Don't Miss!
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಜೊತೆ ಮತ್ತೆ ರಾಮ್ ಗೋಪಾಲ್ ವರ್ಮಾ
'ರಣ್' ಚಿತ್ರದಲ್ಲಿನ ಸುದೀಪ್ ಅಭಿನಯಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಬಳಿಕ ರಾಜಮೌಳಿ ನಿರ್ದೇಶನದಲ್ಲಿ ಬಂದಂತಹ 'ಈಗ' ಚಿತ್ರ ಸುದೀಪ್ ಅವರ ವೃತ್ತಿಜೀವನದಲ್ಲಿ ಹೊಸ ತಿರುವು ನೀಡಿತು. ಈಗವರು ಮತ್ತೆ ವರ್ಮಾ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಕುತೂಹಲ ಮೂಡಿಸಿದೆ.
ಇತ್ತೀಚೆಗೆ ತಮಿಳು ಚಿತ್ರ '6 Candles' ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸುದೀಪ್, ಮತ್ತೊಮ್ಮೆ ರಾಮ್ ಗೋಪಾಲ್ ವರ್ಮಾ ಜೊತೆ ಅಭಿನಯಿಸುವುದಾಗಿ ಹೇಳಿದ್ದಾರೆ. ಏಕಕಾಲಕ್ಕೆ ಈ ಚಿತ್ರ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ನಿರ್ಮಾಣವಾಗಲಿದೆಯಂತೆ.
ಆದರೆ ಚಿತ್ರಕಥೆ ಏನು ಎಂಬ ಬಗ್ಗೆ ಅವರು ತಲೆಕೆಡಿಸಿಕೊಂಡಿಲ್ಲವಂತೆ. ಕಾರಣ ರಾಮು ಮೇಲಿಟ್ಟಿರುವ ಅಪಾರ ವಿಶ್ವಾಸ. ವರ್ಮಾ ಕಾಂಜಿಪಿಂಜಿ ಚಿತ್ರವಂತೂ ಮಾಡಲ್ಲ ಎಂಬ ನಂಬಿಕೆ ಸುದೀಪ್ ಅವರಿಗೆ ಅಪಾರವಾಗಿದೆಯಂತೆ.
ಏತನ್ಮಧ್ಯೆ ಸುದೀಪ್ ಅತಿಥಿ ಪಾತ್ರದಲ್ಲಿ ಅಭಿನಯಿಸಿರುವ 'ವರದನಾಯಕ' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಜನವರಿ ಮೊದಲ ವಾರದಲ್ಲಿ ಚಿರಂಜೀವಿ ಸರ್ಜಾ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರ ತೆರೆಕಾಣುತ್ತಿದೆ. ತೆಲುಗಿನ ಯಶಸ್ವಿ ಚಿತ್ರ ಲಕ್ಷ್ಯಂ ರೀಮೇಕ್ ವರದನಾಯಕ. (ಏಜೆನ್ಸೀಸ್)