Don't Miss!
- News Lok Sabha Election: ಮತದಾನದ ದಿನ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಗೆ ನಟಿ ಸೋನಂ ಪ್ರತಿಕ್ರಿಯೆ
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಬಗ್ಗೆ ಹೇಳಿರುವ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟವನ್ನು ನಾಟಕವೆಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಗಾಂಧಿ ನೇತೃತ್ವದ ಸ್ವಾತಂತ್ರ್ಯ ಹೋರಾಟ ನಿಜವಾದ ಚಳುವಳಿಯಲ್ಲ, ನಾಟವಾಗಿದೆ ಎಂದು ಅನಂತ್ ಕುಮಾರ್ ಹೇಳಿದ್ದರು.
ಈ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ರಾಜಕೀಯ ವ್ಯಕ್ತಿಗಳ ವಾದ-ವಿವಾದಗಳ ನಡುವೆ ಬಾಲಿವುಡ್ ನಟಿ ಸೋನಂ ಕಪೂರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಸೋನಂ 'ಹೇ ರಾಮ್' ಎಂದು ಹೇಳಿದ್ದಾರೆ.
ಬಾಲಿವುಡ್ ನಟಿ ಸೋನಂ ಕಪೂರ್ ಗೆ 'ಭಯಾನಕ ಅನುಭವ': ಕಾರಣ ಊಬರ್.!
ಕೇವಲ ಎರಡೇ ಪದದಲ್ಲಿ ಪ್ರತಿಕ್ರಿಯೆ ನೀಡಿದರೂ, ಈ ಎರಡೇ ಪದದ ಮೂಲಕ ಎಲ್ಲವನ್ನು ಹೇಳುವ ಪ್ರಯತ್ನ ಮಾಡಿದ್ದಾರೆ. ಸೋನಂ ಟ್ವೀಟ್ ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಸೋನಂ ಹೇಳಿಕೆಗೆ ಬೆಂಬಲ ನೀಡಿದರೆ ಇನ್ನು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಸೋನಂ ಕಪೂರ್ ತಂದೆ ಅನಿಲ್ ಕಪೂರ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಇರುವ ಫೋಟೋವನ್ನು ಶೇರ್ ಮಾಡಿ ಹೇ ದಾವೂದ್, ಹೇ ರಾಮ್ ಎಂದು ಟ್ರೋಲ್ ಮಾಡುತ್ತಿದ್ದಾರೆ.
ಇನ್ನು ಕೆಲವರು ಈ ವಿಷಯದಲ್ಲಿ ಸುಮ್ಮನಿರಿ ಭಕ್ತರು ನಿಮ್ಮ ಮೇಲೆ ವಾಗ್ದಾಳಿ ನಡೆಸಬಹುದು ಎಂದು ಕಿವಿ ಮಾತು ಹೇಳುತ್ತಿದ್ದಾರೆ. ಇದು ಒಳ್ಳೆಯದು. ಆದರೆ ಇಷ್ಟು ಬೇಗ ಬದಲಾಗಿದ್ದೇಕೆ ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಸೋನಂ ಇದ್ಯಾವುದಕ್ಕು ಪ್ರತಿಕ್ರಿಯೆ ನೀಡದೆ ಹೇ ರಾಮ್ ಎಂದು ಸೈಲೆಂಟ್ ಆಗಿದ್ದಾರೆ.