Don't Miss!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- News ಅರವಿಂದ್ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಬೈನಲ್ಲಿ ಸಿಲುಕಿದ ಕನ್ನಡಿಗರನ್ನು ಮನೆ ಸೇರಿಸಿದ ನಟ ಸೋನು ಸೂದ್: ಅಭಿಮಾನಿಗಳ ಮೆಚ್ಚುಗೆ
ಖ್ಯಾತ ಬಹುಭಾಷ ನಟ ಸೋನು ಸೂದ್ ಮುಂಬೈನಲ್ಲಿ ಸಿಲುಕಿದ್ದ ಕರ್ನಾಟಕದ ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ಸೇರಿಸಿದ್ದಾರೆ. ಕೊರೊನಾ ಲಾಕ್ ಡೌನ್ ನಿಂದ ವಲಸೆ ಕಾರ್ಮಿಕರ ಸಂಕಷ್ಟ ಹೇಳತೀರದಾಗಿದೆ. ಕೆಲಸ ಕಳೆದುಕೊಂಡಿರುವ ಕಾರ್ಮಿಕರು ಮನೆಗೂ ತೆರಳಲಾಗದೆ, ಊಟನೂ ಸಿಗದೆ ಪರದಾಡುತ್ತಿದ್ದಾರೆ.
ಸಾವಿರಾರು ಸಂಖ್ಯೆಯ ಕಾರ್ಮಿಕರು ಮಕ್ಕಳನ್ನು, ವಯಸ್ಸಾದವರನ್ನು ಕರೆದುಕೊಂಡು ಕಾಲ್ನಡಿಗೆಯಲ್ಲಿಯೆ ಮನೆಯ ದಾರಿ ಹಿಡಿದು ಹೊರಟಿರುವ ದೃಶ್ಯ ಕರಳುಕಿತ್ತು ಬರುವಂತ್ತಿದೆ. ಕಾರ್ಮಿಕರ ಕರುಣಾಜನಕ ಸ್ಥಿತಿಗೆ ಮರುಗಿದ ನಟ ಸೋನು ಸೂದ್ ನೆರವಿಗೆ ಬಂದಿದ್ದಾರೆ. ಸೋನು ಸೂದ್ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮುಂದೆ ಓದಿ..
ಕೊರೊನಾ ರೋಗಿಗಳ ಉಪಚಾರಕ್ಕೆ ಐಶಾರಾಮಿ ಹೋಟೆಲ್ ಬಿಟ್ಟುಕೊಟ್ಟ ಖ್ಯಾತ ವಿಲನ್
350 ಕಾರ್ಮಿಕರನ್ನು ಮನೆ ಸೇರಿಸಿದ ಸೋನು
ಕೆಲಸ ಅರಸಿ ಗುಲ್ಬರ್ಗದಿಂದ ಮುಂಬೈಗೆ ವಲಸೆ ಹೋಗಿದ್ದ ಕರ್ನಾಟಕದ ಕಾರ್ಮಿಕರನ್ನು ನಟ ಸೋನು ಸೂದ್ ಸುರಕ್ಷಿತವಾಗಿ ಮನೆಗೆ ಸೇರಿಸುವ ವ್ಯವಸ್ಥೆ ಮಾಡಿದ್ದಾರೆ. ಸ್ವತಹ ಸೋನು ಸೂದ್ ಅವರೇ ಮುಂಬೈನ ಥಾಣೆಯಿಂದ ಕಾರ್ಮಿಕರು ಹೊರಡುವ ಸ್ಥಳಕ್ಕೆ ಬಂದು ಕಾರ್ಮಿಕರನ್ನು ಬಸ್ ಹತ್ತಿಸಿ, ಊರಿಗೆ ಕಳುಹಿಸಿ ಕೊಟ್ಟಿದ್ದಾರೆ.
