Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹರಿದ್ವಾರದಲ್ಲಿ ಶ್ರೀದೇವಿ ಅಸ್ತಿ ವಿಸರ್ಜನೆ
Recommended Video
ಭಾರತ ಸಿನಿಮಾರಂಗದ ಲೇಡಿ ಸೂಪರ್ ಸ್ಟಾರ್ ನಟಿ ಶ್ರೀದೇವಿ ಫೆಬ್ರವರಿ 24 ರಂದು ದುಬೈನ ಹೋಟೆಲ್ ವೊಂರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಸಾವು ಕೋಟ್ಯಾಂತರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು. ಇದೀಗ, ಶ್ರೀದೇವಿಯ ಅಸ್ತಿಯನ್ನ ಹರಿದ್ವಾರದಲ್ಲಿ ವಿಸರ್ಜನೆ ಮಾಡಲಾಗಿದೆ.
ಶ್ರೀದೇವಿ ಪತಿ ಬೋನಿ ಕಪೂರ್ ಶ್ರೀದೇವಿಯ ಅಸ್ತಿಯನ್ನ ಹರಿದ್ವಾರದಲ್ಲಿ ವಿಸರ್ಜನೆ ಮಾಡಿದ್ದಾರೆ. ಸಂಪ್ರದಾಯ ಪ್ರಕಾರ ವಿಧಿ ವಿಧಾನಗಳನ್ನ ಪೂರೈಸಿದ ನಂತರ ಗಂಗಾ ನದಿಯಲ್ಲಿ ಅಸ್ತಿ ವಿಸರ್ಜನೆ ಮಾಡಲಾಗಿದೆ.
ಹರಿದ್ವಾರದಲ್ಲಿ ಶ್ರೀದೇವಿ ಅಸ್ತಿ ವಿಸರ್ಜನ: ಚಿತ್ರಗಳಲ್ಲಿ ನೋಡಿ
ಈ ವೇಳೆ ನಟ ಬೋನಿ ಕಪೂರ್ ಸಹೋದರ ಅನಿಲ್ ಕಪೂರ್, ಡಿಸೈನರ್ ಮನೀಶ್ ಮಲ್ಹೋತ್ರ, ಅಮರ್ ಸಿಂಗ್ ಕೂಡ ಭಾಗವಹಿಸಿದ್ದರು.
ಮತ್ತೊಂದೆಡೆ ಅಗಲಿದ ಶ್ರೀದೇವಿ ಬಗ್ಗೆ ಸಾಕ್ಷ್ಯಚಿತ್ರ ನಿರ್ಮಾಣ ಮಾಡಲು ಬೋನಿ ಕಪೂರ್ ನಿರ್ಧರಿಸಿದ್ದಾರೆ. ಶೇಖರ್ ಕಪೂರ್ ಈ ಚಿತ್ರವನ್ನ ನಿರ್ದೇಶನ ಮಾಡಲಿದ್ದು, ಸ್ವತಃ ಬೋನಿ ಕಪೂರ್ ನಿರ್ಮಾಣ ಮಾಡುವ ಸಾಧ್ಯತೆ ಇದೆ. ಶೇಖರ್ ಕಪೂರ್ ಅವರು ಶ್ರೀದೇವಿ ಕುಟುಂಬಕ್ಕೆ ಆಪ್ತರಾಗಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಶ್ರೀದೇವಿ ಹೊಸ ಸಿನಿಮಾ ಸೆಟ್ಟೇರಬೇಕಿತ್ತು.!
ಶ್ರೀದೇವಿ ನಟನೆ ಮತ್ತು ಬೋನಿ ಕಪೂರ್ ನಿರ್ಮಾಣದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಸಿನಿಮಾ 'ಮಿಸ್ಟರ್ ಇಂಡಿಯಾ' ಚಿತ್ರವನ್ನ ಇವರೇ ನಿರ್ದೇಶನ ಮಾಡಿದ್ದರು. ಅದೇ ಸಲುಗೆಯಿಂದ ಈಗ ಸಾಕ್ಷ್ಯಚಿತ್ರ ಹೊರತರಲು ಸಿದ್ದತೆ ನಡೆಸಿದ್ದಾರೆ.