Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಚಿತ್ರರಂಗದ ಲೆಜೆಂಡ್ ಮಕ್ಕಳ ಜೊತೆ ಕೆಲಸ ಮಾಡಿದ ಐತಿಹಾಸಿಕ ಕ್ಷಣ': ಅಮಿತಾಬ್
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ 77ನೇ ವಯಸ್ಸಿನಲ್ಲಿಯೂ ಸಖತ್ ಆಕ್ವೀಟ್ ಆಗಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಇರುವ ಅಮಿತಾಬ್, ಇತ್ತೀಚಿಗೆ ಜಾಹಿರಾತು ಚಿತ್ರೀಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಅದೂ ದಕ್ಷಿಣ ಭಾರತದ ಸೂಪರ್ ಸ್ಟಾರ್ ಗಳ ಜೊತೆ ಎನ್ನುವುದೆ ಇಲ್ಲಿಯ ವಿಶೇಷ.
ದಕ್ಷಿಣ ಭಾರತೀಯ ಸೂಪರ್ ಸ್ಟಾರ್ ಗಳಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಟಾಲಿವುಡ್ ಸ್ಟಾರ್ ನಾಗಾರ್ಜುನ್ ಮತ್ತು ಕಾಲಿವುಡ್ ಸ್ಟಾರ್ ನಟ ಪ್ರಭು ಜೊತೆಗೆ ಅಮಿತಾಬ್ ಮತ್ತು ಪತ್ನಿ ಜಯಾ ಬಚ್ಚನ್ ಕೂಡ ಜಾಹಿರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಛೇ.. ಸುಧಾ ಮೂರ್ತಿಗೆ ಕೈಕೊಟ್ಟ 'ಈ' ಪ್ರಶ್ನೆ.! ಮನೆಯಲ್ಲಿ ನಂಗೆ ಏಟು ಬೀಳೋದು ಗ್ಯಾರೆಂಟಿ ಎಂದ ಅಮಿತಾಬ್.!
ಈ ಸ್ಟಾರ್ ನಟರು ಒಟ್ಟಿಗೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಕಾಸ್ಟ್ಯೂಮ್ ನಲ್ಲಿ ಕಂಗೊಳಿಸುತ್ತಿದ್ದಾರೆ. ಈ ಫೋಟೋವನ್ನು ಅಮಿತಾಬ್ ಬಚ್ಚನ್ ಹಂಚಿಕೊಳ್ಳುವ ಜೊತೆಗೆ ಚಿತ್ರರಂಗದ ಮೂವರು ಲೆಜೆಂಡ್ಸ್ ಮಕ್ಕಳ ಜೊತೆ ಕೆಲಸ ಮಾಡಿದ ಐತಿಹಾಸಿಕ ಕ್ಷಣ ಎಂದು ಹೇಳಿದ್ದಾರೆ.
ಈ ಬಗ್ಗೆ ಬರೆದುಕೊಂಡಿರುವ ಅಮಿತಾಬ್ "ಭಾರತೀಯ ಚಿತ್ರರಂಗದ 3 ಐಕಾನಿಕ್ ಲೆಜೆಂಡ್ಸ್, ಸೂಪರ್ ಸ್ಟಾರ್ ಮಕ್ಕಳ ಜೊತೆ ಕೆಲಸ ಮಾಡಿರುವುದು, ನನಗೆ ಮತ್ತು ಜಯಾಗೆ ಇದು ಐತಿಹಾಸಿಕ ಕ್ಷಣ. ಏನು ಗೌರವ, ಅಕ್ಕಿನೇನಿ ನಾಗೇಶ್ವರ್ ರಾವ್ ಪುತ್ರ ನಾಗಾರ್ಜುನ್, ಡಾ.ರಾಜ್ ಕುಮಾರ್ ಪುತ್ರ ಶಿವರಾಜ್ ಕುಮಾರ್ ಮತ್ತು ಶಿವಾಜಿ ಗಣೇಶನ್ ಪುತ್ರ ಪ್ರಭು" ಎಂದು ಬರೆದುಕೊಂಡಿದ್ದಾರೆ.
ಇದೊಂದು ಜ್ಯೂವೆಲರಿ ಜಾಹಿರಾತು ಇದಾಗಿದ್ದು ಈ ಮೂವರು ದಕ್ಷಿಣ ಭಾರತದ ಸ್ಟಾರ್ ನಟರು ಬಿಗ್ ಬಿ ಅಮಿತಾಬ್ ಜೊತೆ ಕಾಣಿಸಿಕೊಳ್ಳುವುದು ಇದೇ ಮೊದಲೇನಲ್ಲ. ಆದರೆ ಈ ಬಾರಿ ಅಮಿತಾಬ್ ವಿಶೇಷವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದು, ಸಂತಸ ವ್ಯಕ್ತಪಡಿಸಿದ್ದಾರೆ.