10 ಬಸ್ ಗಳ ವ್ಯವಸ್ಥೆ
ಒಟ್ಟು 350 ಕಾರ್ಮಿಕರನ್ನು ಕರ್ನಾಟಕದ ಗುಲ್ಬರ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ. ಕಾರ್ಮಿಕರಿಗಾಗಿ ಒಟ್ಟು 10 ಬಸ್ ಗಳ ವ್ಯವಸ್ಥೆ ಮಾಡಿದ್ದರು ಸೋನು. ಜೊತೆಗೆ ಬಸ್ ನಲ್ಲಿ ಸಾಗುವ ಕಾರ್ಮಿಕರಿಗೆ ಆಹಾರದ ಕಿಟ್ ಅನ್ನು ನೀಡಿದ್ದಾರೆ.
ಎರಡೂ ಸರ್ಕಾರದ ಅನುಮತಿ ಪಡೆದಿರುವ ನಟ
ಬಸ್ ಗಳ ಮೂಲಕ ಕಾರ್ಮಿಕರನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಕಳುಹಿಸಬೇಕಾದರೆ ಸರ್ಕಾರದ ಅನುಮತಿ ಬೇಕು. ಮಹಾರಾಷ್ಟ್ರ ಮತ್ತು ಕರ್ನಾಟಕ ಎರಡೂ ಸರ್ಕಾರದ ಅನುಮತಿ ಪಡೆದು ಕಾರ್ಮಿಕರನ್ನು ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಇದರ ಸಂಪೂರ್ಣ ಖರ್ಚನ್ನು ಸೋನು ಸೂದ್ ಅವರೆ ಭರಿಸಿದ್ದಾರೆ.
ಕೊರೊನಾ ಎದುರಿಸಲು ನಾಲ್ಕಂತಸ್ತಿನ ಕಟ್ಟಡವನ್ನೇ ಬಿಟ್ಟುಕೊಟ್ಟ ಶಾರುಖ್ ಖಾನ್
ಪ್ರತಿಯೊಬ್ಬರು ಕುಟುಂಬದ ಜೊತೆ ಇರಬೇಕು
ನಾವೆಲ್ಲರು ಈ ಜಾಗತಿಕ ಆರೋಗ್ಯ ವಿಪತ್ತನ್ನು ಎದುರಿಸುತ್ತಿರುವ ಪ್ರಸ್ತುತ ಸಮಯದಲ್ಲಿ, ಪ್ರತಿಯೊಬ್ಬ ಭಾರತೀಯರು ತಮ್ಮ ಕುಟುಂಬ ಮತ್ತು ಆತ್ಮೀಯರ ಜೊತೆ ಇರಬೇಕೆಂದು ನಾನು ಬಲವಾಗಿ ನಂಬುತ್ತೇನೆ. ವಲಸಿಗರನ್ನು 10 ಬಸ್ ಗಳಲ್ಲಿ ಮನೆಗೆ ತಲುಪಿಸಲು ಎರಡೂ ಸರ್ಕಾರದ ಅನುಮತಿ ಪಡೆದುಕೊಂಡಿದ್ದೇನೆ" ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟಕ್ಕೆ ಸಾಲು-ಸಾಲು ಸಹಾಯ ಘೋಷಿಸಿದ ಶಾರುಖ್ ಖಾನ್
ಬೇರೆ ರಾಜ್ಯ ಕಾರ್ಮಿಕರನ್ನೂ ಕಳುಹಿಸಿ ಕೊಡುತ್ತೇನೆ
"ಪುಟ್ಟ ಮಕ್ಕಳು, ವೃದ್ಧ ಪೋಷಕರು, ಸೇರಿದಂತೆ ಅನೇಕರು ರಸ್ತೆಯಲ್ಲಿ ನಡೆದುಕೊಂಡು ಹೋಗುವ ವಲಸೆಗರನ್ನು ನೋಡಲು ನಿಜಕ್ಕೂ ಕರಳು ಹಿಂಡುತ್ತಿತ್ತು. ಇನ್ನೂ ಅನೇಕ ರಾಜ್ಯದ ಕಾರ್ಮಿಕರು ಸಿಲುಕಿದ್ದಾರೆ. ಎಲ್ಲರನ್ನು ಮನೆಗೆ ಸೇರಿಸುವ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ.