Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಅಸಮಾಧಾನ ಹೊರಹಾಕಿದ ಎಸ್ ಪಿ ಬಿ
ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಖ್ಯಾತ ಗಾಯಕ ಎಸ್ ಪಿ ಬಾಲಸುಪ್ರಬ್ರಹ್ಮಣ್ಯಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಗಾಯಕಿ ಲತಾ ಮಂಗೇಶ್ಕರ್ ಅನಾರೋಗ್ಯದ ಹಿನ್ನಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಏನೇನೋ ಸುದ್ದಿಗಳು ಹರಿದಾಡುತ್ತಿತ್ತು. ಸರಿಯಾದ ಮಾಹಿತಿ ಇಲ್ಲದೆ ಕೆಲವರು ಏನೇನೋ ಬರೆಯುತ್ತಿದ್ದರು. ಗಾಸಿಪ್ ಗಳನ್ನು ಹಬ್ಬಿಸುತ್ತಿದ್ದರು. ಈ ಬಗ್ಗೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಬೇಸರಗೊಂಡಿದ್ದಾರೆ.
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು
''ಲತಾ ಜೀ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿಯದೆ, ಕೆಲವರು ಸೋಷಿಯಲ್ ಮೀಡಿಯಾದಲ್ಲಿ ರೂಮರ್ ಹಬ್ಬಿಸುತ್ತಿದ್ದಾರೆ. ಕೆಟ್ಟ ಸುದ್ದಿ ಮಾಡುತ್ತಿದ್ದಾರೆ. ಅದು ತಪ್ಪು. ನಾನು ಅವರನ್ನು ವೈಯಕ್ತಿಕವಾಗಿ ವಿಚಾರಿಸಿದ್ದೇನೆ. ಅವರು ಆರೋಗ್ಯವಾಗಿ ಇದ್ದಾರೆ. ಅವರಿಗೆ ಲಕ್ಷಾಂತರ ಜನರ ಆಶೀರ್ವಾದ ಇದೆ.'' ಎಂದು ತಿಳಿಸಿದ್ದಾರೆ.
''ಯಾರೋ ಒಂದು ಪೋಸ್ಟ್ ಹಾಕಿದರು ಅಂತ ಅದನ್ನು ನಂಬಬೇಡಿ, ಶೇರ್ ಮಾಡಬೇಡಿ. ಅದು ಸರಿ ಅಲ್ಲ. ನಾವೆಲ್ಲ ಲತಾ ಜೀ ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡೋಣ.'' ಎಂದು ಎಸ್ ಪಿ ಬಿ ಮನವಿ ಮಾಡಿದ್ದಾರೆ.
ಅಂದಹಾಗೆ, ಲತಾ ಮಂಗೇಶ್ಕರ್ ಅವರಿಗೆ ಎದೆ ಭಾಗದಲ್ಲಿ ಸೋಂಕು ಇರುವ ಕಾರಣ ಅವರನ್ನು ನವೆಂಬರ್ 11 ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.