು. ಇದರಿಂದ ರೋಸೆತ್ತು ಅವರು ಅಲ್ಲಿಂದ ಪಲಾಯನ ಮಾಡಿದ್ದಾರೆ. ಇನ್ಸ್ಟಾಗ್ರಾಂ ಖಾತೆಯಲ್ಲಿ ಕಾಮೆಂಟ್ಗಳನ್ನು ಪೋಸ್ಟ್ ಮಾಡದಂತೆ ನಿರ್ಬಂಧಿಸಿದ್ದಾರೆ. ಮುಂದೆ ಓದಿ...
ಬೆಂಕಿ ಉರಿಯಲಿ ನನಗೇನು?
ಟ್ವಿಟ್ಟರ್ನಲ್ಲಿ ಕೊನೆಯ ಪೋಸ್ಟ್ ಹಾಕಿದ್ದ ಸೋನಾಕ್ಷಿ, ಕೆಲವೇ ನಿಮಿಷಗಳಲ್ಲಿ ಖಾತೆಯನ್ನು ಡಿಲೀಟ್ ಮಾಡಿದ್ದಾರೆ. ತಾವು ಬರೆದ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಇನ್ಸ್ಟಾಗ್ರಾಂನಲ್ಲಿ ಅವರು ಹಂಚಿಕೊಂಡಿದ್ದಾರೆ. 'ಬೆಂಕಿ ಉರಿದರೆ ಉರಿದುಕೊಳ್ಳಲಿ, ತಾನು ಆರಾಮಾಗಿ ಇರುತ್ತೇನೆ' ಎಂದು ಅದಕ್ಕೆ ಕ್ಯಾಪ್ಷನ್ ಹಾಕಿದ್ದಾರೆ.
'ಅವರ ಕೈಗಳಲ್ಲಿ ರಕ್ತ ಅಂಟಿಕೊಂಡಿದೆ, ನಾನು ಯಾವ ಮಟ್ಟದ ಹೋರಾಟಕ್ಕೂ ಸಿದ್ಧ': ಕಂಗನಾ
ನಕಾರಾತ್ಮಕತೆ ತುಂಬಿದೆ
'ನಕಾರಾತ್ಮಕತೆಯಿಂದ ನಿಮ್ಮ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಮೊದಲ ಹೆಜ್ಜೆ ಇದು. ಈ ದಿನಗಳಲ್ಲಿ ಟ್ವಿಟ್ಟರ್ಗಿಂತ ಹೆಚ್ಚು ಬೇರೆ ಎಲ್ಲೂ ಇರಲು ಸಾಧ್ಯವಿಲ್ಲ. ನಾನು ನನ್ನ ಖಾತೆಯನ್ನು ಡಿಯಾಕ್ಟಿವೇಟ್ ಮಾಡುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ.
ಅವಾರ್ಡ್ ಫಂಕ್ಷನ್ಗಳಲ್ಲಿ ಕಡೆಗಣನೆ: ಬಾಲಿವುಡ್ ಲಾಬಿ ವಿರುದ್ಧ ಕಿಡಿಕಾರಿದ ಅಭಯ್ ಡಿಯೋಲ್
ಟ್ರೋಲ್ ಆಗಿದ್ದ ಸೋನಾಕ್ಷಿ
ಕಳೆದ ವರ್ಷ ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ 'ರಾಮಾಯಣ' ಕುರಿತಾದ ಪ್ರಶ್ನೆಗೆ ಉತ್ತರ ನೀಡಲು ಸೋನಾಕ್ಷಿ ವಿಫಲರಾಗಿದ್ದರು. ಆದರೆ ತಿಂಗಳುಗಳು ಕಳೆದರೂ ಜನರು ಅವರನ್ನು ಟ್ರೋಲ್ ಮಾಡುವುದು ಬಿಟ್ಟಿರಲಿಲ್ಲ. 'ಒಂದು ಪ್ರಾಮಾಣಿಕ ಪ್ರಮಾದಕ್ಕೆ ಐದಾರು ತಿಂಗಳು ಆದರೂ ಜನರು ನನ್ನನ್ನು ಟ್ರೋಲ್ ಮಾಡುವುದನ್ನು ಕಂಡಾಗ ನೋವಾಗುತ್ತದೆ' ಎಂದು ಸೋನಾಕ್ಷಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.
ಬಾಲಿವುಡ್ ಕೂಡ ತೊರೆಯಲಿ
ಜನರ ಹಣದಿಂದ ಬೆಳೆದವರು, ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು ಹೊಣೆಗಾರಿಕೆ. ಇವರನ್ನು ಮೆಚ್ಚಿಕೊಂಡಿದ್ದು ಇದೇ ಸಾಮಾಜಿಕ ಜಾಲತಾಣದ ಜನರು. ಈಗ ಅವರನ್ನೇ ದೂಷಿಸುವುದು ಸರಿಯಲ್ಲ. ಈಗಿನ ಸಂದರ್ಭದಲ್ಲಿ ಅವರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿರುವುದರಿಂದ ಸಿಂಪಥಿ ಸೃಷ್ಟಿಸಿಕೊಳ್ಳಲು ಈ ನಾಟಕ ಮಾಡುತ್ತಿದ್ದಾರೆ. ಒಂದು ದಿನ ಬಾಲಿವುಡ್ನ ನೆಪೋಟಿಸಂ ಸಹಿಸಲು ಆಗುತ್ತಿಲ್ಲ ಎಂದು ಬಾಲಿವುಡ್ ಕೂಡ ತೊರೆಯಲಿ ಎಂದು ಆಶಿಸುತ್ತೇನೆ ಎಂಬುದಾಗಿ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.