Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಪ್ರಕರಣ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿಂಗ್ ಗೆ ಗೌರವ ಸಲ್ಲಿಸಿದ ದೆಹಲಿ ಮಹಾನಗರ ಪಾಲಿಕೆ
ಅಕಾಲಿಕವಾಗಿ ನಿಧನ ಹೊಂದಿದ ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ ಹುಟ್ಟುಹಬ್ಬ ನಿನ್ನೆ (ಜನವರಿ 21). ಯುವ ಪ್ರತಿಭಾವಂತ ನಟನಿಗೆ ಗೌರವ ಸಲ್ಲಿಸುವ ನಿರ್ಣಯ ಕೈಗೊಂಡಿದೆ ದೆಹಲಿ ಮಹಾನಗರ ಪಾಲಿಕೆ.
ಸುಶಾಂತ್ ಸಿಂಗ್ ರಜಪೂತ್ ಹೆಸರನ್ನು ದಕ್ಷಿಣ ದೆಹಲಿಯ ರಸ್ತೆಯೊಂದಕ್ಕೆ ಇಡಲು ಒಪ್ಪಿಗೆ ಸೂಚಿಸಲಾಗಿದೆ. ದಕ್ಷಿಣ ದೆಹಲಿಯ ಆಂಡ್ರೀವ್ಸ್ ಗಂಜ್ ನ ಮುಂದುವರೆದ ರಸ್ತೆಗೆ ಸುಶಾಂತ್ ಸಿಂಗ್ ರಜಪೂತ್ ರಸ್ತೆ ಎಂದು ಹೆಸರಿಡಲಾಗಿದೆ.
ಕಾಂಗ್ರೆಸ್ ಕೌನ್ಸಲರ್ ಅಭಿಷೇಕ್ ದತ್ ಈ ವಿಷಯ ಸ್ಪಷ್ಟಪಡಿಸಿದ್ದು, ಆರು ತಿಂಗಳ ಹಿಂದೆಯೇ ಆಂಡ್ರೀವ್ಸ್ ಗಂಜ್ ನ ರಸ್ತೆಯೊಂದಕ್ಕೆ ಸುಶಾಂತ್ ಸಿಂಗ್ ರಜಪೂತ್ ಹೆಸರಿಡುವಂತೆ ಮನವಿ ಬಂದಿತ್ತು. ಮನವಿಗೆ ಪಾಲಿಕೆ ಸದಸ್ಯರ ಒಪ್ಪಿಗೆ ಪಡೆದು ಇದೀಗ ರಸ್ತೆಗೆ ಸುಶಾಂತ್ ಸಿಂಗ್ ಹೆಸರು ಇಡಲಾಗುತ್ತಿದೆ ಎಂದಿದ್ದಾರೆ.
ಸುಶಾಂತ್ ಸಿಂಗ್ ಹೆಸರಲ್ಲಿ ಸ್ಕಾಲರ್ ಶೀಪ್ ನೀಡುವುದಾಗಿ ಸುಶಾಂತ್ ಸಹೋದರಿ ಘೋಷಣೆ ಮಾಡಿದ್ದಾರೆ. ಆಕಾಶ ಕಾಯಕ್ಕೆ ಸುಶಾಂತ್ ಸಿಂಗ್ ಹೆಸರು ಇಡುವಂತೆ ಸುಶಾಂತ್ ಅಭಿಮಾನಿಗಳು ಈ ಹಿಂದೆ ಒತ್ತಾಯಿಸಿದ್ದರು.
Recommended Video
ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ತಮ್ಮ ನಿವಾಸದಲ್ಲಿ ಮೃತರಾಗಿದ್ದರು. ಸುಶಾಂತ್ ಸಿಂಗ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸುಶಾಂತ್ ಸಾವಿನ ತನಿಖೆ ಮಾಡಿದ ಮುಂಬೈ ಪೊಲೀಸರು ಇದು ಆತ್ಮಹತ್ಯೆ ಎಂದು ವರದಿ ನೀಡಿದ್ದರು. ಪ್ರಸ್ತುತ ಸುಶಾಂತ್ ಸಾವಿನ ತನಿಖಿನ ತನಿಖೆಯನ್ನು ಸಿಬಿಐ ಮಾಡುತ್ತಿದೆ.