Don't Miss!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ಪೊಲೀಸರಿಗೆ ನೆರವು ನೀಡಿದ ನಟ ಸೋನು ಸೂದ್
ನಟ ಸೋನು ಸೂದ್ ಕೊರೊನಾ ರೋಗಿಗಳಿಗೆ, ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಮಾತ್ರವೇ ಅಲ್ಲದೆ ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗೂ ನೆರವಿನ ಹಸ್ತ ಚಾಚುತ್ತಾ ಬಂದಿದ್ದಾರೆ.
ಕೊರೊನಾ ವಿರುದ್ಧ ಹೋರಾಟದಲ್ಲಿ ವೈದ್ಯಕೀಯ ಸಿಬ್ಬಂದಿ ಜೊತೆಗೆ ಪೊಲೀಸರೂ ಇದ್ದು ಅವರಿಗೆ ಸೋನು ಸೂದ್ ನೆರವಾಗಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಬೆಂಗಳೂರು ಪೊಲೀಸರಿಗೆ ಸೋನು ಸೂದ್ ಸಹಾಯ ಮಾಡಿದ್ದಾರೆ.
ಬೆಂಗಳೂರು ಪೊಲೀಸರ ಬಳಕೆಗೆಂದು ಆಮ್ಲಜನಕ ಸಾಂದ್ರಕ ಯಂತ್ರ (ಆಕ್ಸಿಜನ್ ಕಾನ್ಸನ್ಟ್ರೇಟರ್) ಅನ್ನು ಸೋನು ಸೂದ್ ನೀಡಿದ್ದಾರೆ. ಸೋನು ಸೂದ್ ನೀಡಿರುವ ಕಾನ್ಸನ್ಟ್ರೇಟರ್ ಅನ್ನು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಅವರು ಸ್ವೀಕರಿಸಿದ್ದಾರೆ.
ಕೊರೊನಾ ವಾರಿಯರ್ಸ್ಗಳಾಗಿರುವ ಬೆಂಗಳೂರು ಪೊಲೀಸರ ಬಳಕೆಗೆಂದು ಈ ಯಂತ್ರವನ್ನು ಸೋನು ಸೂದ್ ತಮ್ಮ ಚಾರಿಟೇಬಲ್ ವತಿಯಿಂದ ನೀಡಿದ್ದು, ಇದಕ್ಕೂ ಮುನ್ನ ಕಮಲ್ ಪಂಥ್ ಜೊತೆಗೆ ವಿಡಿಯೋ ಕಾಲ್ನಲ್ಲಿ ಮಾತನಾಡಿ ಯಂತ್ರವನ್ನು ಸ್ವೀಕರಿಸುವಂತೆ ಸೋನು ಸೂದ್ ಮನವಿ ಮಾಡಿದ್ದಾರೆ.
ಸೋನು ಸೂದ್ ಚಾರಿಟೇಬಲ್ ಟ್ರಸ್ಟ್ನ ಹಶ್ಮತ್ ಎಂಬುವರು ಕಮಲ್ ಪಂಥ್ ಅವರಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರವನ್ನು ತಲುಪಿಸಿದ್ದಾರೆ. ಈ ಯಂತ್ರಕ್ಕೆ ಈಗ ಬಹಳ ಬೇಡಿಕೆ ಇದ್ದು ಒಂದು ಯಂತ್ರ 80,000 ಕ್ಕೂ ಹೆಚ್ಚು ಬೆಲೆಯಿದೆ.
ಕರ್ನಾಟಕದಲ್ಲಿ ಅದರಲ್ಲಿಯೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ತೀವ್ರವಾಗಿ ಹೆಚ್ಚಾಗಿವೆ. ಬೆಂಗಳೂರಿನ ಕರ್ತವ್ಯ ನಿರತ ಹಲವು ಪೊಲೀಸರು ಸಹ ಕೊರೊನಾಕ್ಕೆ ತುತ್ತಾಗಿದ್ದಾರೆ. ಅದನ್ನು ಗಮನದಲ್ಲಿಟ್ಟುಕೊಂಡು ಸೋನು ಸೂದ್ ಆಮ್ಲಜನಕ ಸಾಂದ್ರಕ ಯಂತ್ರವನ್ನು ನೀಡಿದ್ದಾರೆ.
Recommended Video
ಕೊರೊನಾ ಎರಡನೇ ಅಲೆಯಲ್ಲಿ ರೋಗಿಗಳು ಆಸ್ಪತ್ರೆ ಬೆಡ್ಗಳಿಲ್ಲದೆ, ಆಮ್ಲಜನಕವಿಲ್ಲದೆ ಪರಿತಪಿಸುತ್ತಿದ್ದಾರೆ. ಸೋನು ಸೂದ್ ಅವರು ತಮ್ಮನ್ನು ಸಂಪರ್ಕಿಸಿದವರಿಗೆ ಆಸ್ಪತ್ರೆ ಬೆಡ್ ಕೊಡಿಸುವ, ಆಮ್ಲಜನಕ ಕೊಡಿಸುವ ಯತ್ನ ಮಾಡುತ್ತಿದ್ದಾರೆ. ಇದರ ಜೊತೆಗೆ ಕೆಲವು ಆಮ್ಲಜನಕ ಸಿಲಿಂಡರ್ಗಳು, ಬೆಡ್ಗಳನ್ನು ಉಚಿತವಾಗಿ ನೀಡಿ ಕಳೆದ ವರ್ಷ ಆರಂಭಿಸಿದ್ದ ತಮ್ಮ ಸಮಾಜ ಸೇವಾ ಕಾರ್ಯವನ್ನು ಮುಂದುವರೆಸಿದ್ದಾರೆ.